X
ಹೋಮ್ ಚಲನಚಿತ್ರಗಳ ಒಳನೋಟ

ರಿಯಲ್ ಲೈಫ್ ಕಥೆ ಆಧರಿಸಿದ ಬಂದು ಸೂಪರ್ ಹಿಟ್ ಆದ ಕನ್ನಡ ಸಿನಿಮಾಗಳು!

Author Sowmya Bairappa | Published: Tuesday, December 31, 2024, 10:08 AM [IST]

ನೈಜ ಘಟನೆ ಆಧರಿತ ಸಿನಿಮಾ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ನಿರ್ದೇಶಕರು ನಿಜ ಜೀವನದ ಕಥೆಯಾಧಾರಿತ ಸಿನಿಮಾ ಮಾಡುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ. ಆದಾಗ್ಯೂ ಕೂಡ ಸ್ಯಾಂಡಲ್‌ವುಡ್‌ನ ಅನೇಕ ನಿರ್ದೇಶಕರು ನೈಜ ಘಟನೆಯಾಧಾರಿತ ಸಿನಿಮಾ ಮಾಡಿ ಸಕ್ಸಸ್ ಆಗಿದ್ದಾರೆ. ಇಲ್ಲಿ ನೈಜ ಘಟನೆಗಳಿಂದ ಸ್ಫೂರ್ತಿ ಪಡೆದು ತೆರೆಗೆ ಬಂದು ಸೂಪರ್ ಹಿಟ್ ಆದ ಕನ್ನಡದ ಐದು ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.


cover image
ಓಂ

ರೌಡಿಸಂ ಮತ್ತು ಪ್ರೇಮ ಕಥೆಯ ಸಂಘರ್ಷವನ್ನು ಹೀಗೂ ಹೇಳಬಹುದು ಎಂದು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ 'ಓಂ'. ಈ ಸಿನಿಮಾವನ್ನು ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನ ಮಾಡಿದ್ದರು. ನಿರ್ದೇಶಕ ಉಪೇಂದ್ರ ಕೆಲವು ಪತ್ರಿಕೆಗಳಲ್ಲಿ ಬಂದ ನೈಜ ಘಟನೆಗಳ ಜೊತೆಗೆ ನಿಜವಾದ ರೌಡಿಗಳ ಕಥೆಯನ್ನು ಬೆಳ್ಳಿ ತೆರೆ ಮೇಲೆ ತೋರಿಸುವ ಮೂಲಕ ರೌಡಿಸಂ, ಶಾಶ್ವತ ಅಲ್ಲ ಎಂಬ ಜಾಗೃತಿಯನ್ನು ಮೂಡಿಸಿದ್ದರು. ಜೇಡರಹಳ್ಳಿ ಕೃಷ್ಣ, ಬೆಕ್ಕಿನ ಕಣ್ಣು ರಾಜೇಂದ್ರ, ಕೊರಂಗು ಕೃಷ್ಣ, ತನ್ವೀರ್ ಮುಂತಾದ ನಿಜ ಜೀವನದ ರೌಡಿಗಳು 'ಓಂ' ಚಿತ್ರದಲ್ಲಿ ನಟಿಸಿದ್ದರು. ಇಂತಹ ಪ್ರಯೋಗ ಮಾಡಿದ ಮೊದಲ ಸಿನಿಮಾ ಇದು. ಕಪಾಲಿ ಚಿತ್ರಮಂದಿರದಲ್ಲಿಯೇ ಇದು 30 ಬಾರಿ ಬಿಡುಗಡೆಯಾಗಿತ್ತು. ಸಿನಿಮಾವೊಂದು ಒಂದೇ ಚಿತ್ರಮಂದಿರದಲ್ಲಿ ಇಷ್ಟು ಬಾರಿ ಬಿಡುಗಡೆಯಾದ ಬೇರೆ ನಿದರ್ಶನವಿಲ್ಲ.   

ಆ ದಿನಗಳು

ಆ ದಿನಗಳು 1986ರಲ್ಲಿ ಬೆಂಗಳೂರಿನಲ್ಲಿ ನಡೆದ ಭೂಗತ ಜಗತ್ತಿನ ರಿಯಲ್ ಸ್ಟೋರಿ ಸಿನಿಮಾ. ಅಂದಿನ ರೌಡಿಸಂ ದಿನಗಳಲ್ಲಿ ಗುರುತಿಸಿಕೊಂಡಿದ್ದ, ಬರಹಗಾರ ಅಗ್ನಿ ಶ್ರೀಧರ್ ಬರೆದಿರುವ ನೈಜ ಕಥೆಯನ್ನು ನಿರ್ದೇಶಕ ಕೆ.ಎಂ. ಚೈತನ್ಯ ನಿರ್ದೇಶನ ಮಾಡಿದ್ದರು. 'ಆ ದಿನಗಳು' ಸಿನಿಮಾ ಮೂಲಕ ಚೇತನ್ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಆ ಕಾಲದಲ್ಲಿ ಭೂಗತ ಜಗತ್ತಿನಲ್ಲಿ ಹಿಡಿತ ಸಾಧಿಸಿದ್ದ ಕೊತ್ವಾಲ್​​​ ರಾಮಚಂದ್ರ ಎಂಬ ರೌಡಿಯ ಕಥೆಯನ್ನು 'ಆ ದಿನಗಳು' ಸಿನಿಮಾ ಒಳಗೊಂಡಿತ್ತು. 2007ರಲ್ಲಿ ತೆರೆಕಂಡ ಈ ಸಿನಿಮಾ ನೈಜ ಕಥೆ ಆಧರಿಸಿದ್ದ ಕಾರಣಕ್ಕೆ ಸಕ್ಸಸ್ ಕಂಡು ನಟ ಚೇತನ್​​​ಗೆ ಒಳ್ಳೆ ಹೆಸರು ತಂದು ಕೊಟ್ಟಿತ್ತು.

ದಂಡುಪಾಳ್ಯ

ಮಳೆ ಹುಡುಗಿ ಪೂಜಾ ಗಾಂಧಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದ ಸಿನಿಮಾ ದಂಡುಪಾಳ್ಯ. ಈ ಸಿನಿಮಾದಲ್ಲಿನ ನಟನೆಗಾಗಿ ಪೂಜಾ ಗಾಂಧಿ ಅವರಿಗೆ ಅತ್ಯುತ್ತಮ ಕನ್ನಡ ನಟಿಗಾಗಿ ಫಿಲ್ಮ್‌ಫೇರ್ ಪ್ರಶಸ್ತಿ ಮತ್ತು ಅತ್ಯುತ್ತಮ ನಟಿಗಾಗಿ ಸುವರ್ಣ ಫಿಲ್ಮ್‌ಫೇರ್ ಪ್ರಶಸ್ತಿ ಲಭಿಸಿತ್ತು. ದಂಡುಪಾಳ್ಯ ಸಿನಿಮಾವನ್ನು ಶ್ರೀನಿವಾಸ್ ರಾಜು ನಿರ್ದೇಶನ ಮಾಡಿದ್ದರು. ನೈಜ ಘಟನೆ ಆಧರಿಸಿ ಮಾಡಲಾಗಿದ್ದ ಈ ಸಿನಿಮಾ ಹಿಟ್ ಆಗಿತ್ತು.

ಮೈನಾ

ಚೇತನ್ ಕುಮಾರ್ ಮತ್ತು ನಿತ್ಯ ಮೆನನ್ ನಟನೆಯ 'ಮೈನಾ' ಕನ್ನಡದ ಚಿತ್ರರಂಗದ ಸೂಪರ್ ಹಿಟ್ ಸಿನಿಮಾ. ಇದೊಂದು ನಿಜ ಜೀವನ ಕಥೆ ಆಧಾರಿತ ಚಿತ್ರವಾಗಿದ್ದು, ನಾಗಶೇಖರ್ ಆಕ್ಷನ್ ಕಟ್ ಹೇಳಿದ್ದರು. ಚಿತ್ರದ ನಾಯಕ ಸತ್ಯ (ಚೇತನ್) ಮತ್ತು ಮೈನಾ (ನಿತ್ಯಾ ಮೆನನ್)ನೊಂದಿಗೆ ಪ್ರೀತಿಯಲ್ಲಿ ಬೀಳುತ್ತಾನೆ. ಮೈನಾ ಅಂಗವಿಕಲೆ ಆಗಿರುತ್ತಾಳೆ. ಹೀಗಿದ್ದರೂ ಸತ್ಯ ಆಕೆಯನ್ನು ಮದುವೆಯಾಗುತ್ತಾನೆ. ಬಳಿಕ ಆಕೆಗೆ ಚಿಕಿತ್ಸೆ ಕೊಡಿಸಲು ವೈದ್ಯರ ಬಳಿ ಕರೆದೊಯ್ಯದಾಗ ವೈದ್ಯ ಆಕೆಯ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಾನೆ. ಇದನ್ನು ತಿಳಿದ ಸತ್ಯ ಆತನನ್ನ ಕೊಲ್ಲುತ್ತಾನೆ. ರಾಜಕಾರಣಿ ಸಹೋದರನನ್ನು ಹತ್ಯೆ ಮಾಡಿದ್ದಕ್ಕಾಗಿ ಸಿನಿಮಾದ ಕೊನೆಯಲ್ಲಿ ಸತ್ಯ ಹಾಗೂ ಮೈನಾ ಇಬ್ಬರು ಸಾವನ್ನಪ್ಪುತ್ತಾರೆ. ಇದೊಂದು ದುರಂತ ಅಂತ್ಯವಿರುವ ಸಿನಿಮಾ.  



ಯು ಟರ್ನ್

ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಬಗ್ಗೆ ಸಂದೇಶ ಸಾರುವಂತಹ ಸಿನಿಮಾ ಯು ಟರ್ನ್. ಈ ಚಿತ್ರವನ್ನು ಪವನ್ ಕುಮಾರ್ ನಿರ್ದೇಶಿದ್ದರು. ಶ್ರದ್ಧಾ ಶ್ರೀನಾಥ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಚಿತ್ರ ಸೂಪರ್ ಹಿಟ್ ಆಗಿತ್ತು. ಶ್ರದ್ಧಾ ಈ ಚಿತ್ರದಲ್ಲಿನ ಅಭಿನಯಕ್ಕಾಗಿ `ಫಿಲ್ಮ್ ಫೇರ್' ಮತ್ತು `ಸೈಮಾ' ಪ್ರಶಸ್ತಿ ಪಡೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+