Don't Miss!
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರುತ್ತಿರುವ ನಟಿ ವಿಜಯಶಾಂತಿ
ತೆಲುಗಿನ ಖ್ಯಾತ ನಟಿ, ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕಿ ಲೇಡಿ ಸೂಪರ್ ಸ್ಟಾರ್ ಅಂತನೇ ಖ್ಯಾತಿಗಳಿಸಿರುವ ವಿಜಯಶಾಂತಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇತ್ತೀಚಿಗಷ್ಟೆ ಬಹುಭಾಷಾ ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ನಟಿ ಬಿಜೆಪಿ ಸೇರುತ್ತಿರುವುದು ಕುತೂಹಲ ಮೂಡಿಸಿದೆ.
ಇಂದು ಸೋಮವಾರ (ಡಿ.07)ವಿಜಯಶಾಂತಿ ಅಧಿಕೃತವಾಗಿ ಬಿಜೆಪಿ ಸೇರಲು ಮುಹೂರ್ತ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ. ವಿಜಯಶಾಂತಿ ಬಿಜೆಪಿ ಸೇರಿದ ಬಳಿಕ ಗೃಹ ಸಚಿವ ಅಮಿತಾ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಈಗಾಗಲೇ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಹೈದರಾಬಾದ್ ನಿಂದ ದೆಹಲಿಗೆ ತೆರಳಿದ್ದಾರೆ.
ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರಿದ ನಟಿ ಖುಷ್ಬೂ
ವಿಜಯಶಾಂತಿ ಸೇರ್ಪಡೆಯಿಂದ ಹೈದರಾಬಾದ್ ಪಾಲಿಕೆ ಚುನಾವಣೆ ಅಷ್ಟೇ ಅಲ್ಲದೆ ಮುಂಬರುವ ತಮಿಳುನಾಡು ಚುನಾವಣೆಯಲ್ಲೂ ಪಕ್ಷಕ್ಕೆ ಲಾಭವಾಗಲಿದೆ ಎನ್ನುವುದು ಬಿಜೆಪಿ ಲೆಕ್ಕಾಚಾರ. ನಟಿ ವಿಜಯಶಾಂತಿ 2014ರಲ್ಲಿ ಕಾಂಗ್ರೆಸ್ ಸೇರಿದ್ದರು.
ಕಾಂಗ್ರೆಸ್ ಸೇರುವ ಮುನ್ನ ವಿಜಯಶಾಂತಿ ಟಿ ಆರ್ ಎಸ್ ನ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರ ಬೆಂಬಲವಾಗಿ ನಿಂತಿದ್ದರು. 2018ರಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ವಿಜಯಶಾಂತಿ ಅವರನ್ನು ಸ್ಟಾರ್ ಪ್ರಚಾರಕಿಯಾಗಿ ನೇಮಕ ಮಾಡಿದ್ದರು.
1997ರಲ್ಲಿ ಬಿಜೆಪಿ ಪರ ಇದ್ದ ವಿಜಯಶಾಂತಿ ಆಂಧ್ರಪ್ರದೇಶ ವಿಭಜನೆಯಾದ ಬಳಿಕ ತೆಲಂಗಾಣ ರಾಜ್ಯ ಉದಯವಾಗಿದ್ದನ್ನು ಸ್ವಾಗತಿಸಿ ತೆಲಂಗಾಣ ರಾಷ್ಟ್ರ ಸಮಿತಿ ಹಾಗೂ ಕೆಸಿಆರ್ ಪರ ಬೆಂಬಲ ವ್ಯಕ್ತಪಡಿಸಿದ್ದರು. 2009 ರಿಂದ 2014ರ ತನಕ ಮೇದಕ್ ಸಂಸದೆಯಾಗಿದ್ದರು. ಆದರೆ, ಮೇದಕ್ ನಿಂದ ವಿಧಾನಸಭೆಗೆ ಸ್ಪರ್ಧಿಸಿ, ಸೋಲು ಕಂಡಿದ್ದರು. ನಂತರ ಟಿ ಆರ್ ಎಸ್ ತೊರೆದು ಕಾಂಗ್ರೆಸ್ ಸೇರಿದ್ದರು.