Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಕೃಷ್ಣ ಹುಟ್ಟುಹಬ್ಬಕ್ಕೆ ಶುಭಕೋರಿದ 'ಸಿಕ್ಸರ್ ಕಿಂಗ್' ಯುವರಾಜ್
ತೆಲುಗು ಸೂಪರ್ ಸ್ಟಾರ್ ನಂದಮೂರಿ ಬಾಲಕೃಷ್ಣ 61ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ದೇಶಾದ್ಯಂತ ಬಾಲಯ್ಯ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲ ಸೆಲೆಬ್ರಿಟಿಗಳ ಸಹ ಬಾಲಯ್ಯ ಜನುಮದಿನಕ್ಕೆ ವಿಶ್ ಮಾಡುತ್ತಿದ್ದಾರೆ.
ಭಾರತೀಯ ಕ್ರಿಕೆಟ್ ಜಗತ್ತು ಕಂಡ ಅದ್ಭುತ ಆಟಗಾರ, 'ಸಿಕ್ಸರ್ ಕಿಂಗ್' ಎಂದೇ ಖ್ಯಾತಿ ಗಳಿಸಿಕೊಂಡಿರುವ ಯುವರಾಜ್ ಸಿಂಗ್, ಬಾಲಕೃಷ್ಣರ ಹುಟ್ಟುಹಬ್ಬಕ್ಕೆ ಟ್ವಿಟ್ಟರ್ ಮೂಲಕ ಶುಭಾಶಯ ತಿಳಿಸಿದ್ದಾರೆ. ನಂದಮೂರಿ ಸಿಂಹಗೆ ಯುವರಾಜ್ ವಿಶ್ ಮಾಡಿರುವುದಕ್ಕೆ ಅಭಿಮಾನಿಗಳ ಸಂಭ್ರಮಿಸುತ್ತಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಬಾಲಕೃಷ್ಣರ ಹೊಸ ಸಿನಿಮಾಗಳು ಸಹ ಪ್ರಕಟಣೆಯಾಗಿದೆ. ಮುಂದೆ ಓದಿ...
ನನ್ನನ್ನು ಭೇಟಿಯಾಗಲು ಬರಬೇಡಿ: ಅಭಿಮಾನಿಗಳಲ್ಲಿ ನಟ ಬಾಲಕೃಷ್ಣ ಮನವಿ
ಲೆಜೆಂಡ್ಗೆ ಶುಭಕೋರಿದ ಯುವರಾಜ್
''ಹ್ಯಾಪಿ ಬರ್ತಡೇ ನಂದಮೂರಿ ಬಾಲಕೃಷ್ಣ ಸರ್. ನಿಮ್ಮ ಸಿನಿಮಾಗಳ ಮೂಲಕ ಹಾಗೂ ನಿಮ್ಮ ಮಾನವೀಯತೆಯ ಕೆಲಸಗಳ ಮೂಲಕ ಇಡೀ ಜಗತ್ತನ್ನು ರಂಜಿಸುವ ಕೆಲಸ ಮುಂದುವರಿಯಲಿ. ಒಳ್ಳೆಯದಾಗಲಿ ಸರ್'' ಎಂದು ಯುವರಾಜ್ ಸಿಂಗ್ ಫೋಟೋ ಶೇರ್ ಮಾಡಿದ್ದಾರೆ.
ಮತ್ತೆ ಅಭಿಮಾನಿ ಕಪಾಳಕ್ಕೆ ಹೊಡೆದ ನಟ ಬಾಲಕೃಷ್ಣ
ಕ್ಯಾನ್ಸರ್ ರೋಗಿಗಳಿಗಾಗಿ ಒಂದಾಗಿದ್ದ ಬಾಲಯ್ಯ-ಯುವಿ
ಐಪಿಎಲ್ ಪಂದ್ಯಕ್ಕಾಗಿ ಹೈದರಾಬಾದ್ಗೆ ಬಂದಿದ್ದ ಸಮಯದಲ್ಲಿ ಕ್ರಿಕೆಟಿಗ ಯುವರಾಜ್ ಸಿಂಗ್ರನ್ನು ಬಾಲಕೃಷ್ಣ ಭೇಟಿಯಾಗಿದ್ದರು. ಕ್ಯಾನ್ಸರ್ ರೋಗಿಗಳ ಹೋರಾಟಕ್ಕೆ ಈ ಇಬ್ಬರು ಕೈ ಜೋಡಿಸಿದ್ದರು. ಯುವರಾಜ್ ಸಿಂಗ್ ಸಹ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಚಿಕಿತ್ಸೆ ಪಡೆದ ಗುಣಮುಖರಾಗಿದ್ದರು.
107ನೇ ಚಿತ್ರ ಪ್ರಕಟಣೆ
ಬಾಲಕೃಷ್ಣ ಬರ್ತಡೇ ಪ್ರಯುಕ್ತ 107ನೇ ಪ್ರಾಜೆಕ್ಟ್ ಘೋಷಣೆಯಾಗಿದೆ. ಗೋಪಿಚಂದ್ ಮಲಿನೇನಿ ಈ ಚಿತ್ರ ನಿರ್ದೇಶನ ಮಾಡಲಿದ್ದು, #NBK107 ಹೆಸರಿನಲ್ಲಿ ಪೋಸ್ಟರ್ವೊಂದು ಬಿಡುಗಡೆ ಮಾಡಿದ್ದಾರೆ. ಇನ್ನುಳಿದಂತೆ ಈ ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ.
Recommended Video
'ಅಖಂಡ' ಚಿತ್ರದಲ್ಲಿ ನಟನೆ
ಬಯೋಪಟಿ ಶ್ರೀನಿವಾಸ್ ನಿರ್ದೇಶನದಲ್ಲಿ ಅಖಂಡ ಎಂಬ ಸಿನಿಮಾ ಮಾಡ್ತಿದ್ದಾರೆ. ಬರ್ತಡೇ ವಿಶೇಷವಾಗಿ ಹೊಸ ಪೋಸ್ಟರ್ ಸಹ ರಿಲೀಸ್ ಆಗಿದೆ. ಪ್ರಗ್ಯಾ ಜೈಸ್ವಲ್ ಈ ಚಿತ್ರದಲ್ಲಿ ನಟಿಸುತ್ತಿದ್ದು, ಶ್ರೀಕಾಂತ್ ಮತ್ತು ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.