Don't Miss!
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- News Darshan: ಡಿ.ಕೆ. ಸುರೇಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಗೆ ಕೋವಿಡ್ ಪಾಸಿಟಿವ್
ಖ್ಯಾತ ಬರಹಗಾರ ಮತ್ತು ನಿರ್ದೇಶಕ ರಾಜಮೌಳಿ ಅವರ ತಂದೆ ಕೆ.ವಿ ವಿಜಯೇಂದ್ರ ಪ್ರಸಾದ್ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಸದ್ಯ ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆ ಪಡೆದುಕೊಳ್ಳುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ ಪ್ರಸಾದ್ ಅವರ ತಂಡ, 78 ವರ್ಷದ ಬರಹಗಾರ ವಿಜಯೇಂದ್ರ ಪ್ರಸಾದ್ 2 ವಾರಗಳ ಕಾಲ ಮನೆಯಲ್ಲೇ ಕ್ವಾರಂಟೈನ್ ಆಗಲಿದ್ದು, ಅಲ್ಲಿವರೆಗೂ ಯಾರು ಸಂಪರ್ಕಿಸದಂತೆ ಸ್ನೇಹಿತರಿಗೆ ಮತ್ತು ಹಿತೈಶಿಗಳಿಗೆ ವಿನಂತಿ ಮಾಡಿದ್ದಾರೆ ಎಂದು ಶೇರ್ ಮಾಡಿದ್ದಾರೆ. ಖ್ಯಾತ ಬರಹಗಾರ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಕೊರೊನಾ ಲಸಿಕೆ ಪಡೆದ ಬಾಲಿವುಡ್ ನಟ ಸೋನು ಸೂದ್
ಕಳೆದ ವರ್ಷ ಪುತ್ರ ರಾಜಮೌಳಿ ಮತ್ತು ಅವರ ಪತ್ನಿ ಹಾಗೂ ಮಗನಿಗೆ ಕೊರೊನಾ ಸೋಂಕು ತಗುಲಿತ್ತು. ಕುಟುಂಬದ ಜೊತೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದ ಬಾಹುಬಲಿ ನಿರ್ದೇಶಕ ಸಂಪೂರ್ಣ ಗುಣಮುಖರಾದ ಬಳಿಕ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
ವಿಜಯೇಂದ್ರ ಪ್ರಸಾದ್ ಸದ್ಯ ಆರ್ ಆರ್ ಆರ್ ಮತ್ತು ಕಂಗನಾ ರಣಾವತ್ ನಟನೆಯ ತಲೈವಿ ಸಿನಿಮಾಗೆ ಕಥೆ ಬರೆದಿದ್ದಾರೆ. ಈ ಎರಡು ಬಹುನಿರೀಕ್ಷೆಯ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ.
Recommended Video
ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ಸೋಂಕು ತಗುಲಿದೆ. ಕೊರೊನಾದಿಂದ ಬಾಲಿವುಡ್ ನಡುಗಿಹೋಗಿದ್ದು, ಬಹುತೇಕ ಕಲಾವಿದರಿಗೆ ಪಾಸಿಟಿವ್ ವರದಿ ಬಂದಿದೆ. ಅಕ್ಷಯ್ ಕುಮಾರ್, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ಅಲಿಯಾ ಭಟ್ ಸೇರಿದಂತೆ ಅನೇಕರಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.