X
ಹೋಮ್ ಚಲನಚಿತ್ರಗಳ ಒಳನೋಟ

ಕನ್ನಡ ಕಿರುತೆರೆಯಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ನಟ-ನಟಿಯರಿವರು: ಯಾರ್ಯಾರಿಗೆ ಎಷ್ಟು ಗೊತ್ತಾ?

Author Sowmya Bairappa | Published: Friday, April 12, 2024, 11:38 AM [IST]

ಕಿರುತೆರೆ ಜಗತ್ತು ಬೆಳೆಯುತ್ತಲೇ ಇದೆ. ಸಿನಿಮಾ ಗುಣಮಟ್ಟದಲ್ಲಿಯೇ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗ್ತಿದೆ. ಹೀಗಾಗಿ, ಕೆಲ ಸೀರಿಯಲ್ ನಟ-ನಟಿಯರು ಕೂಡ ದೊಡ್ಡ ಸಂಭಾವನೆಯನ್ನೇ ಪಡೆಯುತ್ತಾರೆ. ಕೆಲ ಕಿರುತೆರೆ ಕಲಾವಿದರು ಬೆಳ್ಳಿತೆರೆ ಹೀರೋಗಳಿಗಿಂತ ಹೆಚ್ಚಿನ ಸಂಭಾವನೆ ಪಡೆಯುತ್ತಿರುವ ಉದಾಹರಣೆಗಳಿವೆ. ಆದರೆ, ಕಲಾವಿದರ ಸಂಭಾವನೆ ಬಗ್ಗೆ ಅಧಿಕೃತವಾಗಿ ಹೇಳುವುದಿಲ್ಲ. ಇಲ್ಲಿ ಎಪಿಸೋಡ್‌ವೊಂದಕ್ಕೆ ಕನ್ನಡ ಕಿರುತೆರೆ ಟಾಪ್ ನಟ-ನಟಿಯರು ಪಡೆಯುವ ಸಂಭಾವನೆ ವಿವರ ನೀಡಲಾಗಿದೆ.


cover image
ಛಾಯಾ ಸಿಂಗ್

ಕನ್ನಡ ಸಿನಿಮಾರಂಗದಿಂದ ನಟನೆ ಆರಂಭಿಸಿದ ಛಾಯಾ ಸಿಂಗ್, 2000ರಲ್ಲಿ ತೆರೆಕಂಡ ಪಿ ಶೇಷಾದ್ರಿ ನಿರ್ದೇಶನದ `ಮುನ್ನಡಿ' ಚಿತ್ರದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಇವರು ನಟಿಸಿದ ಮೊದಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಬಳಿಕ ರಾಷ್ಟ್ರಗೀತೆ, ಚಿಟ್ಟೆ, ಗುಟ್ಟು ಸಿನಿಮಾಗಳಲ್ಲಿ ನಟಿಸಿದರು. ನಂತರ ಅನಿರುದ್ಧ್ ನಟನೆಯ 'ತುಂಟಾಟ' ಸಿನಿಮಾದಲ್ಲಿ ಅಭಿನಯಿಸಿದರು. ಈ ಸಿನಿಮಾ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತು. ಬಳಿಕ ಪರಭಾಷಾ  ಕಿರುತೆರೆಯಲ್ಲಿ ಬ್ಯುಸಿಯಾಗಿದ್ದ ಛಾಯಾ, ಇದೀಗ ಕನ್ನಡಕ್ಕೆ ಮರಳಿದ್ದಾರೆ. ಸದ್ಯ ಭೂಮಿಕಾ ಪಾತ್ರದ ಮೂಲಕ ಗಮನ ಸೆಳೆಯುತ್ತಿರುವ ಇವರಿಗೆ ಎಪಿಸೋಡ್ ಒಂದಕ್ಕೆ ೨೦ ಸಾವಿರ ಸಂಭಾವನೆ ಸಿಗಲಿದೆ ಎನ್ನಲಾಗಿದೆ.

ರಾಜೇಶ್  ನಟರಂಗ

ಇಷ್ಟುದಿನ ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದ ರಾಜೇಶ್ ನಟರಂಗ ಕೆಲ ವರ್ಷಗಳ ಬಳಿಕ 'ಅಮೃತಧಾರೆ' ಸೀರಿಯಲ್ ಮೂಲಕ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದಾರೆ. ಈ ಧಾರಾವಾಹಿಯಲ್ಲಿ ಗೌತಮ್ ದಿವಾನ್ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಇವರೂ ಕೂಡ ಒಂದು ಎಪಿಸೋಡ್‌ಗೆ 20 ಸಾವಿರ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ಆದರೆ,  ಈ ಬಗ್ಗೆ ಎಲ್ಲೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ವೈಷ್ಣವಿ ಗೌಡ

ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಪರಿಚಯವಿರುವ ವೈಷ್ಣವಿ ಗೌಡ, 'ಅಗ್ನಿ ಸಾಕ್ಷಿ' ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಧಾರಾವಾಹಿ ಸೂಪರ್ ಹಿಟ್ ಆಗಿತ್ತು. ಇದೀಗ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಸೀತಾರಾಮ' ಸೀರಿಯಲ್‌ನಲ್ಲಿ ನಟಿಸುತ್ತಿದ್ದಾರೆ. ಇವರಿಗೆ ಎಪಿಸೋಡ್ ಒಂದಕ್ಕೆ 15 ಸಾವಿರ ರೂಪಾಯಿ ಸಂಭಾವನೆ ಸಿಗಬಹುದು ಎನ್ನಲಾಗಿದೆ.

ಅಮೂಲ್ಯ ಗೌಡ

ನಟಿ ಅಮೂಲ್ಯ ಗೌಡ ಜೀ ಕನ್ನಡದಲ್ಲಿ ಪ್ರಸಾರವಾಗ್ತಿದ್ದ 'ಕಮಲಿ' ಧಾರಾವಾಹಿ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಸದ್ಯ ಅವರು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಶ್ರೀಗೌರಿ ಸೀರಿಯಲ್‌ನಲ್ಲಿ ಅಭಿನಯಿಸುತ್ತಿದ್ದಾರೆ. ಇವರಿಗೆ ಎಪಿಸೋಡ್ ಒಂದಕ್ಕೆ 12 ಸಾವಿರ ರೂಪಾಯಿ ಸಂಭಾವನೆ ಸಿಗಬಹುದು ಎನ್ನಲಾಗಿದೆ.

ಸುಧಾರಾಣಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಆನಂದ್ ಸಿನಿಮಾ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಸುಧಾರಾಣಿ, ಒಂದು  ಕಾಲದಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದರು. ಸ್ಯಾಂಡಲ್‌ವುಡ್‌ಗೆ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ಸುಧಾರಾಣಿ, ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಶ್ರೀರಸ್ತು ಶುಭಮಸ್ತು' ಧಾರಾವಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರಿಗೆ ಎಪಿಸೋಡ್‌ವೊಂದಕ್ಕೆ ಹೆಚ್ಚು-ಕಡಿಮೆ 25 ಸಾವಿರ ಸಂಭಾವನೆ ಸಿಗಬಹುದು ಎನ್ನಲಾಗಿದೆ.

ಗಗನ್ ಚಿನ್ನಪ್ಪ

ಸೀತಾರಾಮ ಧಾರಾವಾಹಿಯಲ್ಲಿ ರಾಮ್ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಗಗನ್ ಚಿನ್ನಪ್ಪ, ಒಂದು ಎಪಿಸೋಡ್‌ಗೆ 15 ಸಾವಿರ ಸಂಭಾವನೆ ಸಿಗಬಹುದು ಎನ್ನಲಾಗಿದೆ. ಆದರೆ, ಈ ಬಗ್ಗೆ ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ಈ ಧಾರಾವಾಹಿಗೂ ಮುನ್ನ 'ಮಂಗಳಗೌರಿ ಮದುವೆ'ಯಲ್ಲಿ ರಾಜೀವನ ಪಾತ್ರ ಮಾಡಿದ್ದರು.

ವಿಜಯ ಸೂರ್ಯ

ನಟ ವಿಜಯ್ ಸೂರ್ಯ ಸದ್ಯ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ನಮ್ಮ ಲಚ್ಚಿ' ಸೀರಿಯಲ್‌ನಲ್ಲಿ ಅಭಿನಯಿಸುತ್ತಿದ್ದಾರೆ. ಇದರಲ್ಲಿ ಸಿಂಗರ್ ಸಂಗಮ್ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಇವರಿಗೂ ಕೂಡ ಒಂದು ಎಪಿಸೋಡ್‌ಗೆ 15 ಸಾವಿರ ಸಂಭಾವನೆ ಸಿಗಬಹುದು ಎನ್ನಲಾಗಿದೆ. ಇದಕ್ಕೂ ಮುನ್ನ ಅಗ್ನಿಸಾಕ್ಷಿ ಸೀರಿಯಲ್ ಮೂಲಕ ಸಿಕ್ಕಾಪಟ್ಟೆ ಜನಪ್ರಿಯತೆ ಗಳಿಸಿದ್ದಾರೆ.

ಉಮಾಶ್ರಿ

ಉಮಾಶ್ರೀ ಕನ್ನಡ ಚಿತ್ರರಸಿಕರ ಮನಸ್ಸಿನಲ್ಲಿ ತಮ್ಮ ಅದ್ಬುತ ನಟನೆಯ ಮೂಲಕ ವಿಶೇಷ ಸ್ಥಾನ ಪಡೆದಿದ್ದಾರೆ. ಹಾಸ್ಯ ನಟನೆಯಿಂದ ಹಿಡಿದು ಆಳವಾಗಿ ಪ್ರಭಾವ ಬೀರುವ ಪಾತ್ರಗಳಲ್ಲಿ ಲೀಲಾಜಾಲವಾಗಿ ಅಭಿನಯಿಸಿದ್ದಾರೆ. ಸದ್ಯ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಪುಟ್ಟಕ್ಕನ ಮಕ್ಕಳು' ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರಿಗೆ ಎಪಿಸೋಡ್‌ವೊಂದಕ್ಕೆ 35 ಸಾವಿರ ಸಂಭಾವನೆ ಸಿಗುತ್ತಿದೆ ಎಂಬ ಮಾತಿದೆ. ಕನ್ನಡ ಕಿರುತೆರೆಯಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುತ್ತಿರುವವರು ಇವರೇ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+