X
ಹೋಮ್ ಚಲನಚಿತ್ರಗಳ ಒಳನೋಟ

ವಿವಿಧ ಕಾರಣಗಳಿಗೆ ಸೆರೆವಾಸ ಅನುಭವಿಸಿದ್ದ ಕನ್ನಡದ ನಟ-ನಟಿಯರಿವರು!

Author Sowmya Bairappa | Updated: Tuesday, June 11, 2024, 04:21 PM [IST]

ಕೆಲ ಸ್ಟಾರ್ ನಟರು ಸೇರಿದಂತೆ ಹಲವರು ವಿವಿಧ ಕಾರಣಗಳಿಗೆ ಜೈಲುವಾಸ ಅನುಭವಿಸಿದ್ದಾರೆ. ಇಲ್ಲಿ ಕನ್ನಡದ ಯಾವೆಲ್ಲಾ ನಟರು ಸೆರೆವಾಸ ಅನುಭವಿಸಿದ್ದಾರೆ ಅದು ಯಾವ ಕಾರಣಕ್ಕೆ ಎಂಬ ಮಾಹಿತಿಯನ್ನು ನೀಡಲಾಗಿದೆ.


cover image
ದರ್ಶನ್

ದರ್ಶನ್ 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ನಡೆಸಿದ್ದು ಭಾರೀ ಚರ್ಚೆ ಹುಟ್ಟುಹಾಕಿತ್ತು. ದರ್ಶನ್ 2011ರ ಸೆಪ್ಟೆಂಬರ್ 8, 2011ರಂದು ತಮ್ಮ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು ಎನ್ನಲಾಗಿತ್ತು. ಈ ಕುರಿತಂತೆ ಸ್ವತಃ ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾದ ಮರುದಿನವೇ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ನಟಿ ನಿಖಿತಾ ತುಕ್ರಾಲ್ ಹೆಸರು ಕೂಡ ಕೇಳಿಬಂದಿತ್ತು. ಈ ಕೇಸ್‌ನಿಂದಾಗಿ ಚಾಲೆಂಜಿಂಗ್ ಸ್ಟಾರ್ 28 ದಿನಗಳ ಕಾಲ ಜೈಲಿನಲ್ಲಿದ್ದರು. ಇದೇ ಸಮಯದಲ್ಲಿ ಅವರ ನಟನೆಯ 'ಸಾರಥಿ' ಸಿನಿಮಾ ರಿಲೀಸ್ ಆಗಿ ಗೆದ್ದಿತ್ತು. ಆ ನಂತರದಲ್ಲಿ ರಾಜಿ ಸಂಧಾನ ನಡೆದು ಪ್ರಕರಣ ಸುಖಾಂತ್ಯ ಕಂಡಿತ್ತು. ಇದೀಗ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಆಗಿದ್ದಾರೆ.

ದುನಿಯಾ ವಿಜಯ್

ದುನಿಯಾ ವಿಜಯ್ ಗೌಡ ಹಲ್ಲೆ ಮತ್ತು ಕಿಡ್ನಾಪ್ ಪ್ರಕರಣದಲ್ಲಿ ಪರಪ್ಪರನ ಅಗ್ರಹಾರ ಜೈಲು ಸೇರಿದ್ದರು. ೨೦೧೮ರಲ್ಲಿ ವಸಂತನಗರದ ಅಂಬೇಡ್ಕರ್ ಭವನದಲ್ಲಿ ನಡೆಯುತ್ತಿದ್ದ ಬಾಡಿ ಬಿಲ್ಡಿಂಗ್ ಕಾಂಪಿಟೇಶನ್ ಸಂದರ್ಭ ದುನಿಯಾ ವಿಜಯ್ ಹಾಗೂ ಜಿಮ್ ಟ್ರೈನರ್ ಮಾರುತಿ ಗೌಡ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಜಯ್ ಹಾಗೂ ಸಹಚರರು ಮಾರುತಿ ಗೌಡ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ದುನಿಯಾ ವಿಜಯ್ ಅವರನ್ನು ಅರೆಸ್ಟ್ ಮಾಡಲಾಗಿತ್ತು. 

ಅಭಿನಯ

ಕನ್ನಡ ಚಿತ್ರಂಗದ ಹಾಗೂ ಟಿವಿ ಲೋಕದ ಹಿರಿಯ ನಟಿ ಅಭಿನಯ ಕೂಡ ವರದಕ್ಷಿಣೆ ಕೇಸ್‌ನಲ್ಲಿ ಜೈಲು ಪಾಲಾಗಿದ್ದರು. ತಮ್ಮ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ್ದಕ್ಕಾಗಿ ಅಭಿನಯ ಹಾಗೂ ಫೋಷಕರಿಗೆ ಹೈಕೋರ್ಟ್ 2 ವರ್ಷ ಶಿಕ್ಷೆ ವಿಧಿಸಿತ್ತು. ಅವರ ತಾಯಿ ಜಯಮ್ಮಗೆ ೫ ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. 

ಚೇತನ್ ಕುಮಾರ್

ನಟ ಚೇತನ್ ಕುಮಾರ್ ಸದ್ಯ ಸಿನಿಮಾ ಕ್ಷೇತ್ರದಿಂದ ದೂರ ಉಳಿದಿದ್ದಾರೆ. ಸಮಾಜ ಸೇವಕರಾಗಿಯೂ ಗುರುತಿಸಿಕೊಂಡಿದ್ದ ಅವರು ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಾಗುತ್ತಾರೆ. 2023ರಲ್ಲಿ ಹಿಂದುತ್ವದ ಬಗ್ಗೆ ಅವಹೇಳನಾಕಾರಿ ಫೋಸ್ಟ್ ಹಾಕಿದ್ದರು. ಈ ಕುರಿತು ಹಿಂದೂಪರ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರು.  ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿತ್ತು. ಈ ಕಾರಣಕ್ಕೆ ಚೇತನ್ ಕುಮಾರ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು.

 

ಸೋನು ಶ್ರೀನಿವಾಸ್ ಗೌಡ

ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಗೊತ್ತಿಲ್ಲದವರಿಲ್ಲ. ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಇರುವ ಸೋನು, ಅಷ್ಟೇ ನೆಗೆಟಿವ್ ಕಮೆಂಟ್‌ಗಳಿಗೆ ಹೆಸರುವಾಸಿ. ಜೊತೆಗೆ ಸಿಕ್ಕಾಪಟ್ಟೆ ಟ್ರೋಲ್‌ಗೆ ಗುರಿಯಾದವರು ಇವರೇ. ಸೋನು ಶ್ರೀನಿವಾಸ್ ಗೌಡ ಬಿಗ್‌ಬಾಸ್‌ ಕನ್ನಡ ಓಟಿಟಿ ಸೀಸನ್ 1ರಲ್ಲಿ ಭಾಗವಹಿಸಿದ್ದರು. ಸೋನು ಶ್ರೀನಿವಾಸ್ ಗೌಡ ಇತ್ತೀಚೆಗೆ ಅಕ್ರಮವಾಗಿ ಮಗು ದತ್ತು ಪ್ರಕಕರಣದಲ್ಲಿ ಜೈಲು ಸೇರಿದ್ದರು. ಸದ್ಯ ಜಾಮೀನು ಮೇರೆಗೆ ಅವರು ಹೊರಬಂದಿದ್ದಾರೆ. 

ರಾಗಿಣಿ ದ್ವಿವೇದಿ-ಸಂಜನಾ ಗಲ್ರಾನಿ

ಸ್ಯಾಂಡಲ್‌ವುಡ್ ನಟಿಮಣಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಡ್ರಗ್ಸ್‌ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು.  2020ರ ಸೆಪ್ಟೆಂಬರ್ 4ರಂದು ನಗರದ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವೀವೇದಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದರು. ಇದಾದ ನಾಲ್ಕು ದಿನಗಳ ಬಳಿಕ ಸೆಪ್ಟೆಂಬರ್ 8ರಂದು ಸಂಜನಾ ಗಲ್ರಾನಿಯನ್ನು ಬಂಧಿಸಲಾಯಿತು. ಆ ನಂತರ ರಾಹುಲ್, ವೀರೇನ್ ಖನ್ನಾ, ಆದಿತ್ಯ ಆಳ್ವಾ, ರಾಗಿಣಿ ಆಪ್ತ ರವಿಕುಮಾರ್, ಶಿವಪ್ರಕಾಶ್ ಇನ್ನೂ ಹಲವಾರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸಂಜನಾ ಹಾಗೂ ರಾಗಿಣಿ ಇಬ್ಬರೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧಿಗಳಾಗಿ ಎರಡು ತಿಂಗಳಿಗೂ ಹೆಚ್ಚು ದಿನ ಕಾಲ ಕಳೆಯಬೇಕಾಯಿತು. ರಾಗಿಣಿ 140 ದಿನಗಳ ಕಾಲ ಜೈಲಿನಲ್ಲಿದ್ದರೆ ಸಂಜನಾ ಗಲ್ರಾನಿ 85 ದಿನ ಜೈಲಿನಲ್ಲಿದ್ದರು. 

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+