Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಿನ್ನ ಚಿತ್ರದ ಬಜೆಟ್ ಪವನ್ ಕಲ್ಯಾಣ್ ಮಾರ್ನಿಂಗ್ ಶೋ ಕಲೆಕ್ಷನ್ ಅಷ್ಟೇ'
ತೆಲುಗು ಚಿತ್ರೋದ್ಯಮದಲ್ಲಿ ಮಾ ಚುನಾವಣೆ ಪ್ರತಿಷ್ಠೆಯಾಗಿ ಬದಲಾಗಿದೆ. ಸಿನಿಮಾರಂಗಕ್ಕೆ ಮಾತ್ರವಲ್ಲದೇ ಆಂಧ್ರಪ್ರದೇಶ ರಾಜಕೀಯದ ಮೇಲೂ ಹೆಚ್ಚು ಪ್ರಭಾವ ಬೀರುತ್ತಿದೆ. ಮಾ ಚುನಾವಣೆಯಲ್ಲಿ ಪ್ರಕಾಶ್ ರಾಜ್ ಮತ್ತು ವಿಷ್ಣು ಮಂಚು ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಮತ್ತೊಂದಡೆ ಈ ಚುನಾವಣೆ ಪವನ್ ಕಲ್ಯಾಣ್ ವರ್ಸಸ್ ಸಿಎಂ ಜಗನ್ ಮೋಹನ್ ರೆಡ್ಡಿ ಎನ್ನುವಂತೆ ಬಿಂಬಿತವಾಗಿದೆ.
ಪ್ರಕಾಶ್ ರಾಜ್ ಪರವಾಗಿ ಪವನ್ ಕಲ್ಯಾಣ್ ಮತ್ತು ಮೆಗಾ ಕುಟುಂಬ ನಿಂತಿದ್ದರೆ, ಮಂಚು ವಿಷ್ಣು ಸಿಎಂ ಜಗನ್ ಮೋಹನ್ ರೆಡ್ಡಿ ಬೆಂಬಲ ಪಡೆದುಕೊಳ್ಳುತ್ತಿದ್ದಾರೆ ಎನ್ನುವುದು ವಾಸ್ತವ.
ನಟ ಪೋಸಾನಿ ಕೃಷ್ಣ ಮುರಳಿ ಮೇಲೆ ಪವನ್ ಅಭಿಮಾನಿಗಳಿಂದ ದಾಳಿ: ಹತ್ತು ಮಂದಿ ಬಂಧನ
ಇತ್ತೀಚಿಗಷ್ಟೆ ಜಗನ್ ಮೋಹನ್ ರೆಡ್ಡಿ ವಿರುದ್ಧ ನಟ-ರಾಜಕಾರಣಿ ಪವನ್ ಕಲ್ಯಾಣ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಚಿತ್ರರಂಗದ ಮೇಲೆ ಜಗನ್ ಹಸ್ತಕ್ಷೇಪ ಮಾಡ್ತಿದ್ದಾರೆ, ನನ್ನ ವಿರುದ್ಧ ಸೇಡನ್ನು ಸಿನಿಮಾರಂಗದ ಮೇಲೆ ತೋರಿಸುತ್ತಿದ್ದಾರೆ ಎಂದು ಗುಡುಗಿದ್ದರು.
ಮುಖ್ಯಮಂತ್ರಿಯನ್ನು ಏಕವಚನದಲ್ಲಿ ನಿಂದಿಸುತ್ತಿದ್ದಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಇಂಡಸ್ಟ್ರಿಯ ಕೆಲವರು ಸಿಎಂ ಭೇಟಿ ನಮಗೂ ಪವನ್ ಕಲ್ಯಾಣ್ ಹೇಳಿಕೆಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಚು ವಿಷ್ಣು, ''ಪವನ್ ಕಲ್ಯಾಣ್ ಹೇಳಿಕೆಗೆ ಇಂಡಸ್ಟ್ರಿಗೆ ಸಂಬಂಧವಿಲ್ಲ ಅಂತ ಫಿಲಂ ಚೇಂಬರ್ ಸ್ಪಷ್ಟವಾಗಿ ಹೇಳಿದೆ. ನಾನು ಸಿನಿಮಾರಂಗದ ಪರವಾಗಿದ್ದೇನೆ, ಪ್ರಕಾಶ್ ರಾಜ್ ಯಾರ ಪರವಾಗಿ ಇದ್ದಾರೆ, ಇಂಡಸ್ಟ್ರಿ ಪರ ಅಥವಾ ಪವನ್ ಕಲ್ಯಾಣ್ ಪರವಾಗಿನಾ ಎಂದು ಹೇಳಲಿ'' ಎಂದು ಸವಾಲು ಹಾಕಿದ್ದರು.
'ಪಂಜಾಬಿ ಹುಡುಗಿಯನ್ನು ಗರ್ಭಿಣಿ ಮಾಡಿ ವಂಚಿಸಿದ್ರು': ನ್ಯಾಯ ಕೊಡಿಸೋಕೆ ಆಗುತ್ತಾ?
ಮಂಚು ವಿಷ್ಣು ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಕಾಶ್ ರಾಜ್, ''ಪವನ್ ಕಲ್ಯಾಣ್ ಸಿನಿಮಾ ಇಂಡಸ್ಟ್ರಿಯ ಭಾಗ, ಅವರ ಚಿತ್ರದ ಮಾರ್ನಿಂಗ್ ಕಲೆಕ್ಷನ್ ನಿನ್ನ ಸಿನಿಮಾದ ಬಜೆಟ್'' ಎಂದು ತಿರುಗೇಟು ಕೊಟ್ಟಿದ್ದಾರೆ. 'ಪವನ್ ಕಲ್ಯಾಣ್ ಸಿನಿಮಾ ಇಂಡಸ್ಟ್ರಿಯ ಒಂದು ಭಾಗ. ಮೊದಲು ಅವರೊಬ್ಬರ ನಟ ಆಮೇಲೆ ಅವರು ರಾಜಕಾರಣಿ. ಅವರನ್ನು ಏಕೆ ಪ್ರತ್ಯೇಕವಾಗಿ ನೋಡಲಾಗುತ್ತಿದೆ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ವಿಷ್ಣು ಅವರು ತಮ್ಮ ಮಾತಿನ ಮೇಲೆ ನಿಗಾ ವಹಿಸಬೇಕು'' ಎಂದು ಎಚ್ಚರಿಸಿದ್ದಾರೆ.
ಅಕ್ಟೋಬರ್ 10 ರಂದು ಮಾ ಚುನಾವಣೆಯ ಮತದಾನ ನಡೆಯಲಿದೆ.