ಬಿಗ್ಬಾಸ್ ಕನ್ನಡ ಸೀಸನ್ 11 ಆರಂಭವಾಗಿ ಒಂದು ವಾರ ಕಳೆದಿದೆ. ಮೊದಲ ವಾರದ ಕಿಚ್ಚನ ಪಂಚಾಯ್ತಿಗೆ ವೀಕ್ಷಕರು ಕಾತರದಿಂದ ಕಾಯುತ್ತಿದ್ದರು. ಶನಿವಾರದ ಕಿಚ್ಚನ ಪಂಚಾಯ್ತಿಯಲ್ಲಿ ಸುದೀಪ್ ಪ್ರತಿಯೊಬ್ಬ ಸ್ಪರ್ಧಿಯೊಂದಿಗೂ ಸಿಕ್ಕಾಪಟ್ಟೆ ಕೂಲ್ ಆಗಿ ಅವರವರ ಸರಿ-ತಪ್ಪುಗಳನ್ನು ಮನವರಿಕೆ ಕೊಟ್ಟಿದ್ದಾರೆ. ಇದರ ಜೊತೆಗೆ ಲಾಯರ್ ಜಗದೀಶ್ ಅವರಿಗೂ ತಮ್ಮ ಮಾತಿನ ಮೂಲಕವೇ ಬಿಸಿ ಮುಟ್ಟಿಸಿದ್ದಾರೆ. ಹಾಗಾದ್ರೆ, ಈ ವಾರ ಮನೆಯಿಂದ ಹೊರಹೋಗೋದ್ಯಾರು ಎಂಬ ಮಾಹಿತಿ ಇಲ್ಲಿದೆ.