ಬಿಗ್ಬಾಸ್ ಕನ್ನಡ ಸೀಸನ್ 11ರಲ್ಲಿ ಮೂರನೇ ವಾರ ಲಾಯರ್ ಜಗದೀಶ್ ಹಾಗೂ ರಂಜಿತ್ ಕುಮಾರ್ ಎಲಿಮಿನೇಟ್ ಆಗುತ್ತಿದ್ದಂತೆ ಗಾಯಕ ಹನುಮಂತ ಲಮಾಣಿ ವೈಲ್ಡ್ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿಕೊಟ್ಟಿದ್ದರು. ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿರುವ ಹನುಮಂತ, ಬಿಗ್ಬಾಸ್ ಮನೆಯಲ್ಲಿ ತಮ್ಮದೇ ರೀತಿಯಲ್ಲಿ ಪ್ರೇಕ್ಷಕರಿಗೆ ಮನೋರಂಜನೆ ನೀಡುತ್ತಿದ್ದಾರೆ. ಇಲ್ಲಿ ಹನುಮಂತ ಲಮಾಣಿ ಅವರ ವಯಸ್ಸು, ಶಿಕ್ಷಣ ಸೇರಿದಂತೆ ಕುತೂಹಲಕಾರಿ ವಿಷಯಗಳನ್ನು ನೀಡಲಾಗಿದೆ.