Don't Miss!
- News ಬೈಯಪ್ಪನಹಳ್ಳಿ 'ಮೆಟ್ರೋ' ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ: ಪ್ರಯಾಣಿಕರಿಗೆ ತೊಂದರೆ
- Automobiles ಭರ್ಜರಿ ಮೈಲೇಜ್ನ ಹೈಬ್ರಿಡ್ ಮಾರುತಿ ಸ್ವಿಫ್ಟ್: ಇವಿ ಕಾರುಗಳನ್ನೂ ಹಿಂದಿಕ್ಕಲಿದೆ ಎಂದ ಭವಿಷ್ಯವಾಣಿ!
- Sports IPL 2024: ಮುಂಬೈ ಇಂಡಿಯನ್ಸ್ಗೆ ಭಾರೀ ಹಿನ್ನಡೆ; ಹಾರ್ಟ್ಬ್ರೇಕ್ ಪೋಸ್ಟ್ ಮಾಡಿದ ಸೂರ್ಯಕುಮಾರ್
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗಿನ ಜನಪ್ರಿಯ ನಟ ಕೈಕಾಲ ಸತ್ಯನಾರಾಯಣ ಸ್ಥಿತಿ ಗಂಭೀರ
ತೆಲುಗು ಚಿತ್ರರಂಗದ ಜನಪ್ರಿಯ ನಟ ಕೈಕಾಲ ಸತ್ಯನಾರಾಯಣ ಆರೋಗ್ಯ ಸ್ಥಿತಿ ಗಂಭಿರವಾಗಿದೆ. ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಅಕ್ಟೋಬರ್ 30 ರಂದು ಮನೆಯಲ್ಲಿ ಜಾರಿ ಬಿದ್ದಿದ್ದ ಕೈಕಾಲ ಸತ್ಯನಾರಾಯಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ಬಳಿಕ ಮನೆಗೆ ವಾಪಸ್ ಕರೆತರಲಾಗಿತ್ತು ಆಗಿನಿಂದಲೂ ಕೈಕಾಲ ಆರೋಗ್ಯ ಮೊದಲಿನಂತಿರಲಿಲ್ಲ. ಆ ನಂತರ ಶನಿವಾರ (ನವೆಂಬರ್ 20) ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಅವರನ್ನು ಹೈದರಾಬಾದ್ನ ಪ್ರತಿಷ್ಟಿತ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯ್ತು.
ಭಾನುವಾರವಂತೂ ಕೈಕಾಲರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೈಕಾಲ ಅವರ ಸಂಬಂಧಿಗಳು, ಸ್ನೇಹಿತರೆಲ್ಲ ಆಸ್ಪತ್ರೆಗೆ ದೌಡಾಯಿಸಿ ಅವರನ್ನು ಕಾಣುತ್ತಿದ್ದಾರೆ. ಕೆಲವು ವರದಿಗಳ ಪ್ರಕಾರ ಕೈಕಾಲರು ನಿತ್ರಾಣರಾಗಿದ್ದಾರೆ ಅವರಿಗೆ ಮಾತನಾಡಲು ಸಹ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.
ಆದರೆ ನಟ ಚಿರಂಜೀವಿ ಮಾಡಿರುವ ಟ್ವೀಟ್ ಪ್ರಕಾರ ಕೈಕಾಲರದ ಆರೋಗ್ಯ ಚೇತರಿಕೆ ಹಂತದಲ್ಲಿದೆ. ''ನಾನು ಹಿರಿಯ ನಟ ಕೈಕಾಲ ಅವರಿಗೆ ಕರೆ ಮಾಡಿ ಮಾತನಾಡಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಮನೆಗೆ ಬರಬೇಕು, ನೀವು ಮನೆಗೆ ಬಂದ ಸಂದರ್ಭವನ್ನು ನಾವೆಲ್ಲ ಖುಷಿಯಿಂದ ಸಂಭ್ರಮಿಸಬೇಕು ಎಂದೆ. ಅದಕ್ಕೆ ಗೆಲುವಿನ ಚಿಹ್ನೆ ತೋರಿಸಿದರು (ತಮ್ಸ್ಅಪ್) ಎಂದಿದ್ದಾರೆ ಎಂದಿದ್ದಾರೆ ಚಿರಂಜೀವಿ.
''ಕೈಕಾಲ ಸತ್ಯನಾರಾಯಣ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನಾನು ಆತಂಕಿತನಾದೆ. ಆದರೆ ಅವರಿಗೆ ಪ್ರಜ್ಞೆ ಬಂದಿದೆ ಎಂದು ಗೊತ್ತಾದ ಕೂಡಲೇ ಕೈಕಾಲರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಸುಬ್ಬಾರೆಡ್ಡಿ ಸಹಾಯದೊಂದಿಗೆ ಕೈಕಾಲ ಅವರೊಟ್ಟಿಗೆ ದೂರವಾಣಿ ಮೂಲಕ ಮಾತನಾಡಿದೆ. ಅವರಿಗೆ ಧೈರ್ಯ ತುಂಬುವ ಯತ್ನ ಮಾಡಿದೆ. ಅವರೊಂದಿಗೆ ಮಾತನಾಡಿದ ಬಳಿಕ ನನಗೂ ಆತ್ಮವಿಶ್ವಾಸ ಮೂಡಿದೆ. ಕೈಕಾಲ ಅವರು ಗುಣಮುಖರಾಗಿ ಬಂದೇ ಬರುತ್ತಾರೆ'' ಎಂದಿದ್ದಾರೆ ಚಿರಂಜೀವಿ.
86 ವರ್ಷದ ಕೈಕಾಲ ಸತ್ಯನಾರಾಯಣ ತೆಲುಗು ಚಿತ್ರರಂಗದ ಮೇರು ನಟರಲ್ಲಿ ಒಬ್ಬರು. ಚಿತ್ರರಂಗದ ಏಳಿಗೆಯಲ್ಲಿ ದೊಡ್ಡ ಕೊಡುಗೆ ಕೈಕಾಲ ಅವರದಿದ್ದೆ. ಈ ವರೆಗೆ ಸುಮಾರು 800 ಸಿನಿಮಾಗಳಲ್ಲಿ ಕೈಕಾಲ ಸತ್ಯನಾರಾಯಣ ನಟಿಸಿದ್ದಾರೆ. ಎನ್ಟಿಆರ್, ನಾಗೇಶ್ವರ ರಾವ್ ಕಾಲದಲ್ಲಿ ನಟನಾಗಿ ಗುರುತಿಸಿಕೊಂಡ ಕೈಕಾಲ ಸತ್ಯನಾರಾಯಣ ಹಲವು ಸಿನಿಮಾಗಳಲ್ಲಿ ನಾಯಕ ನಟನಾಗಿ ನಟಿಸಿದ್ದಾರೆ. ಆ ನಂತರ ನೂರಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ದ್ವಿತೀಯ ನಾಯಕ ಹೀಗೆ ಹಲವು ಪಾತ್ರಗಳಲ್ಲಿ ನಟಿಸಿದ್ದಾರೆ. ರಾಜಕಾರಣಿಯೂ ಆಗಿದ್ದ ಕೈಕಾಲ ಸತ್ಯನಾರಾಯಣ ತೆಲುಗು ದೇಶಂ ಪಕ್ಷದಿಂದ 1996 ರಲ್ಲಿ ಮಚಿಲಿಪಟ್ಟಣಂ ಲೋಕಸಭಾ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸಿ ಗೆದ್ದಿದ್ದರು.