Don't Miss!
- News HSRP; ಸಾರಿಗೆ ಇಲಾಖೆಯಿಂದ ಮಹತ್ವದ ಮಾಹಿತಿ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗಿನ ಖ್ಯಾತ ಹಾಸ್ಯ ನಟ ವೇಣುಗೋಪಾಲ್ ನಿಧನ
ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ಕೊಸುರಿ ವೇಣುಗೋಪಾಲ್ ನಿಧನ ಹೊಂದಿದ್ದಾರೆ. ಕೋವಿಡ್-19 ನಿಂದ ಬಳಲುತ್ತಿದ್ದ ವೇಣುಗೋಪಾಲ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ವೇಣುಗೋಪಾಲ್ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸಿದ್ದಾರೆ. ಕಳೆದ ಕೆಲವು ದಿನಗಳಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಣುಗೋಪಾಲ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಚಿತ್ರೀಕರಣ ವೇಳೆ ಕುಸಿದು ಬಿದ್ದು ಮಲಯಾಳಂ ನಟ ನಿಧನ
ವೇಣುಗೋಪಾಲ್ ಪಶ್ಚಿಮ ಗೋದಾವರಿಯ ನರಸಾಪುರದವರು. ಚಿತ್ರರಂಗಕ್ಕೆ ಕಾಲಿಡುವ ಮೊದಲು ಭಾರತದ ಆಹಾರ ನಿಗಮದಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸದ ಜೊತೆಗೆ ಸಿನಿಮಾಗಳಲ್ಲಿಯೂ ಅಭಿನಯಿಸುತ್ತಿದ್ದರು. ನಿವೃತ್ತರಾದ ಬಳಿಕ ನಟನೆಯಲ್ಲಿ ಸಕ್ರೀಯರಾಗಿದ್ದರು. ನಾಟಕ ಮತ್ತು ಸಿನಿಮಾದ ಬಗ್ಗೆ ಅಪಾರ ಅಭಿಮಾನ ಇಟ್ಟುಕೊಂಡಿದ್ದ ವೇಣುಗೋಪಾಲ್ ನಾಟಕ ಸ್ಪರ್ಧೆಗಳಲ್ಲಿಯೂ ಭಾಗವಹಿಸುತ್ತಿದ್ದರು.
'ಮರ್ಯಾದ ರಾಮಣ್ಣ', 'ಚಲೋ', 'ಪಿಲ್ಲಾ ಜಮೀನ್ದಾದ್', ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ. 'ಮರ್ಯಾದ ರಾಮಣ್ಣ' ಸಿನಿಮಾ ವೇಣುಗೋಪಾಲ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾವಾಗಿದೆ. ಸಂದರ್ಶನವೊಂದರಲ್ಲಿ ವೇಣುಗೋಪಾಲ್ 'ಮರ್ಯಾದ ರಾಮಣ್ಣ ಸಿನಿಮಾದಿಂದ ನಟನಾಗಿ ಗುರುಸಿಕೊಂಡಿದ್ದೇನೆ' ಎಂದು ಹೇಳಿದ್ದಾರೆ.