ಡ್ರೋನ್ ವಿಚಾರವಾಗಿ ಸಾಕಷ್ಟು ಟ್ರೋಲ್ ಹಾಗೂ ಟೀಕೆಗೊಳಗಾಗಿದ್ದ ಪ್ರತಾಪ್ ಸದ್ಯ ಬಿಗ್ಬಾಸ್ ಕನ್ನಡ ಸೀಸನ್ ೧೦ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ದೊಡ್ಮನೆಗೆ ಎಂಟ್ರಿಕೊಟ್ಟ ಮೊದಲನೇ ಡ್ರೋನ್ ಪ್ರತಾಪ್ ಸಾಕಷ್ಟು ಲೇವಡಿಗೆ ಒಳಗಾಗಿದ್ದರು. ಬಳಿಕ ಕಿಚ್ಚ ಸುದೀಪ್ ಅದನ್ನು ಖಂಡಿಸಿದ್ದರು. ಇದಾದ ಬಳಿಕ ಪ್ರತಾಪ್ ಕೊಂಚ ಧೈರ್ಯ ತಂದುಕೊಂಡಿದ್ದರು. ಆದರೆ, ಮೂರನೇ ವಾರ ಮನೆಯವರ ಪ್ರಶ್ನೆಗಳ ಸುರಿಮಳೆಗೆ ಉತ್ತರಿಸಲಾಗದೇ ಪ್ರತಾಪ್ ಗಳಗಳನೇ ಕಣ್ಣೀರು ಹಾಕಿದ್ದಾರೆ.