ಸೂಪರ್ ಸಂಡೇ ವಿಥ್ ಸುದೀಪ ಎಪಿಸೋಡ್ನಲ್ಲಿ ಕಿಚ್ಚ ಸುದೀಪ್ ಮನೆಯವರಿಗೆಲ್ಲಾ ಒಂದು ಟಾಸ್ಕ್ ನೀಡಿದ್ದರು. ಇದರ ಪ್ರಕಾರ, ಬಿಗ್ಬಾಸ್ ಜರ್ನಿಯನ್ನು ಗಮನದಲ್ಲಿಟ್ಟುಕೊಂಡು ಒಬ್ಬರಿಗೆ ಏಣಿ ಹಾಗೂ ಮತ್ತೊಬ್ಬರಿಗೆ ಹಾವಿನ ಸ್ಥಾನ ನೀಡಬೇಕಿತ್ತು. ಏಣಿ ಎಂದರೆ ಮೇಲಕ್ಕೇರಲು ಸಹಾಯ ಮಾಡಿದವರು. ಹಾವು ಎಂದರೆ ಹಿನ್ನಡೆ ಉಂಟು ಮಾಡಿದವರು. ಈ ಸಂದರ್ಭ ವಿನಯ್ ನೀಡಿದ ಕಾರಣಕ್ಕೆ ಸುದೀಪ್ ಗರಂ ಆಗಿದ್ದಾರೆ.