

Click it and Unblock the Notifications
ಬಿಗ್ ಬಾಸ್ ಕನ್ನಡ ಸೀಸನ್ 9 ಈ ಬಾರಿ ವಿಶಿಷ್ಠವಾಗಿರುತ್ತೆ. ಅನುಭವ ಹೊಂದಿರುವವರು ಹಾಗೂ ಹೊಸಬರು ಮನೆಯೊಳಗೆ ಗ್ರ್ಯಾಂಡ್ ಎಂಟ್ರಿ ಕೋಟ್ಟಿದಾರೆ. ಹೀಗಾಗಿ ಈ ಬಾರಿ ಅನುಭವ ಉಳ್ಳವರು ಹಾಗೂ ಹೊರಬರ ನಡುವೆ ಮೈಂಡ್ ಗೇಮ್ ನಡೆಯಲಿದೆ. ಈ ಎರಡು ಕ್ಯಾಟಗರಿಯಲ್ಲಿ ಯಾರು ಗೆಲ್ಲುತ್ತಾರೆ ಅನ್ನೋದು ಕುತೂಹಲ. ಅಂದ್ಹಾಗೆ ಹೊಸ ಮನೆಯೊಳಗೆ ಪ್ರವೇಶ ಪಡೆದವರ ಪಟ್ಟಿ ಇಲ್ಲಿದೆ.
ದೀಪಿಕಾ ದಾಸ್ 2016ರಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾದ `ನಾಗಿಣಿ' ಸೀರಿಯಲ್ ಮೂಲಕ ಕಿರುತೆರೆ ಪಯಣ ಆರಂಭಿಸಿದರು. ಈ ಧಾರಾವಾಹಿ ಸುಮಾರು 800ಕ್ಕೂ ಹೆಚ್ಚು ಸಂಚಿಕೆ ಮುಗಿಸಿ, ದೀಪಿಕಾರವರಿಗೆ ಒಳ್ಳೆಯ ಖ್ಯಾತಿ ತಂದು ಕೊಟ್ಟಿತು. ಈ ಧಾರಾವಾಹಿಯಲ್ಲಿ ಅಮೃತಾ ಮತ್ತು ನಾಗಿಣಿ ಪಾತ್ರ ಮಾಡಿದ್ದಾರೆ. ನಂತರ ದೀಪಿಕಾ ದಾಸ್ ಬಿಗ್ ಬಾಸ್ ಕನ್ನಡ ಸೀಸನ್ 7ರಲ್ಲಿ ಭಾಗವಹಿಸಿದ್ದ ದೀಪಿಕಾ, ಸೀಸನ್ ೯ರಲ್ಲೂ ಸ್ಪರ್ಧಿಯಾಗಿ ಪ್ರವೇಶ ಪಡೆದಿದ್ದಾರೆ.
ಅನುಪಮಾ ಗೌಡ ಕನ್ನಡ ಕಿರುತೆರೆಯಾ ಜನಪ್ರಿಯ ನಟಿ ಕಮ್ ನಿರೂಪಕಿ. ಇವರು ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ಲೋಕೇಶ್ ಪತ್ರಿಕೆ ಸಿನಿಮಾದ ಮೂಲಕ ಬಾಲ ಕಲಾವಿದೆಯಾಗಿ ಕನ್ನಡ ಹಿತ್ರರಂಗಕ್ಕೆ ಪ್ರವೇಶ ಮಾಡಿದರು. ನಂತರ ಅಕ್ಕ ಎಂಬ ಧಾರಾವಾಹಿ ಮೂಲಕ ಕಿರುತೆರೆಗೆ ಪರಿಚಿತರಾದರು. ನಂತರ ಬಿಗ್ ಬಾಸ್ ಕನ್ನಡ ಸೀಸನ್ ೫ರಲ್ಲಿ ಭಾಗವಹಿಸಿ, ಎಲ್ಲರ ಮನೆ ಮಾತಾದರು. ನಂತರ ಮಜಾ ಭಾರತ, ರಾಜ-ರಾಣಿ, ನನ್ನಮ್ಮ ಸೂಪರ್ ಸ್ಟಾರ್ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ವೀಕ್ಷಕರ ಗಮನ ಸೆಳೆದಿರುವ ಅನುಪಮಾ ಗೌಡ, ಇದೀಗ ಮತ್ತೆ ದೊಡ್ಮನೆ ಪ್ರವೇಶಿಸಿದ್ದಾರೆ.
ಪ್ರಶಾಂತ್ ಸಂಬರಗಿ ಸಾಮಾಜಿಕ ಕಾರ್ಯಕರ್ತ. ಇವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸ್ಯಾಂಡಲ್ವುಡ್ನ ಕೆಲವು ಸೆಲೆಬ್ರಿಟಿಗಳ ಡ್ರಗ್ ವಿವಾದದಿಂದ ಪ್ರಶಾಂತ್ ಟಾಕ್ ಆಫ್ ದಿ ಟೌನ್ ಆದರು. ಪ್ರಶಾಂತ್ ಸಂಬರಗಿ ಬಿಗ್ ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿಯಾಗಿದ್ದರು. ಈಗ ಮತ್ತೆ ಬಿಗ್ ಬಾಸ್ ಕನ್ನಡ ಸೀಸನ್ 9ಕ್ಕೂ ಪ್ರವೇಶ ಪಡೆದಿದ್ದಾರೆ.
ಅರುಣ್ ಸಾಗರ್ ಇವರು ನಾಯಕರಾಗಿ, ನಿರ್ದೇಶಕರಾಗಿ, ನಿರೂಪಕನಾಗಿ, ಹಾಗೂ ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಜೀ ಕನ್ನಡ, ಸುವರ್ಣ ಹೀಗೆ ಹಲವು ಟಿವಿ ಚಾಲನ್ ಗಳಲ್ಲಿ ನಿರೂಪಕನಾಗಿ ಕೆಲಸ ನಿರ್ವಹಿಸಿದ್ದಾರೆ. ಕನ್ನಡ, ತೆಲುಗು ಚಿತ್ರರಂಗದ ಅತ್ಯುತ್ತಮ ನಾಯಕ ನಟರ ಜೊತೆಯಲ್ಲಿ ತಮ್ಮನ್ನು ಗುರುತಿಕೊಂಡಿರುವ ಅರುಣ್ ಸಾಗರ್, ಬಿಗ್ ಬಾಸ್ ಕನ್ನಡ ಸೀಸನ್ ೧ರಲ್ಲಿ ಭಾಗವಹಿಸಿದ್ದರು. ಇದೀಗ ಮತ್ತೆ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಕನ್ನಡ ಧಾರಾವಾಹಿಗಳಲ್ಲಿ ಹೆಚ್ಚು ಜನಮನ್ನಣೆ ಗಳಿಸಿರುವ "ಅಶ್ವಿನಿ ನಕ್ಷತ್ರ" ಧಾರವಾಹಿಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ನಟಿ ಮಯೂರಿ ಕ್ಯಾತರಿ, ಅದ್ಭುತವಾಗಿ ನಟಿಸಿದ್ದರು. ಈ ಧಾರಾವಾಹಿ ಅಭೂತಪೂರ್ವ ಯಶಸ್ಸನ್ನು ಗಳಿಸಿ, ಜನರ ಮನಗೆದ್ದಿತು. ನಂತರ ಹಲವಾರು ಅವಕಾಶಗಳು ಮಯೂರಿ ಅವರನ್ನು ಅರಸಿ ಬಂದವು. ನಟಿ ಮಯೂರಿ 'ಕೃಷ್ಣಲೀಲಾ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟರು. ಕೃಷ್ಣಲೀಲಾ ಯಶಸ್ವಿ ನಂತರ ನಾಗತಿಹಳ್ಳಿ ಚಂದ್ರಶೇಖರ್ ಅವರ ನಿರ್ದೇಶನದಲ್ಲಿ ಮೂಡಿಬಂದ "ಇಷ್ಟಕಾಮ್ಯ" ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ನಂತರ ತಮ್ಮ ಬಹುಕಾಲದ ಗೆಳೆಯ ಅರುಣ್ ಜೊತೆ ಲವ್ ಕಂ ಅರೆಂಜ್ ಮ್ಯಾರೇಜ್ ಆಗಿದ್ದರು. ಮಾಡುವೆ ಬಳಿಕ ನಟನೆಯಿಂದ ಕೊಂಚ ದೂರ ಉಳಿದಿದ್ದ ಮಯೂರಿ, ಬಿಗ್ ಬಾಸ್ ಕನ್ನಡ ಸೀಸನ್ 9ಕ್ಕೆ ಪ್ರವೇಶ ಪಡೆದಿದ್ದಾರೆ.
ದಿವ್ಯಾ ಉರುಡುಗ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಯುವ ಪ್ರತಿಭಾನ್ವಿತ ನಟಿ. ಕಿರುತೆರೆಯಲ್ಲಿ ಕೆಲವು ಸೀರಿಯಲ್ಗಳ ಮೂಲಕ ಮನೆಮಾತಾಗಿರುವ ದಿವ್ಯಾ `ಹುಲಿರಾಯ' ಚಿತ್ರದಿಂದ ಚಂದನವನದಲ್ಲಿ ಸಿನಿಪಯಣ ಆರಂಭಸಿದರು. ಕಿರುತೆರೆಯಲ್ಲಿ `ಚಿಟ್ಟೆ ಹೆಜ್ಜೆ',``ಅಂಬಾರಿ',`ಖುಷಿ', `ಓಂ ಶಕ್ತಿ ಓಂ ಶಾಂತಿ' ಸೀರಿಯಲ್ಗಳಲ್ಲಿ ನಟಿಸಿ ಕನ್ನಡ ಪ್ರೇಕ್ಷಕರಿಗೆ ಹತ್ತಿರವಾದರು. ಉದಯ ಟಿವಿಯಲ್ಲಿ ಪ್ರಸಾರವಾದ `ಸೂಪರ್ ಕಬ್ಬಡ್ಡಿ' ರಿಯಾಲಿಟಿ ಶೋನಲ್ಲಿ ಕೂಡ ಭಾಗಿಯಾಗಿದ್ದರು. ರಾಜಕೀಯ ಆಧಾರಿತ `ಧ್ವಜ' ಮತ್ತು `ಫೇಸ್ 2 ಪೇಸ್' ಎಂಬ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದ ಬಿಗ್ ಬಾಸ್ ಕನ್ನಡ ಸೀಸನ್ ೮ರಲ್ಲಿ ಭಾಗವಹಿಸಿದ್ದರು. ಇದೀಗ ಮತ್ತೆ ಬಿಗ್ ಬಾಸ್ ಕನ್ನಡ ಸೀಸನ್ 9ಕ್ಕೆ ಪ್ರವೇಶ ಮಾಡಿದ್ದಾರೆ.
ರೂಪೇಶ್ ಶೆಟ್ಟಿ ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ. ಇವರು ಕನ್ನಡದಲ್ಲಿ `ನಿಶಬ್ಧ 2',`ಡೇಂಜರ್ ಜೋನ್',`ಪಿಶಾಚಿ 2' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಗಿರಿಗಿಟ್ ಸಿನಿಮಾದಿಂದ ಪ್ರಸಿದ್ಧಿ ಪಡೆದಿದ್ದಾರೆ. ಕನ್ನಡ ಬಿಗ್ ಬಾಸ್ ನ ಒಟಿಟಿ ಸೀಸನ್ 1ರಲ್ಲಿ ಭಾಗವಹಿಸಿದ್ದ ರೂಪೇಶ್ ಶೆಟ್ಟಿ, ಮೊದಲ ಒಟಿಟಿ ಸೀಸನ್ನ ವಿನ್ನರ್ ಆಗಿ ಹೊರಹೊಮ್ಮಿದ್ದರು. ಈ ಮೂಲಕ ಟಿವಿ ಸೀಸನ್ಗೆ ಆಯ್ಕೆಯಾಗಿದ್ದರು.
ರಾಕೇಶ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ ಮತ್ತು ಗಾಯಕ. `ಜೋಶ್' ಚಿತ್ರದಿಂದ ಮುನ್ನೆಲೆಗೆ ಬಂದ ರಾಕೇಶ್, ನಂತರ `ಮನಸಾಲಜಿ',ಮಂದಹಾಸ' ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಕೆಲ ಚಿತ್ರಗಳಲ್ಲಿ ಖಳನಾಯಕನಾಗಿಯೂ ನಟಿಸಿರುವ ರಾಕೇಶ್ `ಕೋಟಿಗೊಂದು ಲವ್ ಸ್ಟೋರಿ' ಚಿತ್ರದಲ್ಲಿ ಹಿನ್ನಲೆ ಗಾಯಕನಾಗಿ ಒಂದು ಗೀತೆಯನ್ನು ಹಾಡಿದ್ದರು. ರ್ಯಾಪ್ ಗೀತೆಗಳನ್ನು ಹಾಡಿ ಗಮನ ಸೆಳೆದಿರುವ ರಾಕೇಶ್ ಕನ್ನಡ ಬಿಗ್ ಬಾಸ್ ನ ಒಟಿಟಿ ಸೀಸನ್ 1 ರಲ್ಲಿ ಭಾಗವಹಿಸಿದ್ದರು. ಒಟಿಟಿ ಸೀಸನ್ನಿಂದ ಟಿವಿ ಸೀಸನ್ಗೆ ಆಯ್ಕೆಯಾಗಿದ್ದ ರಾಕೇಶ್ ಅಡಿಗ, ಮತ್ತೆ ದೊಡ್ಮನೆ ಪ್ರವೇಶಿಸಿದ್ದಾರೆ.
ಸಾನ್ಯಾ ಅಯ್ಯರ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು ಪುಟ್ಟ ಗೌರಿ ಮದುವೆ ಸೀರಿಯಲ್ ಮೂಲಕ ಚಿರಪರಿಚಿತರಾಗಿದ್ದಾರೆ. ಮಲಯಾಳಂ ನ ' ಆರಾರೋ..ನೀಯಾರೋ' ಎಂಬ ಅಲ್ವಮ್ ಸಾಂಗ್ ನಲ್ಲಿ ಕಾಣಿಸಿಕೊಂಡಿದ್ದರು. ಕನ್ನಡದ ಡ್ಯಾನ್ಸಿಂಗ್ ರಿಯಾಲಿಟಿ ಶೋ ನಲ್ಲಿ ಕೂಢ ಅಭಿನಯಿಸಿದ್ದಾರೆ. 'ಗುಲಾಬ್ ಜಾಮೂನ್' ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಮೊದಲ ಓಟಿಟಿ ಬಿಗ್ ಬಾಸ್ ನಲ್ಲಿ ಸ್ಫರ್ದಿಯಾಗಿ ಭಾಗವಹಿಸಿದ್ದ ಸಾನ್ಯಾ ಅಯ್ಯರ್, ಸದ್ಯ ಟಿವಿ ಸೀಸನ್ಗೆ ಎಂಟ್ರಿ ಕೊಟ್ಟಿದ್ದಾರೆ.
ಆರ್ಯವರ್ಧನ್ ಕನ್ನಡದ ಪ್ರಖ್ಯಾತ ಸಂಖ್ಯಾಶಾಸ್ತ್ರಜ್ಞ. ಇವರ ಮೂಲ ಹೆಸರು ವರದರಾಜ್. ಹಲವು ವಿವಾದಗಳನ್ನು ಹೊಂದಿರುವ ಇವರು ಸದಾ ಮನರಂಜನಾ ವಾಹಿನಿಗಳಲ್ಲಿ ತಮ್ಮ ಕಾರ್ಯಕ್ರಮಗಳ ಮೂಲಕ ಪ್ರಸಿದ್ಧಿ ಪಡೆದಿದ್ದಾರೆ. ಇವರ ಮೇಲೆ ಆಂಧ್ರ ಮೂಲದ ಮಹಿಳೆಯೊಬ್ಬರು ಅತ್ಯಾಚಾರದ ಕೇಸ್ ಅನ್ನು ದಾಖಲು ಮಾಡಿದ್ದರು. ಹಾಗೇ ಕೆಲ ಸಲ ಐಪಿಎಲ್ ಮುನ್ಸೂಚನೆ ನೀಡಿ ಪೇಚೆಗೆ ಸಿಕ್ಕಿಕೊಂಡಿದ್ದುಂಟು. ಕನ್ನಡ ಬಿಗ್ ಬಾಸ್ ನ ಒಟಿಟಿ ಸೀಸನ್ 1ರಲ್ಲಿ ಭಾಗವಹಿಸಿದ್ದ ಅವರು, ಟಿವಿ ಸೀಸನ್ಗೆ ಆಯ್ಕೆಯಾಗಿದ್ದರು. ಇದೀಗ ದೊಡ್ಮನೆ ಪ್ರವೇಶ ಮಾಡಿದ್ದಾರೆ.
ಕಾವ್ಯಶ್ರೀ ಗೌಡ ಮಂಗಳಗೌರಿ ಧಾರಾವಾಹಿ ಖ್ಯಾತಿ ಪಡೆದಿದ್ದಾರೆ. ಕಾವಶ್ರೀ ಹುಟ್ಟಿದ್ದು ಚನ್ನಪಟ್ಟಣದಲ್ಲಿ. ಧಾರಾವಾಹಿಗೆ ಬರುವ ಮುನ್ನ ಖಾಸಗಿ ವಾಹಿನಿಯಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಕಾವ್ಯಶ್ರೀ ಅವರು ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ಓದುತ್ತಿರುವಾಗಲೇ ನಿರೂಪಣೆ ಕೆಲಸ ಮಾಡುತ್ತಿದ್ದರು. ಡಿಗ್ರಿ ಮುಗಿಯುತ್ತಿದ್ದಂತೆ ಧಾರಾವಾಹಿಗಳಿಗೆ ಆಡಿಷನ್ಸ್ ನೀಡುತ್ತಿದ್ದರು.
ನೇಹಾ ಗೌಡ 'ಲಕ್ಷ್ಮಿ ಬಾರಮ್ಮ' ಬಾರಮ್ಮ ಧಾರಾವಾಹಿಯ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ಈ ಧಾರಾವಾಹಿಯಲ್ಲಿ ಗೊಂಬೆ ಪಾತ್ರ ನಿರ್ವಹಿಸುವಾ ಮೂಲಕ ಮನೆಮಾತಾಗಿದ್ದರು. ಜೊತೆಗೆ ತಮಿಳು ಸೀರಿಯಲ್ ನಲ್ಲೂ ನಟಿಸುತ್ತಿದ್ದಾರೆ. ಸದ್ಯ ನೇಹಾ ಗೌಡ ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಭಾಗವಹಿಸಿದ್ದಾರೆ.
ಇವರು ರಿವ್ಯೂವ್ ನವಾಜ್ ಎಂದೇ ಸಾಕಷ್ಟು ಖ್ಯಾತಿಯನ್ನು ಪಡೆದಿದ್ದಾರೆ. ಇವರು ಕಾಲೇಜಿಗೆ ಚಕ್ಕರ್ ಹಾಕಿ, ಪ್ರತಿ ಶುಕ್ರವಾರ ಚಿತ್ರಮಂದಿರಕ್ಕೆತೆರಳುತ್ತಿದ್ದ ಇವರು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಜೊತೆಗೆ ಸಾವಿರಾರು ಅನುಯಾಯಿಗಳನ್ನು ಹೊಂದಿದ್ದಾರೆ.
ವಿನೋದ್ ಗೊಬ್ರಗಾಲ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಜೊತೆಗೆ ಈ ಕಾರ್ಯಕ್ರಮದ ರನ್ನರ್ ಅಪ್ ಕೂಡ ಆಗಿದ್ದರು. ಇದೀಗ ಅವರು ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಭಾಗವಹಿಸಿದ್ದಾರೆ.
ಐಶ್ವರ್ಯ ರಾಯ್ ಅವರು ಬೈಕ್ ರೇಸರ್. ಐಶ್ವರ್ಯ ರಾಯ್ ಮೂಲತಃ ಬೆಂಗಳೂರಿನವರು. ಇವರು ಎಫ್ಐಎಂ ಬಜಾಸ್ ವಿಶ್ವ ಚಾಂಪಿಯನ್ಶಿಪ್ ಅನ್ನು ಗೆದ್ದಿದ್ದಾರೆ ಮತ್ತು ಮೋಟಾರ್ ಸ್ಪೋರ್ಟ್ಸ್ನಲ್ಲಿ ವಿಶ್ವ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾಗಿದ್ದಾರೆ. ಸದ್ಯ ಐಶ್ವರ್ಯ ರಾಯ್ ಬಿಗ್ ಬಾಸ್ ಕನ್ನಡ ಸೀಸನ್ 9ಕ್ಕೆ ಪ್ರವೇಶ ಪಡೆದಿದ್ದಾರೆ.
ದರ್ಶ್ ಚಂದ್ರಪ್ಪ ನಟ ಹಾಗೂ ಮಾಡೆಲ್. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸೀತಾ ವಲ್ಲಭ ಧಾರಾವಾಹಿಯಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದರು. ಎಂಸಿಎ ಪದವೀಧರನಾದ ದರ್ಶ್ ಚಂದ್ರಪ್ಪ, ದುರ್ಗಾ ಧಾರಾವಾಹಿಯ ನಕುಲ್ ಆಗಿ ಮನೆ ಮಾತಾಗಿದ್ದರು. ತ್ರೀ ರೋಸಸ್ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ.
ಅಮೂಲ್ಯ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಜೀ ಕನ್ನಡದಲ್ಲಿ ಪ್ರಸಾರವಾಗುವ ಕಮಲಿ ಧಾರಾವಾಹಿ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. 1993 ಜನೇವರಿ 8ರಂದು ಮೈಸೂರಿನಲ್ಲಿ ಜನಿಸಿದರು. ತಂದೆ ಓಂಕಾರ ಗೌಡ. 2014 ರಲ್ಲಿ ಸ್ವಾರ್ ಸುವರ್ಣ ವಾಹಿನಿಯ ಸ್ವಾತಿ ಮುತ್ತು ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟರು. ನಂತರ ಕಮಲಿ ಸೀರಿಯಲ್ ಮೂಲಕ ಪ್ರಸಿದ್ಧಿ ಪಡೆದಿದ್ದಾರೆ. ಕಂಪ್ಯೂಟರ್ ಸೈನ್ಸ್ ನಲ್ಲಿ ಡಿಪ್ಲೋಮಾ ಪಡೆದಿದ್ದಾರೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಭಾಗವಹಿಸಿದ್ದಾರೆ.


Click it and Unblock the Notifications