ಅಲ್ಲು ಅರ್ಜುನ್‌ಗೆ ನೊಟೀಸ್ ನೀಡಿದ ಖಡಕ್ ಕನ್ನಡಿಗ ಸಜ್ಜನರ್

ದಿಶಾ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್‌ಕೌಂಟರ್ ಮಾಡಿ ಸುದ್ದಿಯಾಗಿದ್ದ ಐಪಿಎಸ್ ಅಧಿಕಾರಿ ವಿಸಿ ಸಜ್ಜನರ್ ಈಗ ನಟ ಅಲ್ಲು ಅರ್ಜುನ್‌ಗೆ ನೊಟೀಸ್ ಜಾರಿ ಮಾಡಿದ್ದಾರೆ.

ಪ್ರಸ್ತುತ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಸಜ್ಜನರ್, ನಟ ಅಲ್ಲು ಅರ್ಜುನ್‌ ನಟಿಸಿರುವ ಜಾಹೀರಾತೊಂದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ನಟನಿಗೆ ನೊಟೀಸ್ ಜಾರಿ ಮಾಡಿದ್ದಾರೆ.

ರ್ಯಾಪಿಡೊ ಹೆಸರಿನ ಬೈಕ್ ಸಾರಿಗೆ ಸೇವೆ ಕುರಿತ ಜಾಹೀರಾತೊಂದರಲ್ಲಿ ನಟ ಅಲ್ಲು ಅರ್ಜುನ್ ನಟಿಸಿದ್ದಾರೆ. ಜಾಹೀರಾತಿನಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿನ ಬಗ್ಗೆ ವ್ಯಂಗ್ಯವಾದ ಸಂಭಾಷಣೆಯನ್ನು ಅಲ್ಲು ಅರ್ಜುನ್ ಹೇಳಿದ್ದಾರೆ. ಇದರ ವಿರುದ್ಧ ಸಾರಿಗೆ ಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ.

ಜಾಹೀರಾತಿನಲ್ಲಿ ಅಲ್ಲು ಅರ್ಜುನ್ ದೋಸೆ ಹಾಕುತ್ತಿರುತ್ತಾರೆ. ''ಒಳ್ಳೆಯ ದೋಸೆ ತಿನ್ನಬೇಕೆಂದರೆ ಎರಡೇ ಜಾಗ ಇರುವುದು. ಒಂದು ನನ್ನ ಹೋಟೆಲ್ ಇನ್ನೊಂದು ಆ ಬಸ್ಸು (ರಾಜ್ಯ ಸಾರಿಗೆ ಬಸ್ಸು). ಅಲ್ಲಿ ಮಾಮೂಲಿ ದೋಸೆಯಂತೆ ಬಸ್ಸು ಹತ್ತಿದವನನ್ನೂ ಸಹ ಕುರ್ಮಾ ಹಾಕಿ, ಕೈಮಾ ಮಾಡಿ ಮಸಾಲೆ ದೋಸೆಯಂತೆ ಮಾಡಿಬಿಡುತ್ತಾರೆ. ಯಾಕೆ ಆ ಬೇಡದ ತೊಂದರೆ, ಸುಮ್ಮನೆ ರ್ಯಾಪಿಡೊ ಬುಕ್ ಮಾಡಿಕೊಳ್ಳಿ'' ಎನ್ನುತ್ತಾರೆ ಅಲ್ಲು ಅರ್ಜುನ್.

ರಾಜ್ಯ ಸಾರಿಗೆ ಬಸ್ಸಿನ ಬಗ್ಗೆ ವ್ಯಂಗ್ಯ

ರಾಜ್ಯ ಸಾರಿಗೆ ಬಸ್ಸಿನ ಬಗ್ಗೆ ವ್ಯಂಗ್ಯ

ಜಾಹೀರಾತಿನಲ್ಲಿ ತೆಲಂಗಾಣ ರಾಜ್ಯ ಸಾರಿಗೆ ಬಸ್ಸನ್ನು ತೋರಿಸಲಾಗಿದೆ. ಬಸ್ಸಿನಲ್ಲಿ ತುಂಬಾ ಜನಜಂಗುಳಿ ಇರುವಂತೆಯೂ ಆ ಬಸ್ಸಿನ ಪ್ರಯಾಣ ಸುಖಕರವಲ್ಲ ಎಂಬ ಭಾವನೆ ಮೂಡುವಂತೆ ಚಿತ್ರಿಸಲಾಗಿದೆ. ಹಾಗೂ ಬಸ್ಸಿನ ಪ್ರಯಾಣಕ್ಕಿಂತಲೂ ರ್ಯಾಪಿಡೊ ಪ್ರಯಾಣ ಕಡಿಮೆ ವೆಚ್ಚ ಹಾಗೂ ಆರಾಮದಾಯಕ ಎಂದು ಬಿಂಬಿಸಲಾಗಿದೆ.

ಜಾಹೀರಾತಿನ ಬಗ್ಗೆ ಸಜ್ಜನರ್ ಆಕ್ಷೇಪ

ಜಾಹೀರಾತಿನ ಬಗ್ಗೆ ಸಜ್ಜನರ್ ಆಕ್ಷೇಪ

ಜಾಹೀರಾತಿನ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿ ವಿಡಿಯೋ ಬಿಡುಗಡೆ ಮಾಡಿರುವ ಸಜ್ಜನರ್, ''ಟಿಎಸ್ಆರ್‌ಟಿಸಿ ಯನ್ನು ಕೆಟ್ಟದಾಗಿ ಬಿಂಬಿಸುವ ಜಾಹೀರಾತೊಂದನ್ನು ಖಾಸಗಿ ಸಂಸ್ಥೆ ಬಿಡುಗಡೆ ಮಾಡಿದೆ. ನಿಮ್ಮ ಉತ್ಪನ್ನ ಚೆನ್ನಾಗಿದ್ದರೆ ಅದರ ಬಗ್ಗೆ ಮಾತನಾಡಿ. ಆದರೆ, ಎದುರಾಳಿ ಸಂಸ್ಥೆಯನ್ನು ಕೆಟ್ಟದಾಗಿ ಬಿಂಬಿಸುವುದು ಒಳ್ಳೆಯ ವ್ಯವಹಾರ ನೀತಿ ಅಲ್ಲ. ಜಾಹೀರಾತಿನಲ್ಲಿ ನಟಿಸಿರುವ ನಟ ಸಹ ಅದನ್ನು ಗಮನಿಸಬೇಕಾಗಿತ್ತು'' ಎಂದಿದ್ದಾರೆ ಸಜ್ಜನರ್.

ದಶಕಗಳಿಂದಲೂ ಪ್ರಜೆಗಳಿಗೆ ಸೇವೆ ಸಲ್ಲಿಸುತ್ತಿದೆ: ಸಜ್ಜನರ್

ದಶಕಗಳಿಂದಲೂ ಪ್ರಜೆಗಳಿಗೆ ಸೇವೆ ಸಲ್ಲಿಸುತ್ತಿದೆ: ಸಜ್ಜನರ್

''ಟಿಎಸ್‌ಆರ್‌ಟಿಸಿಯು ದಶಕಗಳಿಂದಲೂ ಪ್ರಜೆಗಳಿಗೆ ಸೇವೆ ಸಲ್ಲಿಸುತ್ತಿದೆ. ರಾಜ್ಯದ ಮೂಲೆ-ಮೂಲೆಗಳಲ್ಲಿಯೂ ನಮ್ಮ ಸೇವೆ ಇದೆ. ಬಡವರಿಗಾಗಿ, ಮಧ್ಯಮವರ್ಗದ ಜನರಿಗಾಗಿಯೆಂದು ನಾವು ಸೇವೆ ನೀಡುತ್ತಿದ್ದೇವೆ. ಇಂಥಹಾ ಸಂಸ್ಥೆಯ ಬಗ್ಗೆ ಕೆಟ್ಟದಾಗಿ ಬಿಂಬಿಸಿರುವುದು ಸರಿಯಲ್ಲ. ಆ ಜಾಹೀರಾತನ್ನು ಕೂಡಲೇ ಹಿಂಪಡೆಯಬೇಕು ಎಂದು ನಾವು ನೊಟೀಸ್ ನೀಡಿದ್ದೇವೆ'' ಎಂದು ಸಜ್ಜನರ್ ಹೇಳಿದ್ದಾರೆ.

ನಟರು ಯೋಚಿಸಿ ನಿರ್ಣಯ ತೆಗೆದುಕೊಳ್ಳಬೇಕು: ಸಜ್ಜನರ್

ನಟರು ಯೋಚಿಸಿ ನಿರ್ಣಯ ತೆಗೆದುಕೊಳ್ಳಬೇಕು: ಸಜ್ಜನರ್

''ನಟರು ಸಹ ಈ ರೀತಿಯ ಜಾಹೀರಾತುಗಳು, ಸಿನಿಮಾಗಳಲ್ಲಿ ನಟಿಸುವಾಗ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ನಟರು, ಕ್ರೀಡಾ ಸೆಲೆಬ್ರಿಟಿಗಳು ಜನರ ಆಲೋಚನೆಗಳ ಮೇಲೆ ಪ್ರಭಾವ ಬೀರುವ ಶಕ್ತಿಯುಳ್ಳವರಾಗಿರುತ್ತಾರೆ. ಅವರು ಹೇಳಿದರೆ ಜನರು ಅದನ್ನು ಕೇಳುತ್ತಾರೆ. ಅಂಥಹವರೇ ಹೀಗೆ ಜನರು ದಿಕ್ಕು ತಪ್ಪುವಂತೆ ಮಾಡಬಾರದು. ನಮಗೆ ಯಾರ ಮೇಲೂ ವೈಯಕ್ತಿಕ ದ್ವೇಷವಿಲ್ಲ ಆದರೆ ನಮ್ಮ ಸಂಸ್ಥೆಯನ್ನು ಹೀಗೆ ಕೀಳಾಗಿ ತೋರಿಸಿದ್ದರಿಂದ ನಾವು ನೋಟೀಸ್ ನೀಡಿದ್ದೇವೆ. ಸೆಲೆಬ್ರಿಟಿಗಳು ಒಂದೊಳ್ಳೆ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು'' ಎಂದು ಸಜ್ಜನರ್ ಹೇಳಿದ್ದಾರೆ.

More from Filmibeat

English summary
TSRTC sends notice to actor Allu Arjun and Rapido company for showing TSRTC service in bad light.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X