Don't Miss!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಗೆ ಕೋವಿಡ್ ಪಾಸಿಟಿವ್
ಖ್ಯಾತ ಬರಹಗಾರ ಮತ್ತು ನಿರ್ದೇಶಕ ರಾಜಮೌಳಿ ಅವರ ತಂದೆ ಕೆ.ವಿ ವಿಜಯೇಂದ್ರ ಪ್ರಸಾದ್ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಸದ್ಯ ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆ ಪಡೆದುಕೊಳ್ಳುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ ಪ್ರಸಾದ್ ಅವರ ತಂಡ, 78 ವರ್ಷದ ಬರಹಗಾರ ವಿಜಯೇಂದ್ರ ಪ್ರಸಾದ್ 2 ವಾರಗಳ ಕಾಲ ಮನೆಯಲ್ಲೇ ಕ್ವಾರಂಟೈನ್ ಆಗಲಿದ್ದು, ಅಲ್ಲಿವರೆಗೂ ಯಾರು ಸಂಪರ್ಕಿಸದಂತೆ ಸ್ನೇಹಿತರಿಗೆ ಮತ್ತು ಹಿತೈಶಿಗಳಿಗೆ ವಿನಂತಿ ಮಾಡಿದ್ದಾರೆ ಎಂದು ಶೇರ್ ಮಾಡಿದ್ದಾರೆ. ಖ್ಯಾತ ಬರಹಗಾರ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಕೊರೊನಾ ಲಸಿಕೆ ಪಡೆದ ಬಾಲಿವುಡ್ ನಟ ಸೋನು ಸೂದ್
ಕಳೆದ ವರ್ಷ ಪುತ್ರ ರಾಜಮೌಳಿ ಮತ್ತು ಅವರ ಪತ್ನಿ ಹಾಗೂ ಮಗನಿಗೆ ಕೊರೊನಾ ಸೋಂಕು ತಗುಲಿತ್ತು. ಕುಟುಂಬದ ಜೊತೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದ ಬಾಹುಬಲಿ ನಿರ್ದೇಶಕ ಸಂಪೂರ್ಣ ಗುಣಮುಖರಾದ ಬಳಿಕ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
ವಿಜಯೇಂದ್ರ ಪ್ರಸಾದ್ ಸದ್ಯ ಆರ್ ಆರ್ ಆರ್ ಮತ್ತು ಕಂಗನಾ ರಣಾವತ್ ನಟನೆಯ ತಲೈವಿ ಸಿನಿಮಾಗೆ ಕಥೆ ಬರೆದಿದ್ದಾರೆ. ಈ ಎರಡು ಬಹುನಿರೀಕ್ಷೆಯ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ.
Recommended Video
ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ಸೋಂಕು ತಗುಲಿದೆ. ಕೊರೊನಾದಿಂದ ಬಾಲಿವುಡ್ ನಡುಗಿಹೋಗಿದ್ದು, ಬಹುತೇಕ ಕಲಾವಿದರಿಗೆ ಪಾಸಿಟಿವ್ ವರದಿ ಬಂದಿದೆ. ಅಕ್ಷಯ್ ಕುಮಾರ್, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ಅಲಿಯಾ ಭಟ್ ಸೇರಿದಂತೆ ಅನೇಕರಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.