ಕಾಟೇರ ಸಿನಿಮಾ 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ದರ್ಶನ್ 'ಕಾಟೇರ' ಟೈಟಲ್ಗೆ ಸಂಬಂಧಿಸಿದಂತೆ ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೆ ಟಾಂಗ್ ಕೊಟ್ಟಿದ್ದರು. ಇದೇ ವಿಚಾರ ಇದೀಗ ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಇಬ್ಬರ ನಡುವೆ ಮಾತಿನ ಸಮರ ನಡೆಯುತ್ತಿದೆ. ಇಲ್ಲಿ ಉಮಾಪತಿ ಶ್ರೀನಿವಾಸ್ ಯಾರು? ಅವರ ಹಿನ್ನೆಲೆ ಏನು? ಅವರು ಸಿನಿಮಾ ಇಂಡಸ್ಟ್ರಿಗೆ ಬಂದಿದ್ದು ಹೇಗೆ ಎಂಬ ಮಾಹಿತಿ ಇಲ್ಲಿದೆ.