Don't Miss!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- News ಬೆಂಗಳೂರಿನ ಜನತೆಗೆ ಬಾಂಬು..ಮತಾಂಧರಿಗೆ ಕೊಂಬು: ಚೊಂಬು ಜಾಹೀರಾತಿಗೆ ಆರ್.ಅಶೋಕ್ ಗುಡುಗು
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಬ್ಬ ಧಾರಾವಾಹಿ ನಟನಿಗೆ ಕೊರೊನಾ ಪಾಸಿಟಿವ್
ತೆಲುಗಿನ ಧಾರಾವಾಹಿ ನಟರು ಒಬ್ಬರ ಹಿಂದೊಬ್ಬರಂತೆ ಕೊರೊನಾ ಸೋಂಕಿಗೆ ಗುರಿಯಾಗುತ್ತಿದ್ದಾರೆ.
Recommended Video
ತೆಲುಗು ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಕನ್ನಡತಿ, ಮೈಸೂರು ಮೂಲದ ನವ್ಯಾ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ಪತ್ತೆಯಾಗಿತ್ತು. ನಂತರ ಆಕೆಯ ಸಹನಟನಿಗೂ ಕೊರೊನಾ ಪಾಸಿಟಿವ್ ಆಗಿತ್ತು.
ಈಗ ಮತ್ತೊಬ್ಬ ಧಾರಾವಾಹಿ ನಟ ಭಾರಧ್ವಾಜ ರಂಗವಜ್ಜುಲ ಅವರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಭಾರಧ್ವಜ ಅವರು 'ಸ್ವಾತಿಚಿನುಕುಲು' ಎಂಬ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದರು.
ನಟಿ ನವ್ಯಾ ಸ್ವಾಮಿ ಸಹ ನಟ ರವಿಕೃಷ್ಣಗೆ ಕೊರೊನಾ ಪಾಸಿಟಿವ್: ನಟ ಹೇಳಿದ್ದೇನು?
ತಮಗೆ ಕೊರೊನಾ ಸೋಂಕು ದೃಢವಾಗಿರುವ ಬಗ್ಗೆ ವಿಡಿಯೋ ಮೂಲಕ ಹೇಳಿರುವ ಭಾರಧ್ವಜ, 'ನನಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಆದರೆ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ. ಹಾಗಾಗಿ ನಾನು ಮನೆಯಲ್ಲಿಯೇ ಇಸೋಲೇಶನ್ಗೆ ಒಳಗಾಗಿದ್ದೇನೆ' ಎಂದಿದ್ದಾರೆ.
ಮುಂದುವರೆದು, ಯಾರೂ ಆತಂಕಗೊಳ್ಳಬೇಡಿ, ಸುಳ್ಳು ಸುದ್ದಿ ಹಬ್ಬಿಸಬೇಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಸುರಕ್ಷತವಾಗಿರಿ ಎಂದು ಅವರು ಮನವಿ ಮಾಡಿದ್ದಾರೆ.
ಕಿರುತೆರೆ ನಟಿ ನವ್ಯಾ ಸ್ವಾಮಿಗೆ ಕೊರೊನಾ ವೈರಸ್ ಪಾಸಿಟಿವ್
ಭಾರಧ್ವಜ ಅವರಿಗೆ ಮುನ್ನಾ ನಟಿ ನವ್ಯಾ ಸ್ವಾಮಿ, ನಟ ಹರಿಕೃಷ್ಣ, ರವಿ ಕೃಷ್ಣ, ಪ್ರಭಾಕರ್ ಅವರುಗಳು ಕೊರೊನಾ ಸೋಂಕಿಗೆ ಗುರಿಯಾಗಿದ್ದರು. ಇವರಲ್ಲಿ ಹಲವರು ಈಗಾಗಲೇ ಗುಣಮುಖವಾಗಿದ್ದಾರೆ.