X
ಹೋಮ್ ಚಲನಚಿತ್ರಗಳ ಒಳನೋಟ

ಸ್ಯಾಂಡಲ್‌ವುಡ್‌ನಲ್ಲಿ ಹೊಸಬರದ್ದೇ ಹವಾ: 2024ರಲ್ಲಿ ಚೊಚ್ಚಲ ಸಿನಿಮಾ ನಿರ್ದೇಶಿಸಿ ಗೆದ್ದ ಡೈರೆಕ್ಟರ್ಸ್‌ಗಳಿವರು!

Author Sowmya Bairappa | Published: Monday, December 30, 2024, 04:20 PM [IST]

ಸಿನಿಮಾ ನಿರ್ದೇಶಕರು ಮೊದಲ ಪ್ರಯತ್ನದಲ್ಲೇ ಜನರು ಮೆಚ್ಚುವಂತಹ ಸಿನಿಮಾ ಮಾಡಿದರೆ, ಒಳ್ಳೆಯ ಬ್ರೇಕ್ ಸಿಗುವುದರ ಜೊತೆಗೆ ನಿರ್ಮಾಪಕರು ಹಣ ಹೂಡಲು ಮುಂದೆ ಬರುತ್ತಾರೆ. ಹೀಗಾಗಿ, ತಮ್ಮ ಮೊದಲ ಸಿನಿಮಾವನ್ನು ನಿರ್ದೇಶಕರು ಬಹಳ ಎಚ್ಚರಿಕೆಯಿಂದ ಮಾಡುತ್ತಾರೆ. ಕನ್ನಡ ಚಿತ್ರರಂಗದ ಅನೇಕ ಡೈರೆಕ್ಟರ್‌ಗಳು ಮೊದಲ ಸಿನಿಮಾದಲ್ಲೇ ಸಕ್ಸಸ್ ಕಂಡರೆ, ಇನ್ನೂ ಕೆಲವರು ಮೊದಲ ಸಿನಿಮಾಗಳಲ್ಲಿ ಎಡವಿ ನಂತರದಲ್ಲಿ ಹಿಟ್ ಮೇಲೆ ಹಿಟ್ ನೀಡಿದ್ದಾರೆ. 2024ರಲ್ಲಿ ಸಿನಿಮಾ ನಿರ್ದೇಶಿಸಿ ಗೆದ್ದ ಡೈರೆಕ್ಟರ್ಸ್‌ಗಳ ಪಟ್ಟಿ ಇಲ್ಲಿದೆ.


cover image
ಸಂದೀಪ್ ಸುಂಕದ
1

2024ರಲ್ಲಿ ಸಿನಿಮಾ ನಿರ್ದೇಶಿಸಿ ಗೆದ್ದ ಡೈರೆಕ್ಟರ್ಸ್‌ಗಳ ಪೈಕಿ ಸಂದೀಪ್ ಸುಂಕದ್  ಕೂಡ ಒಬ್ಬರು. ಇವರು 24ರ ಫೆಬ್ರವರಿ 16ರಂದು ಬಿಡುಗಡೆಯಾಗಿದ್ದ ರಂಗಾಯಣ ರಘು ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದ 'ಶಾಖಾಹಾರಿ' ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ರೋಚಕ ಕಥೆಯೇ ಶಾಖಾಹಾರಿ. ಥ್ರಿಲ್ಲರ ಕಥೆ ಹೊಂದಿದ್ದ ಈ ಸಿನಿಮಾಗೆ ಥಿಯೇಟರ್‌ಗಿಂತ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈ ವರ್ಷದ ಒಟಿಟಿ ಹಿಟ್ ಕನ್ನಡ ಸಿನಿಮಾ ಶಾಖಾಹಾರಿ. ಈ ಮೂಲಕ ಸಂದೀಪ್ ಸುಂಕದ್ ತಮ್ಮ ಚೊಚ್ಚಲ ಸಿನಿಮಾದಲ್ಲೇ ಗೆಲುವು ಕಂಡಿದ್ದರು.

ಶ್ರೀನಿಧಿ ಬೆಂಗಳೂರು
2

ಶ್ರೀನಿಧಿ ಬೆಂಗಳೂರು ನಿರ್ದೇಶನದ ವಿಭಿನ್ನ ಸಿನಿಮಾ 'ಬ್ಲಿಂಕ್'. 2024ರ ಮಾರ್ಚ್ 8ರಂದು ರಿಲೀಸ್ ಆಗಿದ್ದ ಈ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ, ಚೈತ್ರಾ ಆಚಾರ್, ಮಂದಾರ ಬಟ್ಟಲಹಳ್ಳಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ಆಧುನಿಕ ದಿನದ ಬೆಂಗಳೂರಿನ ಹಿನ್ನೆಲೆಯ ವಿರುದ್ಧವಾಗಿ, ಬ್ಲಿಂಕ್ ನಮಗೆ 24 ವರ್ಷದ ರಂಗಭೂಮಿ ಕಲಾವಿದ ಅಪೂರ್ವ (ದೀಕ್ಷಿತ್ ಶೆಟ್ಟಿ) ಅವರನ್ನು ಪರಿಚಯಿಸುತ್ತದೆ. ಒಬ್ಬ ಸಾಮಾನ್ಯ ಹುಡುಗ, ಆತನಿಗೆ ಆತನದ್ದೇ ಒಂದು ಕನಸಿನ ಲೋಕ. ಆ ಲೋಕದಲ್ಲಿ ಆತ ಸುಖೀ..ಹೀಗಿರುವಾಗಲೇ ಟೈಮ್ ಟ್ರಾವೆಲಿಂಗ್ ಎಂಬ ವಿಚಿತ್ರ ಜಗತ್ತು ತೆರೆದುಕೊಳ್ಳುತ್ತದೆ. ಅಲ್ಲಿಂದ ಎಲ್ಲವೂ ಬದಲಾಗಿ ಹೋಗುತ್ತದೆ. ಈ ಸಿನಿಮಾ ಒಟಿಟಿಯಲ್ಲಿ ಕನ್ನಡ ಮಾತ್ರವಲ್ಲದೇ, ಪರಭಾಷಾ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ವಿದೇಶದಲ್ಲೂ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು. ಬ್ಲಿಂಕ್ ಶ್ರೀನಿಧಿ ನಿರ್ದೇಶನದ ಚೊಚ್ಚಲ ಸಿನಿಮಾ.

ಚಂದ್ರಜಿತ್ ಬೆಳ್ಳಿಯಪ್ಪ
3

ಸೆಪ್ಟಂಬರ್ 5ರಂದು ಬಿಡುಗಡೆಯಾಗಿದ್ದ ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಚೊಚ್ಚಲ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾ ನವೀನರಾದ ಪ್ರೇಮಕಥೆ ಒಳಗೊಂಡಿತ್ತು. ಸಿನಿಮಾದಲ್ಲಿ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್, ವಿಹಾನ್ ಗೌಡ ಹಾಗೂ ಮಯೂರಿ ನಟರಾಜ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಕೂಡ ಬಾಕ್ಸಾಫೀಸ್‌ನಲ್ಲಿ ಯಶಸ್ಸು ಗಳಿಸಿರಲಿಲ್ಲ. ಆದರೆ, ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಚಿತ್ರದಲ್ಲಿ ಸಿದ್ಧಾರ್ಥ್ (ವಿಹಾನ್) ಕೊಟ್ಯಾಧಿಪತಿಯ ಮಗ. ಅನಾಹಿತಾ (ಅಂಕಿತಾ ಅಮರ್) ಬೆಂಗಾಲಿ ಹುಡುಗಿ. ಇವರಿಬ್ಬರ ಪ್ರೀತಿಯಲ್ಲಿ ಬರುವ ರಾಧೆ (ಮಯೂರಿ ನಟರಾಜ್). ಇಡೀ ಸಿನಿಮಾ ಈ ಮೂರು ಪಾತ್ರಗಳನ್ನೇ ಪ್ರಧಾನವಾಗಿಟ್ಟುಕೊಂಡು ಮುಂದಕ್ಕೆ ಸಾಗುತ್ತೆ. 7 ವರ್ಷಗಳಿಂದ ಬೇರೆಯಾಗಿರುವ ಸಿದ್ಧಾರ್ಥ್ ಹಾಗೂ ಅಂಕಿತಾ ಅಮರ್ ಮಧ್ಯೆ ರಾಧೆ ಬಂದಿದ್ದಾಳೆ. ಸಿದ್ಧಾರ್ಥ್‌ಗೆ ಅನಾಹಿತ ಪ್ರೀತಿ ಸಿಗುತ್ತಾ? ರಾಧೆಗೆ ಸಿದ್ಧಾರ್ಥ್ ಸಿಗುತ್ತಾನಾ? ಅನ್ನೋದೇ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾದ ಒಂದೆಳೆ ಕಥೆ.

ವಿಜಯ್ ಕಾರ್ತಿಕೇಯ
4

ಕ್ರಿಸ್‌ಮಸ್ ಪ್ರಯುಕ್ತ ಬಿಡುಗಡೆಯಾದ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಭರ್ಜರಿ ಪ್ರದರ್ಶನ ಕಾಣ್ತಿದೆ. ವಿಕ್ರಾಂತ್ ರೋಣ ಬಿಡುಗಡೆಯಾಗಿ ಎರಡು ವರ್ಷಗಳ ಬಳಿಕ ಕಿಚ್ಚ ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಗ್ರ್ಯಾಂಡ್ ವೆಲ್‌ಕಮ್ ಮಾಡಿದ್ದಾರೆ. ಮ್ಯಾಕ್ಸ್‌ನಲ್ಲಿ ಸುದೀಪ್ ಮಾಸ್ ಅವತಾರ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ನಿರ್ದೇಶಕ ವಿಜಯ್ ಕಾರ್ತಿಕೇಯ 'ಮ್ಯಾಕ್ಸ' ಚಿತ್ರದಲ್ಲಿ ಒಂದು ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಏನೆಲ್ಲಾ ನಡೆಯುತ್ತೆ ಎಂಬುದನ್ನು ಥ್ರಿಲ್ಲಿಂಗ್ ಆಗಿ ತೋರಿಸಿದ್ದು, ಬಾಕ್ಸಾಪೀಸ್‌ನಲ್ಲೂ ಉತ್ತಮ ಕಲೆಕ್ಷನ್ ಮಾಡ್ತಿದೆ. ಅಂದ್ಹಾಗೆ ಇದು ವಿಜಯ್ ಕಾರ್ತಿಕೇಯ ಆಕ್ಷನ್ ಕಟ್ ಹೇಳಿರುವ ಚೊಚ್ಚಲ ಸಿನಿಮಾ.

ನಾಗರಾಜ ಸೋಮಯಾಜಿ
5

ನಾಗರಾಜ್ ಸೋಮಯಾಜಿ ಚೊಚ್ಚಲ ಬಾರಿಗೆ 'ಮಾರ್ಯಾದೇ ಪ್ರಶ್ನೆ' ಎಂಬ ಸಿನಿಮಾ ನಿರ್ದೇಶನ ಮಾಡಿದ್ದರು. ಚಿತ್ರದಲ್ಲಿ ರಾಕೇಶ್ ಅಡಿಗ, ಸುನೀಲ್ ರಾವ್, ಶೈನ್ ಶೆಟ್ಟಿ, ಪ್ರಭು ಮಂಡಕೂರ್, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ನಾಗೇಂದ್ರ ಶಾ ಮುಂತಾದವರು ನಟಿಸಿದ್ದರು. ಲೂಸ್ ಕನೆಕ್ಷನ್, ಹನಿಮೂನ್ ವೆಬ್ ಸೀರೀಸ್‌ಗಳನ್ನು ನಿರ್ಮಾಣ ಮಾಡಿರುವ ಆರ್‌ಜೆ ಪ್ರದೀಪ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಈ ಸಿನಿಮಾಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+