ಸ್ಯಾಂಡಲ್ವುಡ್ನ ವಿಕಟ ಕವಿ ಯೋಗರಾಜ್ ಭಟ್ ನಿರ್ದೇಶನದ 'ಕರಟಕ ದಮನಕ' ಸಿನಿಮಾ ಬಾಕ್ಸಾಫೀಸ್ನಲ್ಲಿ ಜಾದೂ ಮಾಡಲಿದೆ ಎನ್ನಲಾಗಿತ್ತು. ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿತ್ತು. ಎರಡು ಕುತಂತ್ರಿ ನರಿಗಳ ಸ್ವಭಾವವನ್ನು ಹೋಲುವ ಕಥೆಯನ್ನು 'ಕರಟಕ ದಮನಕ' ಸಿನಿಮಾದಲ್ಲಿ ಹೆಣೆಯಲಾಗಿತ್ತು. ಈ ಚಿತ್ರದ ಹಾಡುಗಳು ಸೂಪರ್ ಹಿಟ್ ಅಗಿದ್ದು, ಸಿನಿಮಾ ಮಾತ್ರ ಯಶಸ್ಸು ಗಳಿಸಲಿಲ್ಲ. ಈ ಚಿತ್ರದ ಮೇಲೆ ಪ್ರೇಕ್ಷಕರು ಇಟ್ಟಿದ್ದ ನಿರೀಕ್ಷೆಗಳು ಹುಸಿಯಾಗಿವೆ.