

Click it and Unblock the Notifications
ಬಿಗ್ಬಾಸ್ ಕನ್ನಡ ಸೀಸನ್ ೧೦ ಆರಂಭವಾಗಿದೆ. ಹೊಸ ಮನೆಯಲ್ಲಿ ಈ ಬಾರಿ ಬಿಗ್ಬಾಸ್ ರಿಯಾಲಿಟಿ ಶೋ ನಡೆಯುತ್ತಿದ್ದು, ಭಾರೀ ಕುತೂಹಲ ಮೂಡಿಸಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈಗಾಗಲೇ ಸ್ಪರ್ಧಿಗಳನ್ನು ವೇದಿಕೆಗೆ ಸ್ವಾಗತಿಸಿದ್ದಾರೆ. ಸ್ಪರ್ಧಿಗಳ ಜೊತೆಗೆ ಚಾರ್ಲಿ ಕೂಡ ದೊಡ್ಮನೆ ಪ್ರವೇಶಿಸಿರುವುದು ಅಚ್ಚರಿ ಮೂಡಿಸಿದೆ. ಇಲ್ಲಿ ಬಿಗ್ಬಾಸ್ ಕನ್ನಡ ಸೀಸಿನ್ 10 ಎಲ್ಲಾ ಸ್ಫರ್ಧಿಗಳ ವಿವರ ನೀಡಲಾಗಿದೆ.
ಕನ್ನಡ ಕಿರುತೆರೆ ನಟಿ ನಮ್ರತಾ ಗೌಡ ಬಿಗ್ಬಾಸ್ ಕನ್ನಡ ಸೀಸನ್ ೧೦ರ ಮೊದಲ ಸ್ಫರ್ಧಿಯಾಗಿ ಎಂಟ್ರಿಕೊಟ್ಟಿದ್ದಾರೆ. 1993 ಏಪ್ರಿಲ್ 15ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ನಮ್ರತಾ, 2011ರಲ್ಲಿ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾದ `ಕೃಷ್ಣ ರುಕ್ಮಿಣಿ' ಸೀರಿಯಲ್ ಮೂಲಕ ಕಿರುತೆರೆ ಜರ್ನಿ ಆರಂಭಿಸಿದರು.ನಂತರ ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ 'ಹಿಮಾ' ಪಾತ್ರದ ಮೂಲಕ ಗಮನ ಸೆಳೆದರು. ನಂತರ ತಕಮಿಧಿತ ಡ್ಯಾನ್ಸ್ ಶೋನಲ್ಲಿ ಭಾಗವಹಿಸಿ ಟಾಪ್ 5ಗೆ ಆಯ್ಕೆಯಾಗಿದ್ದರು. ಬಳಿಕ ನಾಗಿಣಿ 2 ಧಾರಾವಾಹಿಯ ಶಿವಾನಿ ಪಾತ್ರದ ಮೂಲಕ ಗಮನ ಸೆಳೆದರು.
ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟ ಸ್ನೇಹಿತ್ ಗೌಡ ಬಿಗ್ಬಾಸ್ ಕನ್ನಡ ಸೀಸನ್ 10ರ ಎರಡನೇ ಸ್ಫರ್ಧಿಯಾಗಿ ಎಂಟ್ರಿಕೊಟ್ಟಿದ್ದಾರೆ . ಇವರು 2016 ರಲ್ಲಿ ತೆರೆಕಂಡ `ಚಿರವಾದ ನೆನಪು' ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೊತೆಗೆ ನಮ್ಮನೆ ಯುವರಾಣಿ ಸೀರಿಯಲ್ನಲ್ಲೂ ನಟಿಸಿದ್ದಾರೆ.
ಕಲರ್ಸ್ ಕನ್ನಡದ ಮಜಾಭಾರತ ಹಾಗೂ ಜೀ ಕನ್ನಡದ ಕಾಮಿಡಿ ಕಿಲಾಡಿಗಳು ರಿಯಾಲಿಟ ಶೋ ಮೂಲಕ ಮನೆಮಾತಾದ ಸಂತೋಷ್ ದೊಡ್ಮನೆಗೆ ಎಂಟ್ರಿಕೊಟ್ಟಿದ್ದಾರೆ. ಮೂಲತಃ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉದ್ದೂರು ಹೊಸಹಳ್ಳಿವರಾದ, ಮಜಾಭಾರತ ಹಾಗೂ ಕಾಮಿಡಿ ಕಿಲಾಡಿಗಳು ರಿಯಾಲಿಟ ಶೋ ಮೂಲಕ ಖ್ಯಾತಿಸ ಗಳಿಸಿದ್ದಾರೆ. ಪುಟ್ಟಕ್ಕನ ಮಕ್ಕಳು ಸೇರಿದಂತೆ ಕೆಲ ಸೀರಿಯಲ್ಗಳಲ್ಲೂ ಅಭಿನಯಿಸಿರುವ ಇವರು, 12ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯನಟನಾಗಿ ಅಭಿನಯಿಸಿದ್ದಾರೆ.
ವಿನಯ್ ಗೌಡ ಕನ್ನಡ ಕಿರುತೆರೆಯ 'ಶಿವ' ಅಂತಲೇ ಖ್ಯಾತಿ ಪಡೆದಿರುವ ಪ್ರತಿಭಾನ್ವಿತ ನಟ. 2010ರಲ್ಲಿ 'ಚಿಟ್ಟೆ ಹೆಜ್ಜೆ' ಎಂಬ ಧಾರವಾಹಿ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿಕೊಟ್ಟ ಇವರು, ಸಿಐಡಿ ಕರ್ನಾಟಕ, ಅಂಬಾರಿ, ಶುಭವಿವಾಹ, ಅಮ್ಮ, ಹರ ಹರ ಮಹಾದೇವ, ಯಡಿಯೂರು ಸಿದ್ದಲಿಂಗೇಶ್ವರ, ನಮ್ಮ ಲಚ್ಚಿ ಧಾರವಾಹಿಗಳಲ್ಲಿ ಅಭಿನಯಿಸಿದ್ದಾರೆ. ಜೊತೆಗೆ ತೆಲುಗು ಸೀರಿಯಲ್ನಲ್ಲೂ ಅಭಿನಯಿಸಿದ್ದಾರೆ. ಇವರು ರಾಕೆಟ್, ಪೊಗರು, ಶಿವಾಜಿ ಸುರತ್ಕಲ್, ಅವನಲ್ಲಿ ಇವಳಿಲ್ಲಿ, ಕೈಮರ ಎಂಬ ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಸೂಪರ್ ಜೋಡಿ ರಿಯಾಲಿಟಿ ಶೋನಲ್ಲಿ ಪತ್ನಿ ಜೊತೆ ಭಾಗವಹಿಸಿ ವಿಜೇತರಾಗಿದ್ದಾರೆ.
ನೀತು ವನಜಾಕ್ಷಿ ಟ್ಯಾಟೂ ಆರ್ಟಿಸ್ಟ್ ಹಾಗೂ ಉದ್ಯಮಿ. ಗದಗ ಜಿಲ್ಲೆಯ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಇವರು, ಎಲ್ಲಾ ಟ್ರಾನ್ಸಜೆಂಡರ್ಗಖಂತೆ ಗಂಡಾಗಿ ಹುಟ್ಟಿದ್ದರು. ಇವರ ಬಾಲ್ಯದ ಹೆಸರು ಮಂಜುನಾಥ್. ಟ್ಯಾಟೂ ಆರ್ಟಿಸ್ಟ್ ಆಗಿರುವ ಇವರು, ಉತ್ತರ ಕರ್ನಾಟಕ ತಿನಿಸುಗಳ 'ಗಮ ಗಮ' ಎನ್ನುವ ಹೊಟೇಲ್ ಉದ್ಯಮಿ ಕೂಡ ಆಗಿದ್ದಾರೆ. ಸೂಪರ್ ಕ್ವೀನ್ಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಇವರು, ಅದರಲ್ಲಿ ವಿಜೇತೆ ಕೂಡ ಆಗಿದ್ದರು. ನೀತು ಸದ್ಯ ರಿಯಲ್ ಸ್ಟಾರ್ ಉಪೇಂದ್ರ ಅವರ ಬಹುನಿರೀಕ್ಷಿತ ಯುಐ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
ಸಿರಿಜಾ ಕನ್ನಡ ಕಿರುತೆರೆಯ ಜನಪ್ರಿಯ ನಟಿ. ಕನ್ನಡ ಸೇರಿದಂತೆ ತೆಲುಗು, ತಮಿಳು ಭಾಷೆಗಳ 30ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿರುವ ಇವರು, ಸಾಕಷ್ಟು ಹಿಟ್ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕೆಲ ವರ್ಷಗಳ ಹಿಂದೆ ಬಹುಬೇಡಿಕೆಯ ನಟಿಯಾಗಿದ್ದ ಸಿರಿಜಾ, ಏಕಕಾಲಕ್ಕೆ ನಾಲ್ಕು ಧಾರಾವಾಹಿಗಳಲ್ಲಿ ನಟಿಸಿದ್ದ ದಾಖಲೆಯಿದೆ..
ಸ್ನೇಕ್ ಶ್ಯಾಮ್ ಮೈಸೂರಿನ ಜನಪ್ರಿಯ ಉರಗ ತಜ್ಞ. ಚಿಕ್ಕಂದಿನಿಂದಲೂ ಹಾವು ಹಿಡಿಯುವುದನ್ನೂ ಕರಗತ ಮಾಡಿಕೊಂಡಿರುವ ಇವರ ಮೂಲ ಹೆಸರು ಬಾಲಸುಬ್ರಮಣ್ಯ. ಮೈಸೂರಿನ ಜನರಿಗೆ ಎಲ್ಲಿಯೇ ಹಾವು ಕಾಸಿಸಿದ್ರೂ ತಕ್ಷಣ ನೆನಪಿಗೆ ಬರೋದು ಸ್ನೇಕ್ ಶ್ಯಾಮ್. ಇವರು ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಉಪನ್ಯಾಸ ನೀಡಿ, ಅವರಲ್ಲಿರುವ ಆತಂಕ ಹಾಗೂ ಭಯವನ್ನು ದೂರ ಮಾಡಿ, ಧೈರ್ಯ ತುಂಬುವ ಕೆಲಸ ಮಾಡುತ್ತಾ ಬಂದಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸ್ನೇಕ್ ಶ್ಯಾಮ್ ಅವರ ಸಾಕ್ಷ್ಯ ಚಿತ್ರವನ್ನು ನ್ಯಾಷನಲ್ ಜಿಯೋಗ್ರಫಿ ಚಾನೆಲ್ ಪ್ರಸಾರ ಮಾಡಿದೆ.
ವರ್ತೂರ್ ಸಂತೋಷ್ ಹಳ್ಳಿಕಾರ್ ತಳಿಯ ಜಾನುವಾರು ಸಾಕಾಣಿಕೆಯಿಂದ ಜನಪ್ರಿಯತೆ ಪಡೆದಿರುವ ಕರ್ನಾಟಕದ ಜನಪ್ರಿಯ ವ್ಯಕ್ತಿ. ಜೊತೆಗೆ ಇವರು ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷ. ವರ್ತೂರ್ ಸಂತೋಷ್ ಹಳ್ಳಿಕಾರ್ ಒಡೆಯ ಅಂತಲೇ ಜನಪ್ರಿಯತೆ ಗಳಿಸಿದ್ದಾರೆ. ಇವರು ಬಿಗ್ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ.
ಕಾರ್ತಿಕ್ ಮಹೇಶ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ. ಮೂಲತಃ ಮೈಸೂರಿನವರಾದ ಇವರು, ಅಕ್ಕ, ಬಂಗಾರಿ, ಖುಷಿ, ಇಂತಿ ನಿಮ್ಮ ಆಶಾ, ಪುಟ್ಟಕ್ಕನ ಮಕ್ಕಳು ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಜೊತೆಗೆ ಕೆಲ ತೆಲುಗೂ ಸೀರಿಯಲ್ಗಳಲ್ಲೂ ನಟಿಸಿದ್ದಾರೆ. ಕಾರ್ತಿಕ್ ಸುನೀಲ್ ಪುರಾಣಿಕ್ ನಿರ್ದೇಶನದ 'ಡೊಳ್ಳು' ಸಿನಿಮಾದಲ್ಲಿ ನಾಯಕನಾಗಿ ನಟಿಸಿಸುವ ಮೂಲಕ ಕನ್ನಡ ಚಿತ್ರರಂಕ್ಕೆ ಎಂಟ್ರಿಕೊಟ್ಟರು. ಇವರ ನಟನೆಯ ಡೊಳ್ಳು ಚಿತ್ರ ಕನ್ನಡದ ಅತ್ಯುತ್ತಮ ಪ್ರಾದೇಶಕ ರಾಷ್ಟ್ರ ಪ್ರಶಸ್ತಿ ಪಡೆದಿದೆ.
ರಕ್ಷಕ್ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಅವರ ಪುತ್ರ. ಇವರು 2022ರಲ್ಲಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಬುಲೆಟ್ ಪ್ರಕಾಶ್ ಅವರು ಬದುಕಿದ್ದಾಗ ತಮ್ಮ ಮಗನನ್ನು ಸಿನಿಮಾ ರಂಗಕ್ಕೆ ತರಬೇಕು ಎಂಬ ಕನಸು ಕಂಡಿದ್ದರು. ದುರಾದೃಷ್ಟವಶಾತ್ ಮಗನ ಯಶಸ್ಸು ನೋಡುವ ಮೊದಲೇ ಅವರು ಇಹಲೋಕ ತ್ಯಜಿಸಿದ್ದರು. ಶರಣ್ ಅಭಿನಯದ 'ಗುರು ಶಿಷ್ಯರು' ಸಿನಿಮಾದಲ್ಲಿ ಅಭಿನಯಿಸುವ ಮೂಲಕ ರಕ್ಷಕ್ ತಂದೆಯ ಆಸೆಯನ್ನು ಈಡೇರಿಸಿದ್ದಾರೆ.
ಗೌರೀಶ್ ಅಕ್ಕಿ ಕನ್ನಡದ ಪ್ರಸಿದ್ಧ ನಿರೂಪಕ, ಚಿತ್ರನಟ ಮತ್ತು ನಿರ್ದೇಶಕ. ಕೊಪ್ಪಳ ಜಿಲ್ಲೆಯ ಮುಧೋಳದಲ್ಲಿ ಜನಿಸಿದ ಇವರು ಮಾಹಾರಾಣಿ ಅಮ್ಮಣ್ಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಮಾಧ್ಯಮ ಜಗತ್ತಿನ ಸೆಳೆತದಿಂದಾಗಿ ಹೈದರಾಬಾದಿನಲ್ಲಿ ಈಟಿವಿ ಕನ್ನಡ ಚಾನಲ್ಗೆ ಸೇರಿದರು. 2005ರಲ್ಲಿ `ಟಿವಿ೯ ಕನ್ನಡ ವಾಹಿನಿ ಸೇರಿ 5 ವರ್ಷಗಳ ಕಾಲ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದರು. ನಂತರ `ಸುವರ್ಣ ನ್ಯೂಸ್' ಮತ್ತು `ಸುದ್ದಿ' ಚಾನೆಲ್ನಲ್ಲಿಯೂ ಕೆಲಸ ಮಾಡಿದ್ದಾರೆ. 2016ರಲ್ಲಿ ಇವರು `ಸಿನಿಮಾ ಮೈ ಡಾರ್ಲಿಂಗ್' ಎಂಬ ಚಿತ್ರದ ಕಥೆ ಬರೆದು ನಿರ್ದೇಶಿಸಿದರು. ಚಾರ್ಮಿನಾರ್, ಲೂಸಿಯಾ, ಸಿಪಾಯಿ, 3000 ಮುಂತಾದ ಚಿತ್ರಗಳಲ್ಲಿ ಗೌರೀಶ್ ಅಕ್ಕಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ಆಲ್ಮಾ ಮೀಡಿಯಾ ಸ್ಕೂಲ್ ನಡೆಸುತ್ತಿದ್ದಾರೆ.
ಮೈಕಲ್ ಅಜಯ್ ನೈಜೀರಿಯಲ್ ಕನ್ನಡಿಗ. ಇವರು ಮಾಡೆಲ್ ಹಾಗೂ ಉದ್ಯಮಿ ಕೂಡ. ಸದ್ಯ ಇವರು ಬಿಗ್ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ.
ಸಂಗೀತಾ ಶೃಂಗೇರಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ನಟಿ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿವರಾದ ಈ ನಟಿ, 1996ರ ಮೇ 13ರಂದು ಜನಿಸಿದರು. ಸಂಗೀತಾ 'ಹರ ಹರ ಮಹಾದೇವ' ಕನ್ನಡ ಧಾರವಾಹಿ ಮೂಲಕ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿಕೊಟ್ಟ ಇವರು, ಪಾವರ್ತಿ ಪಾತ್ರದ ಮೂಲಕ ಖ್ಯಾತಿ ಗಳಿಸಿದರು. ಸಂಗೀತಾ ಎ+ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ ಸಾಲಗಾರರ ಸಹಕಾರ ಸಂಘ, 777 ಚಾರ್ಲಿ, ಲಕ್ಕಿಮ್ಯಾನ್, ಶಿವಾಜಿ ಸುರತ್ಕಲ್ 2 ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.
ತನಿಷಾ ಕುಪ್ಪಂಡ ಕನ್ನಡ ಚಿತ್ರರಂಗದ ನಟಿ. 'ಮಂಗಳಗೌರಿ ಮದುವೆ' ಧಾರಾವಾಹಿ ಮೂಲಕ ಮನೆಮಾತಾಗಿದ್ದ ಇವರು 'ಪೆಂಟಗನ್' ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿಕೊಟ್ಟಿದ್ದಾರೆ. ಸದ್ಯ ಇವರು ಬಿಗ್ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ.
ಉರ್ಮಿಳಾ ಈಶಾನಿ ಖ್ಯಾತ ರ್ಯಾಪರ್ ಕಮ್ ಗಾಯಕಿ. ಮೂಲತಃ ಸಾಂಸ್ಕೃತಿಕ ನಗರಿ ಮೈಸೂರಿನವರಾದ ಈಶಾನಿ, ದುಬೈನಲ್ಲಿ ನೆಲೆಸಿದ್ದಾರೆ. ದುಬೈನಲ್ಲಿಯೇ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಮುಗಿಸಿರುವ ಇವರು, ಸಂಗೀತದಲ್ಲಿ ಸಾಕಷ್ಟು ಆಸಕ್ತಿ ಹೊಂದಿದ್ದಾರೆ. ಈಶಾನಿ ಈಗಾಗಲೇ 17 ಇಂಗ್ಲಿಷ್ ಆಲ್ಬಂ ಸಾಂಗ್ನಲ್ಲಿ ಹಾಡಿದ್ದಾರೆ. ಕನ್ನಡದಲ್ಲೂ ಮೂರು ಆಲ್ಬಂ ಸಾಂಗ್ ಹಾಡಿ, ಅವುಗಳಿಗೆ ಹೆಜ್ಜೆ ಹಾಕಿದ್ದಾರೆ. ರೈಟರ್ ಊರ್ಮಿಳಾ, ಪ್ರೀಡಮ್ ಈಶಾನಿ ಹಾಡಿರುವ ಕನ್ನಡ ಆಲ್ಬಂ ಸಾಂಗ್ಗಳು. ಸದ್ಯ ಕನ್ನಡದಲ್ಲೂ ಹಾಡು ಮಾಡುತ್ತಿರುವ ಈಶಾನಿಗೆ, ನಟಿಸಬೇಕೆಂಬ ಆಸೆಯೂ ಇದೆಯಂತೆ.
ಭಾಗ್ಯಶ್ರೀ ಕನ್ನಡ ಕಿರುತೆರೆಯ ಜನಪ್ರಿಯ ನಟಿ. ಇವರು ಲಕ್ಷ್ಮೀ ಬಾರಮ್ಮ ಧಾರವಾಹಿಯಲ್ಲಿ ಕುಮದಾ ಪಾತ್ರದ ಮೂಲಕ ಸಾಕಷ್ಟು ಖ್ಯಾತಿಯನ್ನು ಗಳಿಸಿದ್ದಾರೆ. ಸದ್ಯ ಇವರು ಬಿಗ್ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ.


Click it and Unblock the Notifications