X
ಹೋಮ್ ಚಲನಚಿತ್ರಗಳ ಒಳನೋಟ

ಕಿರೀಟಿ ರೆಡ್ಡಿ ಟು ಅರ್ಜುನ್ ಬಂಗಾರಪ್ಪ: ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ 7 ರಾಜಕೀಯ ವ್ಯಕ್ತಿಗಳ ಮಕ್ಕಳಿವರು!

Author Sowmya Bairappa | Published: Monday, March 11, 2024, 04:31 PM [IST]

ಸಿನಿಮಾರಂಗದಲ್ಲಿ ಹೆಸರು ಗಳಿಸಬೇಕೆಂದರೆ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾಗುತ್ತದೆ. ಯಾವುದೇ ತಯಾರಿಯಿಲ್ಲದೇ, ಕೇವಲ ಇನ್‌ಫ್ಯುಯೆನ್ಸ್‌ನಿಂದ ಸಿನಿಮಾದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ. ಇತ್ತೀಚೆಗೆ ರಾಜಕೀಯದಲ್ಲಿ ಹೆಸರು ಮಾಡಿದ ಅನೇಕ ನಾಯಕರ ಮಕ್ಕಳು ಸಿನಿಮಾ ಕ್ಷೇತ್ರದತ್ತ ಮುಖ ಮಾಡುತ್ತಿದ್ದಾರೆ. ಬಣ್ಣದ ಲೋಕಕ್ಕೆ ತಮ್ಮ ತಂದೆಯ ರಾಜಕೀಯ ಹೆಸರು ಬಳಸಿಕೊಳ್ಳದೇ ತಮ್ಮದೇ ಮಾರ್ಗದಲ್ಲಿ ಸಾಗುತ್ತಿದ್ದಾರೆ. ಇಲ್ಲಿ ಚಂದನವನಕ್ಕೆ ಎಂಟ್ರಿಕೊಟ್ಟ ಕರ್ನಾಟಕದ ಜನಪ್ರಿಯ ರಾಜಕಾರಣಿಗಳ ಮಕ್ಕಳ ಪಟ್ಟಿಯನ್ನು ನೀಡಲಾಗಿದೆ.


cover image
ಕಿರೀಟಿ ರೆಡ್ಡಿ

ರಾಜಕಾರಣಿ ಗಾಲಿ ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ 'ಜೂನಿಯರ್' ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ರಾಧಾಕೃಷ್ಣ ರೆಡ್ಡಿ ನಿರ್ದೇಶನದ ಈ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಿದ್ದು, ರವಿಚಂದ್ರನ್, ಖುಷ್ಬೂ ಮತ್ತು ಜೆನಿಲಿಯಾ ದೇಶಮುಖ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೀತಂ ಗುಬ್ಬಿ ನಿದೇಶನದ ಹಾಗೆ ಸುಮ್ಮನೆ ಸಿನಿಮಾದ ಕಿರಣ್ ಶ್ರೀನಿವಾಸ್ ಈ ಸಿನಿಮಾದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.  ಸಾಯಿ ಕೊರಪಾಟಿಯವರ ವಾರಾಹಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾಗೆ ಬಾಹುಬಲಿ ಖ್ಯಾತಿಯ ಸೆಂಥಿಲ್ ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 

 

ಝೈದ್ ಖಾನ್

ಕಾಂಗ್ರೆಸ್ ಪಕ್ಷದ ಸಿರಿವಂತ ಮತ್ತು ಪ್ರಭಾವಶಾಲಿ ನಾಯಕನಾಗಿರುವ ಜಮೀರ್ ಅಹಮದ್ ಅವರ ಪುತ್ರ ಝೈದ್ ಖಾನ್ ಕೂಡ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟಿದ್ದಾರೆ. ಮುಂಬೈನ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ಅಭಿನಯ ತರಬೇತಿ ಪಡೆದಿದ್ದ ಇವರು, ಜಯತೀರ್ಥ ನಿರ್ದೆಶನದ `ಬನಾರಸ್' ಸಿನಿಮಾ ಮೂಲಕ ಚಂದನವನಕ್ಕೆ ಎಂಟ್ರಿಕೊಟ್ಟರು. ಈ ಸಿನಿಮಾ ತಕ್ಕಮಟ್ಟಿಗೆ ಯಶಸ್ಸು ನೀಡಿತ್ತು. 

ಅರ್ಜುನ್ ಬಂಗಾರಪ್ಪ

ಸಚಿವ ಕುಮಾರ್ ಬಂಗಾರಪ್ಪ ಪುತ್ರ ಅರ್ಜುನ್ ಬಂಗಾರಪ್ಪ ಕೂಡ ಸಿನಿಮಾರಂಗಕ್ಕೆ ಕಾಲಿಡಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಎಂಎಸ್ ರಾಮಯ್ಯ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿರುವ ಅರ್ಜುನ್, ತಂದೆ ಒಡೆತನದ ಶ್ರೀ ರೇಣುಕಾಂಬ ಸ್ಟುಡಿಯೋವನ್ನು ನೋಡಿಕೊಳ್ಳುತ್ತಿದ್ದಾರೆ. ಚೈನೈನಲ್ಲಿ ನಟನಾ ತರಬೇತಿ ಪಡೆದಿರುವ ಇವರು, ಸದ್ಯದಲ್ಲೇ ನಾಯಕನಾಗಿ ತೆಎಮೇಲೆ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ್ ಕಿರುಚಿತ್ರ ಕೂಡ ಮಾಡಿದ್ದಾರೆ. 

ದುಶ್ಯಂತ್ ಶ್ರೀನಿವಾಸ್

ಗುಬ್ಬಿ ಕ್ಷೇತ್ರದ ಶಾಸಕ ಎಸ್‌.ಆರ್ ಶ್ರೀನಿವಾಸ್ ಪುತ್ರ ದುಶ್ಯಂತ್ ಕೂಡ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಈ ಸಿನಿಮಾವನ್ನು ಸಿಂಪಲ್ ಸುನಿ ನಿರ್ದೇಶನ ಮಾಡುತ್ತಿದ್ದು, ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ದುಶ್ಯಂತ್ ಶ್ರೀನಿವಾಸ್ 'ಟೆಂಟ್ ಸಿನಿಮಾ' ಎಂಬ ನಟನಾ ಶಾಲೆಯಲ್ಲಿ ಮೂರು ವರ್ಷದ ಕೋರ್ಸ್ ಮಾಡಿದ್ದಾರೆ. ಜೊತೆಗೆ ಸುಚಿತ್ರಾ ಫಿಲ್ಮ ಸೊಸೈಟಿಯಲ್ಲಿ ಸಿನಿಮಾ ವಿಷಯವಾಗಿ ಕಲಿತಿದ್ದಾರೆ. ಮಾರ್ಷಲ್ ಆರ್ಟ್ಸ್, ಜಿಮ್ನಾಸ್ಟಿಕ್ ಕೂಡ ಕಲಿದ್ದಾರಂತೆ. ಈ ಚಿತ್ರ ಇನ್ನೂ ಚಿತ್ರೀಕರಣದ ಹಂತದಲ್ಲಿದೆ. 

 

ಅನೂಪ್ ರೇವಣ್ಣ

ಕರ್ನಾಟಕದ ಖ್ಯಾತ ರಾಜಕಾರಣಿ H.M.ರೇವಣ್ಣ ಮತ್ತು ನಿರ್ಮಾಪಕಿ ವತ್ಸಲಾ ರೇವಣ್ಣ ಅವರ ಪುತ್ರ ಅನೂಪ್ ಕೂಡ ಈಗಾಗಲೇ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ದಯಾನಂದ ಸಾಗರ ಇಂಜಿನೀಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದ ಇವರು ಚೆನ್ನೈನಲ್ಲಿ ನಟನೆಯ ತರಬೇತಿಯನ್ನು ಮತ್ತು ಚೀನಾದಲ್ಲಿ ಕುಂಗ-ಪು ತರಬೇತಿಯನ್ನು ಪಡೆದಿದ್ದಾರೆ. ಆರ್.ಚಂದ್ರು ನಿರ್ದೇಶನದ `ಲಕ್ಮಣ' ಚಿತ್ರದಿಂದ ಸಿನಿಪಯಣ ಆರಂಭಿಸಿದ ಅನೂಪ್, ನಂತರ ಎಸ್.ನಾರಾಯಣ ನಿರ್ದೇಶನದ `ನಾ ಪಂಟ ಕಣೋ' ಚಿತ್ರದಲ್ಲಿ ನಟಿಸಿದರು. ಇದೀಗ ಧನ್ಯಾ ರಾಮ್‌ಕುಮಾರ್ ಜೊತೆ ಹೈಡ್ ಆಂಡ್ ಸೀಕ್ ಸಿನಿಮಾದಲ್ಲಿ ಅಭಿನಯಿಸಿದ್ದು, ಮಾರ್ಚ್ 15ರಂದು ತೆರೆಗೆ ಬರಲಿದೆ.  

ಸಚಿನ್ ಚೆಲುವನಾರಾಯಣಸ್ವಾಮಿ

ಕರ್ನಾಟಕದ ಮಾಜಿ ಆರೋಗ್ಯ ಸಚಿವ ಚೆಲುವನಾರಾಯಣಸ್ವಾಮಿಯವರ ಪುತ್ರ ಸಚಿನ್ ಕೂಡ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಇವರು 2016ರಲ್ಲಿ ತೆರೆಕಂಡ `ಹ್ಯಾಪಿ ಬರ್ತಡೇ' ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದರು.  

ನಿಖಿಲ್ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಗೌಡ ಸಿನಿಮಾರಂಗಕ್ಕೆ ಎಂಟ್ರಿಕೊಟ್ಟಿರುವುದು ಬಹುತೇಕ ಎಲ್ಲರಿಗೂ ಗೊತ್ತೇ ಇದೆ. ಇವರು 2016ರಲ್ಲಿ ತಮ್ಮ ಹೋಮ್ ಬ್ಯಾನರ್‌ನಲ್ಲಿ ನಿರ್ಮಾಣಗೊಂಡ  ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿ ಪಾದಾರ್ಪಣೆ ಮಾಡಿದರು. ನಂತರ ಹರ್ಷ ನಿರ್ದೇಶನದಲ್ಲಿ ಮೂಡಿಬಂದ ಕೌಟುಂಬಿಕ ಚಿತ್ರ ಸೀತಾರಾಮ ಕಲ್ಯಾಣ, ಮುನಿರತ್ನರವರ ನಿರ್ಮಾಣದಲ್ಲಿ ಮೂಡಿಬಂದ ಅದ್ಧೂರಿ ಪೌರಾಣಿಕ ಚಿತ್ರ`ಕುರುಕ್ಷೇತ್ರ'ದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ ನಟಿಸಿದ್ದರು. ನಂತರ ರೈಡರ್ ಸಿನಿಮಾದಲ್ಲಿ ಬಣ್ಣಹಚ್ಚಿದ್ದ ನಿಖಿಲ್, ಸದ್ಯ ತಮಿಳಿನಲ್ಲಿ ಬೋಗನ್, ಭೂಮಿ ಮತ್ತು ರೋಮಿಯೋ ಅಂಡ್ ಜ್ಯೂಲಯೆಟ್‌ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಲಕ್ಷ್ಣಣ್ ಆಕ್ಷನ್ ಕಟ್ ಹೇಳುತ್ತಿರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+