X
ಹೋಮ್ ಚಲನಚಿತ್ರಗಳ ಒಳನೋಟ

ಹುಲಿ ಉಗುರು ಮಾದರಿಯ ಲಾಕೆಟ್ ಧರಿಸಿರುವ ಸ್ಯಾಂಡಲ್‌ವುಡ್‌ ನಟರ ಫೋಟೋ ವೈರಲ್!

Author Sowmya Bairappa | Published: Wednesday, October 25, 2023, 04:42 PM [IST]

ಹುಲಿ ಉಗುರಿನ ವಿಚಾರ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಅಸಲಿ ಹುಲಿ ಉಗುರು ಹೊಂದಿರುವ ಲಾಕೆಟ್ ಧರಿಸಿರುವ ಆರೋಪದಲ್ಲಿ ಈಗಾಗಲೇ ಬಿಗ್‌ಬಾಸ್ ಸೀಸನ್ ೧೦ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ನೀಡಲಾಗಿದೆ. ಇದರ ಬೆನ್ನಲೇ ಹಲವು ಸ್ಯಾಂಡಲ್‌ವುಡ್‌ ಕಲಾವಿದರ ಮೇಲೆ ಹುಲಿ ಉಗುರು ಬಳಸಿದ ಆರೋಪ ಕೇಳಿಬಂದಿದೆ.


cover image
ದರ್ಶನ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ತಮ್ಮ ಚಿನ್ನದ ಸರದಲ್ಲಿ ಹುಲಿಯ ಉಗುರು ಧರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅರಣ್ಯಾಧಿಕಾರಿಗಳಿಗೆ ದೂರು ನೀಡಿ್ದ್ದರು. ವರ್ತೂರು ಸಂತೋಷ್ ಅವರಂತೆಯೇ ದರ್ಶನ್ ಅವರನ್ನು ಠಾಣೆಗೆ ಕರೆಸಬೇಕು. ಜನ ಸಾಮಾನ್ಯರ ಮೇಲೆ ಕ್ರಮ ಕೈಗೊಳ್ಳುವಂತೆಯೇ ಇವರ ಮೇಲೆಯೂ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ದರ್ಶನ್ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ್ದಾರೆ. 

 

ಜಗ್ಗೇಶ್

ನಟ ದರ್ಶನ್ ವಿರುದ್ದ ದೂರು ದಾಖಲಾಗುತ್ತಿದ್ದಂತೆ ನಟ ಹಾಗೂ ರಾಜ್ಯಸಭಾ ಸದಸ್ಯರಾದ ನವರಸ ನಾಯಕ ಜಗ್ಗೇಶ್ ಅವರು ಹುಲಿ ಉಗುರಿನ ಸರ ಹಾಕಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅವರ ವಿರುದ್ಧವೂ ದೂರು ದಾಖಲಿಸಿ ಎಂದು ಒಂದಿಷ್ಟು ಮಂದಿ ಸೋಶಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ. ಆ ಸಂದರ್ಶನದಲ್ಲಿ ಜಗ್ಗೇಶ್, ನನಗೆ 20 ವರ್ಷವಾದಾಗ ನನ್ನಮ್ಮ ನನ್ನ ಮಗ ಹುಲಿ ಇದ್ದಂಗೆ ಇರಬೇಕು ಅಂತ ಒರಿಜಿನಲ್ ಹುಲಿ ಉಗುರಿನಲ್ಲಿ ಈ ಲಾಕೆಟ್ ಇರುವ ಸರ ಮಾಡಿಸಿ ಹಾಕಿದ್ದರು ಎಂದಿದ್ದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ನಿಖಿಲ್ ಕುಮಾರಸ್ವಾಮಿ

ಹುಲಿ ಉಗುರು ಧರಿಸಿರುವ ವಿಚಾರದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಹೆಸರು ಕೂಡ ಮುನ್ನೆಲೆ ಬಂದಿದೆ. ಮದುವೆ ಸಂದರ್ಭದಲ್ಲಿ ನಿಖಿಲ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಬೀರತೆ ಬಗ್ಗೆ ನನಗೆ ಖಂಡಿತಾ ಅರವಿದೆ. ನಾನು ಧರಿಸಿದ್ದ ಹುಲಿಯ ಉಗುರು ಮಾದರಿಯ ಪೆಂಡೆಂಟ್ ಕೃತಕವಾದುದ್ದೇ ಹೊರತು ನೈಜವಾದುದ್ದಲ್ಲ. ಅದು ಈಗಲೂ ನನ್ನ ಬಳಿಯಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷಿಸಬಹುದು ಎಂದಿದ್ದಾರೆ. 

ರಾಕ್ ಲೈನ್ ವೆಂಕಟೇಶ್

ನಟ ದರ್ಶನ್ ಹಾಗೂ ಜಗ್ಗೇಶ್ ಬಳಿಕ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಹುಲಿ ಉಗುರು ಮಾದರಿಯ ಲಾಕೆಟ್ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. 

 

ವಿನಯ್ ಗುರೂಜಿ ಹಾಗೂ ಧನಂಜಯ ಗುರೂಜಿ

ಚಂದನವನದ ನಟರ ಜೊತೆಗೆ ಕುಣಿಗಲ್‌ನ ಬಿದನಕೆರೆಯ ಧನಂಜಯ ಗುರೂಜಿ ಹಾಗೂ ಕೊಪ್ಪದ ಗೌರಿಗದ್ದೆಯ ವಿನಯ್ ಗುರೂಜಿಯವರು ಹುಲಿಯ ಚರ್ಮದ ಮೇಲೆ ಕುಳಿತಿರುವ ಫೋಟೋಗಳು ಕೂಡ ವೈರಲ್ ಆಗುತ್ತಿವೆ. ಈ ಎಲ್ಲರ ಮೇಲೂ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಅಂತ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.    

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+