X
ಹೋಮ್ ಚಲನಚಿತ್ರಗಳ ಒಳನೋಟ

Ganesh Chaturthi 2024: ಕನ್ನಡದ ಈ ಸೂಪರ್ ಹಿಟ್ ಸಿನಿಮಾಗಳ ಕಥೆಗೆ ಟ್ವಿಸ್ಟ್ ಕೊಡೋದೇ ಗಣೇಶ!

Author Sowmya Bairappa | Published: Friday, September 6, 2024, 01:33 PM [IST]

ಗಣೇಶ ಅಂದರೆ ಮಕ್ಕಳಿಂದ ದೊಡ್ಡವರವರೆಗೂ ಎಲ್ಲರಿಗೂ ಪ್ರೀತಿ. ದೇಶದಾದ್ಯಂತ ಗಣೇಶ ಚತುರ್ಥಿಯನ್ನು ಬಹಳ ಸಂಭ್ರಮದಿಂದ ಹಾಗೂ ಅದ್ಧೂರಿಯಾಗಿ ಆಚರಿಸಲಾಗುತ್ತೆ. ವಿಘ್ನ ನಿವಾರಕನ ಡೊಳ್ಳು ಹೊಟ್ಟೆ, ಆನೆ ತಲೆ, ಇಲಿ ವಾಹನ ಎಲ್ಲವೂ ಆಕರ್ಷಣೀಯ. ಕನ್ನಡ ಸಿನಿಮಾಗಳಲ್ಲಿಯೂ ವಿನಾಯಕನನ್ನು ವೀಬಿನ್ನವಾಗಿ ತೋರಿಸುವ ಪ್ರಯತ್ನಗಳು ನಡೆದಿವೆ. ಸಿನಿಮಾ ಕಥೆಗೆ ಗಣೇಶನೇ ತಿರುವು ಕೊಡುವಂತಹ ಒಂದಷ್ಟು ಸಿನಿಮಾಗಳು ಕನ್ನಡದಲ್ಲಿವೆ. ಇಲ್ಲಿ ಅಂತಹ ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.


cover image
ಗಣೇಶನ ಮಹಿಮೆ

1981ರಲ್ಲಿ ರಿಲೀಸ್ ಆದ 'ಗಣೇಶನ ಮಹಿಮೆ' ಸಿನಿಮಾದಲ್ಲಿ ವಿನಾಯಕನ ಮಹಿಮೆಯನ್ನು ತೋರಿಸಲಾಗಿದೆ. ಮಣಿ ಮುರುಗನ್ ನಿರ್ದೇಶನದ ಈ ಚಿತ್ರದಲ್ಲಿ ಸುಂದರ್ ಕೃಷ್ಣ ಅರಸ್, ಶ್ರೀಲಲಿತಾ & ಅಶೋಕ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಬಡ ರಾಮಪ್ಪ (ಸುಂದರ್ ಕೃಷ್ಣ ಅರಸ್) ಹಾಗೂ ಗೌರಿ(ಶ್ರೀಲಲಿತಾ) ದಂಪತಿಗೆ ಗಣೇಶ ಹಬ್ಬದ ದಿನ ಹೊಲದಲ್ಲಿ ಉಳುಮೆ ಮಾಡುವಾಗ ಗಣೇಶನ ವಿಗ್ರಹ ಸಿಗುತ್ತೆ. ಆ ವಿಗ್ರಹ ಮನೆಗೆ ತಂದು ಪೂಜಿಸಲು ಪ್ರಾರಂಭಿಸುತ್ತಿದ್ದಂತೆ, ಆತನಿಗೆ ಅದೃಷ್ಟ ಖುಲಾಯಿಸುತ್ತದೆ. ದೊಡ್ಡ ಶ್ರೀಮಂತನಾಗುತ್ತಾನೆ. ಆದರೆ, ಅವರ ಮಗ ಗಣೇಶ (ಅಶೋಕ್)ನಿಗೆ ವಿನಾಯಕನನ್ನು ಕಂಡರೆ ಭಕ್ತಿ ಇರುವುದಿಲ್ಲ. ಇದು ಮುಂದೆ ನಾನಾ ಸಮಸ್ಯೆಗಳಿಗೆ ಕಾರಣವಾಗುತ್ತೆ. ಕೊನೆಯಲ್ಲಿ ತನ್ನ ತಪ್ಪಿನ ಅರಿವಾಗಿ ವಿಘ್ನ ನಿವಾರಕನಿಗೆ ಶರಣಾಗುತ್ತಾನೆ. ಈ ಚಿತ್ರ ಯೂಟ್ಯೂಬ್‌ನಲ್ಲಿದೆ.

ಉದ್ಭವ

1990ರಲ್ಲಿ ತೆರೆಕಂಡ ಕೂಡ್ಲು ರಾಮಕೃಷ್ಣ  ನಿರ್ದೇಶನದ ಗಣೇಶನ ಕುರಿತ ಚಿತ್ರ 'ಉದ್ಭವ'. ಇದರಲ್ಲಿ ಅನಂತ್‌ ನಾಗ್ 'ರಾಘವೇಂದ್ರ ರಾಯ' ಎಂಬ ಪಾತ್ರ ಮಾಡಿದ್ದರು. ಕೆಲಸ ಕಳೆದುಕೊಂಡಿರುವ ಸರ್ಕಾರಿ ಅಧಿಕಾರಿ ರಾಘವೇಂದ್ರ ರಾಯ. ಆದರೆ, ಮಹಾನ್ ಚಾಲಾಕಿಯಾದ ಈತ, ಸುಳ್ಳು ಹೇಳಿ ತನ್ನ ಕೆಲಸ ಸಾಧಿಸುವಂತಹ ಚತುರ. ಒಂದು ದಿನ ಸುಲಭವಾಗಿ ಹಣ ಮಾಡುವ ಉದ್ದೇಶದಿಂದ ಏರಿಯಾ ರಸ್ತೆ ಅಗಲೀಕರಣ ಆಗುತ್ತದೆ ಎಂದು ಸುದ್ದಿ ಹಬ್ಬಸುತ್ತಾನೆ. ರಸ್ತೆ ಅಗಲೀಕರಣವಾದರೆ, ಅಂಗಡಿಗಳು ಒಡೆಯುತ್ತಾರೆ ಅಂತ ಗುಲ್ಲೆಬ್ಬಿಸುತ್ತಾನೆ.. ಇದರಿಂದ ವಿಚಲಿತರಾದ ಅಂಗಡಿ ಮಾಲೀಕರು ಸಹಾಯಕ್ಕಾಗಿ ರಾಘಣ್ಣನ ಬಳಿ ಹೋಗುತ್ತಾರೆ. ಜೊತೆಗೆ ಎಷ್ಟು ಬೇಕಾದರೂ ಹಣ ಕೊಡುತ್ತೀವಿ ಇದನ್ನು ನಿಲ್ಲಿಸಿ ಅಂತಾರೆ. ಅವರಿಂದ ಹಣ ಪಡೆದ ರಾಘಣ್ಣ, ರಸ್ತೆಯಲ್ಲಿ ಗಣೇಶ ಕೂರಿಸಲು ಹಾಕಿದ್ದ ಶಾಮಿಯಾನದ ಕೆಳಗೆ ಗಣೇಶನನ್ನು ಉದ್ಭವ ಮಾಡುತ್ತಾನೆ. ಅಲ್ಲಿಂದ ಮುಂದೆ ಸಿನಿಮಾ ಕಥೆ ರೋಚಕ ತಿರುವು ಪಡೆದುಕೊಳ್ಳುತ್ತೆ.

ಕಿಲಾಡಿ ಗಂಡು

1991ರಲ್ಲಿ ತೆರೆಕಂಡ ಕಿಲಾಡಿ ಗಂಡು ಚಿತ್ರದಲ್ಲಿ ಟೈಗರ್ ಪ್ರಭಾಕರ್, ಅರವಿಂದ್, ಸುನೀಲ್, ತಾರಾ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ವಿಷ್ಣು (ಸುನಿಲ್) ಹಾಗೂ ಕಂಠಿ (ಅರವಿಂದ್) ಕಾಲೇಜು ವಿದ್ಯಾರ್ಥಿಳಾಗಿದ್ದು, ಇಬ್ಬರದ್ದೂ ಬೇರೆ ಬೇರೆ ತಂಡವಿರುತ್ತದೆ. ವಿಷ್ಣು ಎಲ್ಲದರಲ್ಲೂ ಕಂಠಿಗೆ ಎದುರಾಗಿ ನಿಲ್ಲುತ್ತಿರುತ್ತಾನೆ. ಕಂಠಿ ಇಷ್ಟಪಡುವ ಹುಡುಗಿ ಸೌಮ್ಯ (ತಾರಾ) ಕೂಡ ವಿಷ್ಣುವನ್ನು ಪ್ರೀತಿಸುತ್ತಿರುತ್ತಾಳೆ. ಕಾಲೇಜಿನಲ್ಲಿ ನಡೆಯುವ ಎಲೆಕ್ಷನ್‌ನಲ್ಲೂ ವಿಷ್ಣು ಗೆಲ್ತಾನೆ. ಇದನ್ನು ಸಹಿಸದ ಕಂಠಿ, ತನ್ನ ಗ್ಯಾಂಗ್ ಜೊತೆ ಸೇರಿಕೊಂಡು ವಿಷ್ಣುನ ಕೊಲ್ಲುವ ತಂತ್ರ ರೂಪಿಸುತ್ತಾನೆ. ಕಾಲೇಜಿನಲ್ಲಿ ಗಣೇಶನನ್ನು ಕೂರಿಸಿ, ವಿಸರ್ಜನೆ ಮಾಡುವಾಗ ಗಣೇಶನ ಜೊತೆಗೆ ವಿಷ್ಣುನ ಕೂಡ ನೀರಿನಲ್ಲಿ ಮುಳುಗಿಸಿ ಸಾಯಿಸುತ್ತಾರೆ. ಆನಂತರ ಡಿಟೆಕ್ಟೀವ್ ಆಗಿ ಬರುವ ರಘುವೀರ್(ಟೈಗರ್ ಪ್ರಭಾಕರ್) ಈ ಕೊಲೆಯ ರಹಸ್ಯವನ್ನು ಭೇದಿಸುವ ಕಥೆ ಸಿನಿಮಾದಲ್ಲಿದೆ.

ಮತ್ತೆ ಉದ್ಭವ

2020ರಲ್ಲಿ ಉದ್ಭವ ಚಿತ್ರದ ಸೀಕ್ವೆಲ್ 'ಮತ್ತೆ ಉದ್ಭುವ' ತೆರೆಕಂಡಿತ್ತು. ಕೂಡ್ಲು ರಾಮಕೃಷ್ಣಹಿಂದಿನ ಸಿನಿಮಾ ಕಥೆಯನ್ನು ಎಲ್ಲಿ ನಿಲ್ಲಿಸಿದ್ದರೋ ಅಲ್ಲಿಂದ 30 ವರ್ಷಗಳ ನಂತರ ಕಥೆ ಮುಂದುವರೆಸಿದ್ದರು. ಚಿತ್ರದಲ್ಲಿ ಪ್ರಮೋದ್ ಪಂಜು ಹಾಗೂ ಮಿಲನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪ್ರೀಕ್ವೆಲ್‌ನಲ್ಲಿ ಅನಂತ್ ನಾಗ್ ಮಾಡಿದ್ದ ರಾಘವೇಂದ್ರ ರಾಯರ ಪಾತ್ರವನ್ನು ರಂಗಾಯಣ ರಘು ಮಾಡಿದ್ದರೆ, ಅವರ ಮಗನಾಗಿ ಪ್ರಮೋದ್ ನಟಿಸಿದ್ದರು. ತಂದೆ-ಮಗ ಸೇರಿ ಹೇಗೆಲ್ಲಾ ಮೋಸ ಮಾಡಿ ಹಣ ಮಾಡುತ್ತಾರೆ ಅನ್ನುವುದನ್ನು ಸಿನಿಮಾದಲ್ಲಿ ಹೇಳಲಾಗಿತ್ತು.

ಎ

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿದ್ದ 'ಎ' ಚಿತ್ರದಲ್ಲೂ ಒಂದು ವಿಭಿನ್ನ ಸನ್ನಿವೇಶ ಇದೆ. ರಿಯಲ್ ಲೈಫ್‌ನಲ್ಲಿ ಆಸ್ತಿಕರಾಗಿರುವ ಉಪ್ಪಿ, ಸಿನಿಮಾಗಳಲ್ಲಿ ಚಿತ್ರವಿಚಿತ್ರ ಸನ್ನಿವೇಶಗಳನ್ನು ಕಟ್ಟುತ್ತಾರೆ. ಅದೇ ರೀತಿ ಎ ಚಿತ್ರದಲ್ಲಿ ಗಣೇಶ ಹಬ್ಬದ ದಿನ ದೇವಸ್ಥಾನದಲ್ಲಿ ಕೂರಿಸಿದ್ದ ಗಣೇಶನನ್ನು ಬಾವಿಗೆ ಎತ್ತಿಹಾಕಿ, ಅಲ್ಲಿ ತಾವೇ ಕೂರುತ್ತಾರೆ. ಗನ್ ಹಿಡಿದು ಅಬ್ಬರಿಸಿ, ಅರ್ಚಕರಿಂದ ಪೂಜೆ ಕೂಡ ಮಾಡಿಸಿಕೊಳ್ಳುತ್ತಾರೆ. 'ಐ ಆಮ್ ಗಾಡ್,  ಗಾಡ್ ಈಸ್ ಗ್ರೇಟ್' ಎಂದು ಡೈಲಾಗ್ ಹೊಡೀತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+