ಚಲನಚಿತ್ರಗಳ ಒಳನೋಟ
ಚಿತ್ರರಂಗದಲ್ಲಿ ಎಷ್ಟೇ ದೊಡ್ಡ ಸ್ಟಾರ್ ನಟರಾದರೂ ಕೂಡ ಏರುಪೇರುಗಳನ್ನು ಎದುರಿಸಲೇಬೇಕಾಗುತ್ತದೆ. ಹಲವು ಬಾರಿ ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ನಟರು ಕೂಡ ಸಾಲು-ಸಾಲು ಸೋಲು ಅನುಭವಿಸುವ ಸಂದರ್ಬ ಬಂದೊದಗುತ್ತದೆ. ಅವರ ಸಿನಿಮಾ ಸೋಲು ಅಥವಾ ಗೆಲವು ಸಾಧಿಸಲು ಅವರೊಬ್ಬರೇ ಕಾರಣರಾಗಿರುವುದಿಲ್ಲ. ಬದಲಾಗಿ ಒಂದು ಸಿನಿಮಾಗೆ ಕಥೆ ಬಹಳ ಮುಖ್ಯವಾಗಿರುತ್ತದೆ. ಕಥೆ ಚೆನ್ನಾಗಿದ್ದರೆ ಪ್ರೇಕ್ಷಕರು ಕೈ ಹಿಡಿಯುತ್ತಾರೆ. ಕೆಲವೊಮ್ಮೆ ನಟರು ಉತ್ತಮ ಕಥೆ ಆಯ್ದುಕೊಳ್ಳುವಲ್ಲಿ ಎಡವಿ ಸೋಲನ್ನು ಅನುಭವಿಸುತ್ತಾರೆ. ಸದ್ಯ ಗಣೇಶ್ ಹಾಗೂ ದುನಿಯಾ ವಿಜಯ್ ಸಿನಿಮಾಗಳ ಮೂಲಕ ಚಂದನವನಕ್ಕೆ ಹೊಸ ಹುರುಪು ಸಿಕ್ಕಿದೆ. ಇನ್ನು ಕೆಲ ನಟರು ಕಂಬ್ಯಾಕ್ಗಾಗಿ ಕಾಯ್ತಿದ್ದಾರೆ.