Don't Miss!
- News ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೇಶ್ ಬಾಬು ತಂದೆ ನಟ ಸೂಪರ್ ಸ್ಟಾರ್ ಕೃಷ್ಣ ಆರೋಗ್ಯದಲ್ಲಿ ಏರುಪೇರು!
ತೆಲುಗಿನ ದಿಗ್ಗಜ ನಟ, ಮಹೇಶ್ ಬಾಬು ತಂದೆ ಕೃಷ್ಣ ಆರೋಗ್ಯದ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿ ಇಂದಿರಾ ದೇವಿ ನಿಧನನ ನಂತರ ಕುಗ್ಗಿ ಹೋಗಿದ್ದ ಸೂಪರ್ ಸ್ಟಾರ್ ಕೃಷ್ಣ ಆರೋಗ್ಯದ ಏರುಪೇರಾಗಿದೆ ಎನ್ನಲಾಗುತ್ತಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನು ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ವಿದೇಶದಲ್ಲಿ ಮಹೇಶ್ ಬಾಬು, ಸಂಕಷ್ಟದಲ್ಲಿ ತ್ರಿವಿಕ್ರಮ್: ಸಿನಿಮಾ ಕಥೆಯೇನು?
ಕೆಲ ವರ್ಷಗಳಿಂದ ನಟ ಸೂಪರ್ ಸ್ಟಾರ್ ಕೃಷ್ಣ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ನಿನ್ನೆ ಸಂಜೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಕೃಷ್ಣ ಯಾವುದೇ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅವರ ಮಗ ಮಹೇಶ್ ಬಾಬು ಟಾಲಿವುಡ್ನಲ್ಲಿ ಸ್ಟಾರ್ ನಟನಾಗಿ ದರ್ಬಾರ್ ನಡೆಸುತ್ತಿದ್ದಾರೆ. 1943, ಮೇ 31ರಂದು ಗುಂಟೂರಿನಲ್ಲಿ ಹುಟ್ಟಿದ ಕೃಷ್ಣ, ಬಿಎಸ್ಸಿ ಮುಗಿಸಿದ್ದರು. ಸಿನಿಮಾರಂಗಕ್ಕೆ ಹೋಗುವ ಆಸೆಯಿಂದ ಮೊದಲಿಗೆ ನಾಟಕಗಳಲ್ಲಿ ನಟಿಸಲು ಆರಂಭಿಸಿದರು. 'ತೇನ ಮನಸುಲು' ಸಿನಿಮಾ ಮೂಲಕ ಕೃಷ್ಣಗೆ ಹೀರೋ ಆಗಿ ದೊಡ್ಡ ಬ್ರೇಕ್ ಸಿಕ್ಕಿತ್ತು.
350ಕ್ಕೂ ಅಧಿಕ ಸಿನಿಮಾಗಳಲ್ಲಿ ಕೃಷ್ಣ ನಟಿಸಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಸೂಪರ್ ಸ್ಟಾರ್ ಬಿರುದು ಕೊಟ್ಟಿದ್ದಾರೆ. ಸಾಮಾಜಿಕ, ಜಾನಪದ, ಪೌರಾಣಿಕ, ಜೇಮ್ಸ್ ಬಾಂಡ್, ಕೌಬಾಯ್ ಹೀಗೆ ಭಿನ್ನ ವಿಭಿನ್ನ ಸಿನಿಮಾಗಳಲ್ಲಿ ನಟಿಸಿ ಕೃಷ್ಣ ಸೈ ಅನ್ನಿಸಿಕೊಂಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ಕೃಷ್ಣ ಅವರ ಆರೋಗ್ಯದ ಬಗ್ಗೆ ಪುತ್ರ ನರೇಶ್ ಮಾಹಿತಿ ನೀಡಿದ್ದು, ಯಾರು ಆತಂಕಗೊಳ್ಳುವ ಅಗತ್ಯ ಇಲ್ಲ. ರೆಗ್ಯುಲರ್ ಚೆಕಪ್ಗಾಗಿ ತಂದೆಯವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೇವೆ ಎಂದಿದ್ದಾರೆ. ಎರಡು ದಿನಗಳ ಕಾಲ ಕೃಷ್ಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.