Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗಿನ ಖ್ಯಾತ ಗೀತರಚನೆಕಾರ ವೆನ್ನಲಕಂಟಿ ಹೃದಯಾಘಾತದಿಂದ ನಿಧನ
ತೆಲುಗಿನ ಖ್ಯಾತ ಗೀತರಚನೆಕಾರ ಮತ್ತು ಸಂಭಾಷಣೆಗಾರ ವೆನ್ನಲಕಂಟಿ ರಾಜೇಶ್ವರ ಪ್ರಸಾದ್ ಮಂಗಳವಾರ ಚೆನ್ನೈನ ತನ್ನ ನಿವಾಸದಲ್ಲಿ ನಿಧರಾಗಿದ್ದಾರೆ. 64 ವರ್ಷದ ವೆನ್ನಲಕಂಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
3 ದಶಕಗಳ ವೃತ್ತಿ ಜೀವನದಲ್ಲಿ ವೆನ್ನಲಕಂಟಿ ಸುಮಾರು 2000ಕ್ಕೂ ಹೆಚ್ಚು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. 300 ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಪ್ರಸಿದ್ಧಿ ಗಳಿಸಿದ್ದ ವೆನ್ನಲಕಾಂತಿ1957ರಲ್ಲಿ ನೆಲ್ಲೂರಿನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವೆನ್ನಲಕಂಟಿ ಕವನ ಬರೆಯಲು ಪ್ರಾರಂಭಿಸಿದ್ದರು
ತೆಲುಗಿನ ಖ್ಯಾತ ನಟ ನರ್ಸಿಂಗ್ ಯಾದವ್ ನಿಧನ
1986ರಲ್ಲಿ, ವೆನ್ನಲಕಂಟಿ 'ಶ್ರೀ ರಾಮಚಂದ್ರಡು' ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸುವ ಮೂಲಕ ಗೀತರಚನೆಕಾರರಾಗಿ ಪದಾರ್ಪಣೆ ಮಾಡಿದರು. ವೆನ್ನಲಕಂಟಿ ರಚನೆಯ ಅನೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ಆದಿತ್ಯ 369 ಸಿನಿಮಾ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಾಯಿತು. ಘರಾನಾ ಬುಲ್ಲೊಡು, ಸಮರಸಿಂಹರೆಡ್ಡಿ, ಕ್ರಿಮಿನಲ್, ತಕ್ಕರಿ ಡೊಂಗಾ ಸೇರಿದಂತೆ ಅನೇಕ ಪ್ರಸಿದ್ಧ ಸಿನಿಮಾಗಳಿಗೆ ಹಾಡನ್ನು ಬರೆದಿದ್ದಾರೆ.
Recommended Video
ವೆನ್ನಲಕಂಟಿ ಕೊನೆಯದಾಗಿ ನಟಿ ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿದೆ. ವೆನ್ನಲಕಂಟಿ ನಿಧನಕ್ಕೆ ತೆಲುಗು ಸಿನಿಮಾರಂಗ ಕಂಬನಿ ಮಿಡಿದಿದೆ. ವೆನ್ನಲಕಂಟಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಮಕ್ಕಳು ಸಹ ಗೀತರಚನೆಕಾರರಾಗಿ ಗುರುತಿಸಿಕೊಂಡಿದ್ದಾರೆ.