Don't Miss!
- News Kolar Lok Sabha elections: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 'ಸ್ಥಳೀಯ' V/s 'ಹೊರಗಿನವ' ಫೈಟ್!
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ ಎಫೆಕ್ಟ್: ಕ್ವಾರಂಟೈನ್ ಆದ ಮಹೇಶ್ ಬಾಬು, ಪ್ರಭಾಸ್, ರಾಮ್ ಚರಣ್
ಕೊರೊನಾ ಭೀತಿ ಹೆಚ್ಚಾಗುತ್ತಿದ್ದು, ಮನೆಯಿಂದ ಹೊರಬರದ ಸ್ಥಿತಿ ನಿರ್ಮಾಣವಾಗಿದೆ. ಕೊರೊನಾ ಸೋಂಕಿತರು ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ, ಸಾವಿರಾರು ಜನ ಕೊರೊನಾ ಸೋಂಕಿಗೆ ಬಲಿಯಾಗುತ್ತಿದ್ದಾರೆ.
ಸಿನಿ ಸೆಲೆಬ್ರಿಟಿಗಳಿಗೂ ಕೊರೊನಾ ಆತಂಕ ಎದುರಾಗಿದೆ. ಟಾಲಿವುಡ್ ಚಿತ್ರರಂಗ ಕೊರೊನಾದಿಂದ ನಲುಗಿ ಹೋಗಿದೆ. ತೆಲುಗಿನ ಖ್ಯಾತ ನಟರು ಕೊರೊನಾ ಎಫೆಕ್ಟ್ ನಿಂದ ಹೋಂ ಕ್ವಾರಂಟೈನ್ ಗೆ ಒಳಗಾದಿದ್ದಾರೆ. ಪ್ರಭಾಸ್, ಮಹೇಶ್ ಬಾಬು, ರಾಮ್ ಚರಣ್ ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ.
ರಾಧೆ ಶ್ಯಾಮ್ ಚಿತ್ರೀಕರಣದಲ್ಲಿದ್ದ ನಟ ಪ್ರಭಾಸ್ ಹೈದರಾಬಾದ್ ಗೆ ವಾಪಸ್ ಆಗಿದ್ದಾರೆ. ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಹೈದರಾಬಾದ್ ಗೆ ಮರಳುತ್ತಿದ್ದಂತೆ ಪ್ರಭಾಸ್ ಮೇಕಪ್ ಮ್ಯಾನ್ ಗೆ ಕೊರೊನಾ ಪಾಸಿಟಿವ್ ಬಂದಿರುವ ಸುದ್ದಿ ಕೇಳಿಬಂದಿದೆ. ಹಾಗಾಗಿ ನಟ ಪ್ರಭಾಸ್ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.
ಮೇಕಪ್ ಕಲಾವಿದನಿಗೆ ಕೊರೊನಾ: ಕ್ವಾರಂಟೈನ್ ಆದ ಪ್ರಭಾಸ್
ಇನ್ನು ನಟ ಮಹೇಶ್ ಬಾಬು ಕೂಡ ಕ್ವಾರಂಟೈನ್ ನಲ್ಲಿದ್ದಾರೆ. ಮಹೇಶ್ ಬಾಬು ಹೇರ್ ಸ್ಟೈಲಿಸ್ಟ್ ಗೆ ಕೊರೊನಾ ಪಾಸಿಟಿವ್ ಬಂದಿದೆ ಎನ್ನುವ ಸುದ್ದಿ ಕೇಳಿಬಂದಿದೆ. ಬಳಿಕ ನಟ ಮಹೇಶ್ ಬಾಬು ಕೂಡ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಮಹೇಶ್ ಬಾಬು ಸದ್ಯ ಸರ್ಕಾರು ಪಾರು ಪಾಟ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ತೆಲುಗಿನ ಮತ್ತೋರ್ವ ಖ್ಯಾತ ನಟ ರಾಮ್ ಚರಣ್ ಕೂಡ ಕ್ವಾರಂಟೈನ್ ಆಗಿದ್ದಾರೆ. ರಾಮ್ ಚರಣ್ ವ್ಯಾನಿಟಿ ವ್ಯಾನ್ ಡ್ರೈವರ್ ಕೊರೊನಾ ಪಾಸಿಟಿವ್ ನಿಂದ ಮೃತಪಟ್ಟಿದ್ದಾರೆ ಎನ್ನುವ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಚಾಲಕನ ನಿಧನದ ಬಳಿಕ ನಟ ರಾಮ್ ಚರಣ್ ಕೂಡ ಮನೆಯಲ್ಲೇ ಪ್ರತ್ಯೇಕವಾಗಿದ್ದಾರೆ ಎಂದು ಹೇಳಲಾಗುತ್ತಿದೆ.
Recommended Video
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾದಿಂದ ದೇಶ ನಲುಗಿಹೋಗಿದೆ. ಕಳೆದ ವರ್ಷ ಕೂಡ ಇದೇ ಪರಿಸ್ಥಿತಿ ಎದುರಾಗಿತ್ತು. ಇನ್ನೇನು ಚೇತರಿಸಿಕೊಂಡು ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದ್ದೇವೆ ಎನ್ನುವಷ್ಟೊತ್ತಿಗೆ ಎರಡನೇ ಅಲೆ ಮತ್ತಷ್ಟು ಭೀಕರವಾಗಿದೆ.