ಚಲನಚಿತ್ರಗಳ ಒಳನೋಟ
ಜೀ ಕನ್ನಡ ವಾಹಿನಿ ವಿಭಿನ್ನ ಕಥೆಯುಳ್ಳ ಸೀರಿಯಲ್ಗಳ ಪ್ರಸ್ತುತಪಡಿಸುವ ಮೂಲಕ ಕನ್ನಡಿಗರ ಮನಗೆದ್ದಿದೆ. ಈ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಲವು ಧಾರಾವಾಹಿಗಳು ಟಿಆರ್ಪಿ ರೇಸಿಂಗ್ನಲ್ಲೂ ಮುಂದಿವೆ. ಮೊನೆಯಷ್ಟೇ ಬ್ರಹ್ಮಗಂಟು ಎಂಬ ಧಾರಾವಾಹಿ ಲಾಂಚ್ ಆಗಿತ್ತು. ಈ ಬೆನ್ನಲ್ಲೇ ಆಗಸ್ಟ್ ೧೨ರಿಂದ ಅಣ್ಣಯ್ಯ ಎಂಬ ಹೊಸ ಧಾರಾವಾಹಿಯೊಂದು ಪ್ರಸಾರವಾಗುತ್ತಿದ್ದು, ಈಗಾಗಲೇ ಪ್ರೋಮೋಗಳ ಮೂಲಕ ಗಮನ ಸೆಳೆಯುತ್ತಿದೆ. ಹೀಗಾಗಿ, ಈಗಾಗಲೇ ಪ್ರಸಾರವಾಗುತ್ತಿರುವ ಯಾವುದಾದರೊಂದು ಧಾರಾವಾಹಿ ಮುಕ್ತಾಯಗೊಳ್ಳಲಿದೆ. ಇಲ್ಲಿ ಅಣ್ಣಯ್ಯ ಧಾರಾವಾಹಿಯ ಕಥೆ ಏನು, ತಾರಾಗಣದಲ್ಲಿ ಯಾರೆಲ್ಲಾ ಇದ್ದಾರೆ ಎಂಬ ಮಾಹಿತಿಯನ್ನು ನೀಡಲಾಗಿದೆ.