X
ಹೋಮ್ ಚಲನಚಿತ್ರಗಳ ಒಳನೋಟ

ಚೆಂದನವನದ ಚೆಂದದ ಶೀರ್ಷಿಕೆಗಳು: ಇಂಗ್ಲಿಷ್ ಟ್ರೆಂಡ್ ನಡುವೆ ಅಚ್ಚಕನ್ನಡದ ಶೀರ್ಷಿಕೆ ಹೊಂದಿರುವ ಮುಂಬರುವ ಕನ್ನಡ ಸಿನಿಮಾಗಳಿವು!

Author Sowmya Bairappa | Published: Thursday, September 5, 2024, 02:53 PM [IST]

ಸಿನಿಮಾ ಆಕರ್ಷಕ ಟೈಟಲ್ ಬಹಳ ಮುಖ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಕನ್ನಡ ಸಿನಿಮಾಗಳಿಗೆ ಕನ್ನಡೇತರ ಶೀರ್ಷಿಕೆ ನೀಡುವ ಟ್ರೆಂಡ್ ಹೆಚ್ಚಾಗಿದೆ. ಸದ್ಯ ಸ್ಟಾರ್ ನಟರು ಹೆಚ್ಚಾಗಿ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿರುವುದರಿಂದ ಶೀರ್ಷಿಕೆಗಳು ಇಂಗ್ಲಿಷ್ ಮಯವಾಗುತ್ತಿವೆ. ಈ ಬೆಳವಣಿಗೆ ಕನ್ನಡ ಚಿತ್ರರಂಗಕ್ಕೆ ಮಾರಕವಾಗಿದೆ. ಕನ್ನಡದ ಕೆಲ ನಿರ್ದೇಶಕರು ಮಾತ್ರ ತಮ್ಮ ಸಿನಿಮಾಗಳಿಗೆ ಕನ್ನಡ ಶೀರ್ಷಿಕೆಗಳನ್ನೇ ಇಟ್ಟುಕೊಂಡು ಬಂದಿದ್ದಾರೆ. ಆ ಮೂಲಕ ಕನ್ನಡಪ್ರೇಮ ಮೆರೆಯುತ್ತಾ ಬಂದಿದ್ದಾರೆ. ಇಲ್ಲಿ ಅಚ್ಚಕನ್ನಡದ ಶೀರ್ಷಿಕೆ ಹೊಂದಿರುವ ಮುಂಬರುವ ಕನ್ನಡ ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.


cover image
ಭೈರವನ ಕೊನೆ ಪಾಠ

ನಿರ್ದೇಶಕ ಹೇಮಂತ್ ರಾವ್ ಅವರು ತಮ್ಮ ಮೊದಲ ಸಿನಿಮಾದಿಂದಲೂ ಕನ್ನಡ ಪ್ರೀತಿ ಮೆರೆಯುತ್ತಲೇ ಇದ್ದಾರೆ. ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿ, ಸಪ್ತ ಸಾಗರದಾಚೆ ಎಲ್ಲೋ ಸಿನಿಮಾಗಳನ್ನು ಮಾಡಿದ್ದ ಹೇಮಂತ್ ರಾವ್ ಸದ್ಯ  ಭೈರವನ ಕೊನೆ ಪಾಠ ಸಿನಿಮಾ ಮಾಡ್ತಿದ್ದಾರೆ. ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಾಯಕನಾಗಿ ನಟಿಸುತ್ತಿದ್ದು,  4 ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಮೂಡಿಬರಲಿದೆ. ಭೈರವನ ಕೊನೆ ಪಾಠ ಸಿನಿಮಾದ ಪೋಸ್ಟರ್‌ನಲ್ಲಿ ಬೆಟ್ಟ.. ಆ ಬೆಟ್ಟದ ನಡುವೆ ಅರಳಿದ ಹೂವು.. ಸುತ್ತಾ ಭೂಮಿಗಿಳಿದ ಬಾಣಗಳು. ಇನ್ನು ಟೈಟಲ್‌ ಹಿಂದೆ ಇರುವ ಗರುಡ ಚಿತ್ರ. ಇದನ್ನೆಲ್ಲಾ ಗಮನಿಸಿದರೆ ಇದೊಂದು ಪೀರಿಯಡ್ ಆಕ್ಷನ್ ಥ್ರಿಲ್ಲರ್ ಸಿನಿಮಾ ಅನ್ನೋದು ಗೊತ್ತಾಗುತ್ತಿದೆ. 


ರಕ್ಕಸಪುರದೋಳ್

ರಾಜ್ ಬಿ ಶೆಟ್ಟಿ ಅಭಿನಯದ ಮುಂದಿನ ಸಿನಿಮಾಗೆ 'ರಕ್ಕಸಪುರದೋಳ್' ಎಂಬ ಟೈಟಲ್ ಇಡಲಾಗಿದೆ. ಈ ಚಿತ್ರವನ್ನು  ಜೋಗಿ ಪ್ರೇಮ್ ಅವರೊಂದಿಗೆ ಕಥೆ, ಚಿತ್ರಕಥೆ, ಮತ್ತು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿ ಅನುಭವ ಹೊಂದಿರುವ ರವಿ ಸಾರಂಗ ನಿರ್ದೇಶನ ಮಾಡುತ್ತಿದ್ದಾರೆ. ರಕ್ಕಸ ಅಂದರೆ ರಾಕ್ಷಸ, ಪುರ ಅಂದರೆ ಊರು. ಮನುಷ್ಯನಲ್ಲಿ ಎರಡು ಗುಣಗಳಿರುತ್ತವೆ. ಒಂದು ಒಳ್ಳೆಯದು, ಇನ್ನೊಂದು ಕೆಟ್ಟದ್ದು. ಈ ಸಿನಮಾ ಕಥೆ ಕೂಡ ಶೀರ್ಷಿಕೆ ಸುತ್ತಲೇ ಸುತ್ತುತ್ತದೆ. ಅಂದ್ಹಾಗೆ ರಕ್ಕಸಪುರದೋಳ್ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ

ಈ ವಾರ ಬಿಡುಗಡೆಯಾಗುತ್ತಿರುವ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ಹಾಗೂ ವಿಹಾನ್ ಗೌಡ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಸಿನಿಮಾಗೆ 'ಇಬ್ಬನಿ ತಬ್ಬಿದ ಇಳೆಯಲಿ' ಎಂಬ ಅಚ್ಛ ಕನ್ನಡದ ಟೈಟಲ್ ಇಡಲಾಗಿದೆ. ಈ ಸಿನಿಮಾವನ್ನು ಸಿನಿಮಾವನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನ ಮಾಡಿದ್ದಾರೆ. ಉಳಿದಂತೆ ಗಿರಿಜಾ ಶೆಟ್ಟರ್, ಮಯೂರಿ ನಟರಾಜ, ಶಂಕರ್ ಮೂರ್ತಿ  ಎಸ್.ಆರ್ ಮುಂತಾದವರು ತಾರಾಗಣದಲ್ಲಿದ್ದಾರೆ. ಗಗನ್ ಬಡೇರಿಯಾ ಸಂಗೀತ, ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ ಹಾಗೂ ರಕ್ಷಿತ್ ಕಾಫು ಸಂಕಲನ ಚಿತ್ರಕ್ಕಿದೆ. ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

ವಿದ್ಯಾಪತಿ

ನಟ ಧನಂಜಯ್ ಅವರ ಡಾಲಿ ಪಿಕ್ಚರ್ಸ್‌ನ ನಾಲ್ಕನೇ ಸಿನಿಮಾ 'ವಿದ್ಯಾಪತಿ'. ಈ ಚಿತ್ರವನ್ನು ಈ ಹಿಂದೆ ಇಕ್ಕಟ್ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ನಿರ್ದೇಶನ ಮಾಡುತ್ತಿದ್ದಾರೆ. ನಟ ನಾಗಭೂಷಣ್ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದು, ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ ಹಾಗೂ ಅರ್ಜುನ್ ಮಾಸ್ಟರ್ ಆಕ್ಷನ್ ಈ ಸಿನಿಮಾಕ್ಕಿದೆ.  


ರುದ್ರ ಗರುಡ ಪುರಾಣ

ರುದ್ರ ಗರುಡ ಪುರಾಣ ಸಿನಿಮಾವನ್ನು ಕೆ.ಎಸ್. ನಂದೀಶ್ ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನೂ ಅವರೇ ಬರೆದಿದ್ದಾರೆ. ಚಿತ್ರದಲ್ಲಿ ರಿಷಿ ನಾಯಕನಾಗಿ ಹಾಗೂ ಪ್ರಿಯಾಂಕ ಕುಮಾರ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಪಾಪ, ಪುಣ್ಯ, ಕರ್ಮದ ಕಥೆಯುಳ್ಳ ಈ ಸಿನಿಮಾದಲ್ಲಿ ನಟ ರಿಷಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಕೆಲ ಸಿನಿಮಾಗಳ ಶೀರ್ಷಿಕೆಗಳು ಕನ್ನಡದಲ್ಲೇ ಮೂಡಿಬರುತ್ತಿವೆ. 

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+