X
ಹೋಮ್ ಚಲನಚಿತ್ರಗಳ ಒಳನೋಟ

ಚಂದನವನದ ಸ್ಟಾರ್ ನಟರ ಪೈಕಿ ಹೆಚ್ಚು ಶಿಕ್ಷಣ ಪಡೆದವರು ಯಾರು ಗೊತ್ತಾ? ಇಲ್ಲಿದೆ ಮಾಹಿತಿ.

Author Sowmya Bairappa | Published: Thursday, June 13, 2024, 11:42 AM [IST]

ಓದು ತಲೆಗೆ ಹತ್ತದೇ, ಬಣ್ಣದ ಲೋಕದ ಆಕರ್ಷಣೆಗೆ ಬಿದ್ದು ಸಿನಿಮಾರಂಗದಲ್ಲಿ ನೆಲೆಕಂಡ ಅನೇಕ ಕಲಾವಿದರ ಉದಾಹರಣೆಗಳು ನಮ್ಮ ಕಣ್ಮುಂದಿವೆ. ಇಲ್ಲಿ ಬೆಳ್ಳಿ ಪರದೆಯ ಮೇಲೆ ನಮ್ಮನ್ನು ರಂಜಿಸುವ ಕಲಾವಿದರ ವಿದ್ಯಾರ್ಹತೆ ಏನು? ಬಣ್ಣದ ಲೋಕದಲ್ಲಿ ನೆಲೆಕಾಣುವ ಸಲುವಾಗಿ ಕನಸು ಹೊತ್ತು ಬರುವ ಸೆಲೆಬ್ರಿಟಿಗಳು ಏನೆಲ್ಲಾ ಓದಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ನೀಡಲಾಗಿದೆ.


cover image
ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಲೈಟ್​​ಬಾಯ್ ಆಗಿ ಚಿತ್ರರಂಗದಲ್ಲಿ ಕರಿಯರ್ ಆರಂಭಿಸಿ, ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುವ ಮೂಲಕ ಇಂದು ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟರಾಗಿ ಹೊರಹೊಮ್ಮಿದ್ದಾರೆ. 1973ರ ಫೆಬ್ರವರಿ 16ರಂದು ಮೈಸೂರಿನಲ್ಲಿ ಜನಿಸಿದ ದರ್ಶನ್, ಪಿಯುಸಿವರೆಗೆ ಓದಿದ್ದಾರೆ. ಇವರ ತಂದೆ ತೂಗುದೀಪ ಶ್ರೀನಿವಾಸ್ ಮತ್ತು ತಾಯಿ ಮೀನಾ.


ಸುದೀಪ್

1973ರ ಸೆಪ್ಟಂಬರ್ 2ರಂದು ಶಿವಮೊಗ್ಗದಲ್ಲಿ ಜನಿಸಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಶಿವಮೊಗ್ಗದ ವಾಸವಿ ವಿದ್ಯಾಲಯದಲ್ಲಿ ಮುಗಿಸಿದರು. ಆನಂತರ ಬೆಂಗಳೂರಿನ ದಯಾನಂದ ಸಾಗರ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು.

ಯಶ್

ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಎಂದೇ ಪ್ರೀತಿಯಿಂದ ಕರೆಯಲ್ಪಡುವ ಯಶ್ ಇಂದು ಕೆಜಿಎಫ್ ಚಿತ್ರದ ಮೂಲಕ ನ್ಯಾಷನಲ್ ಸ್ಟಾರ್ ಅಗಿ ಗುರುತಿಸಿಕೊಂಡಿದ್ದಾರೆ. ಎಲ್‌ಕೆಜಿಯಿಂದ ಕಾಲೇಜಿನವರೆಗೆ ಮೈಸೂರಿನ ಮಹಾವೀರ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ಯಶ್, ತಮ್ಮ ಹದಿನೇಳನೆ ವಯಸ್ಸಿನಲ್ಲಿಯೇ ಕುಟುಂಬಕ್ಕೆ ಸಹಾಯವಾಗಲು ಪಿಯುಸಿಗೆ ಗುಡ್‌ಬೈ ಹೇಳಿ ಕೆಲಸ ಮಾಡಲು ಪ್ರಾರಂಭಿಸಿದರು. `ನವೀನ್ ಪ್ರಾವಿಜನ್ ಸ್ಟೋರ್' ಎಂಬ ತಮ್ಮದೇ ಸ್ಟೋರ್ ತೆಗೆದು ಕುಟುಂಬದ ಜವಾಬ್ದಾರಿ ವಹಿಸಿಕೊಂಡರು. 

ಉಪೇಂದ್ರ

1967ರ ಸೆಪ್ಟಂಬರ್ 18ರಂದು ಕುಂದಾಪುರ ಸಮೀಪದಲ್ಲಿರುವ ಕೊಟೇಶ್ವರದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ರಿಯಲ್ ಸ್ಟಾರ್ ಉಪೇಂದ್ರ, ಬಸವನಗುಡಿಯ ಎ.ಪಿ.ಎಸ್ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ನಿರ್ದೇಶನದ ಗೀಳನ್ನು ಅಂಟಿಸಿಕೊಂಡು ಕನ್ನಡದ ಹೆಸರಾಂತ ನಿರ್ದೇಶಕ 'ಕಾಶಿನಾಥ್' ಅವರ ಬಳಿ ಸಹಾಯ ನಿರ್ದೇಶಕರಾಗಿ ಕೆಲಸ ಮಾಡಲು ಆರಂಭಿಸಿದರು. 


ಪುನೀತ್ ರಾಜ್‌ಕುಮಾರ್

1975ರ ಮಾರ್ಚ್ 17ರಂದು ಜನಿಸಿದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ಬಾಲ್ಯದಲ್ಲೇ ತಮ್ಮನ್ನು ಚಿತ್ರರಂಗದಲ್ಲಿ ತೊಡಗಿಸಿಕೊಂಡದ್ದರಿಂದ ಖಾಸಗಿ ಟೀಚರ್ ಮೂಲಕ ಮನೆಯಲ್ಲೇ ಪ್ರಾಥಮಿಕ ಶಿಕ್ಷಣ ಮಾಡಿದರು. ನಂತರ ಅವರು ಡಿಪ್ಲಮೋ ಇನ್ ಕಂಪ್ಯೂಟರ್ ಸೈನ್ಸ್ ಮುಗಿಸಿದರು.


ಧನಂಜಯ

ಹಾಸನ ಜಿಲ್ಲೆಯ ಅರಸೀಕೆರೆಯ ಕಲ್ಲೇನಹಳ್ಳಿಯಲ್ಲಿ ಜನಿಸಿದ ಡಾಲಿ ಧನಂಜಯ್ ಅವರ ಪೂರ್ತಿ ಹೆಸರು ಕಲ್ಲೇನಹಳ್ಳಿ ಅಡವಿಸ್ವಾಮಿ ಧನಂಜಯ್. ಇವರ ತಂದೆ ಪ್ರಾಥಮಿಕ ಶಾಲಾ ಶಿಕ್ಷಕರು. ಶಾಲೆಯಲ್ಲಿರುವಾಗಲೇ ನಾಟಕ, ಏಕಪಾತ್ರಾಭಿನಯ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅವರು ಭಾಗವಹಿಸುತ್ತಿದ್ದರು. ವಿಧ್ಯಾಭ್ಯಾಸದಲ್ಲಿ ಚುರುಕಾಗಿದ್ದ ಧನಂಜಯ ಹತ್ತನೇ ತರಗತಿ ಪರೀಕ್ಷೆಯಲ್ಲಿ 90ಕ್ಕೂ ಹೆಚ್ಚು ಪ್ರತಿಶತ ಅಂಕ ಪಡೆದು ಜಿಲ್ಲೆಗೆ ಪ್ರಥಮ ಬಂದಿದ್ದರು. ಮೈಸೂರಿನ ಜಯಚಾಮರಾಜೆಂದ್ರ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದ ಇವರು, ಚಂದನವನ ಪ್ರವೇಶಿಸುವ ಮುನ್ನ ಇನ್ಫೋಸಿಸ್‌ನಲ್ಲಿ  ಉದ್ಯೋಗ ಮಾಡಿದ್ದರು.

ಶಿವ ರಾಜ್‌ಕುಮಾರ್

ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 1962ರ ಜುಲೈ 12ರಂದು ತಮಿಳುನಾಡಿನ ಗಾಜನೂರಿನಲ್ಲಿ ಜನಿಸಿದರು. ವರನಟ ಡಾ.ರಾಜ್‌ಕುಮಾರ್ ಮೊದಲ ಪುತ್ರನಾದ ಇವರು, ಮದ್ರಾಸ್ ವಿಶ್ವವಿದ್ಯಾಲಯದ ನ್ಯೂವ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದಾರೆ. 

ರಕ್ಷಿತ್ ಶೆಟ್ಟಿ

ಸಿಂಪಲ್ ಸ್ಟಾರ್ ಅಂತಲೇ ಖ್ಯಾತಿ ಪಡೆದಿರುವ ರಕ್ಷಿತ್ ಶೆಟ್ಟಿ, ಜೂನ್  6, 1983ರಂದು ಉಡುಪಿಯಲ್ಲಿ ಜನಿಸಿದರು. ಎನ್.ಎಮ್.ಎ.ಎಮ್.ತಾಂತ್ರಿಕ ಮಹಾವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಪಡೆದಿರುವ ರಕ್ಷಿತ್, ಚಿತ್ರರಂಗಕ್ಕೂ ಬರುವ ಮುನ್ನ ಎರಡು ವರ್ಷ ಸಾಫ್ಟವೇರ್ ಉದ್ಯೋಗಿಯಾಗಿ ಕೆಲಸ ಮಾಡಿದ್ದರು.


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+