ಚಲನಚಿತ್ರಗಳ ಒಳನೋಟ
ಕನ್ನಡ ಚಿತ್ರಗಳಿಗೆ ಹೊಸತನದ ಸ್ಪರ್ಶ ನೀಡಿದವರು ಯೋಗರಾಜ್ ಭಟ್. ನಿರ್ದೇಶಕ ಯೋಗರಾಜ್ ಭಟ್ಟರನ್ನು ಕನ್ನಡದ ವಿಕಟ ಕವಿ ಅಂತಲೇ ಕರೆಯುತ್ತಾರೆ. ಹಾಗಾಗಿ ಭಟ್ಟರು ಯಾವುದೇ ಸಿನಿಮಾ ಮಾಡುತ್ತಿದ್ದಾರೆ ಅಂದರೂ ಕೂಡ ನಿರೀಕ್ಷೆಗಳು ಹುಟ್ಟಿ ಕೊಳ್ಳುತ್ತವೆ. ಇವರು 2003ರಲ್ಲಿ ತೆರೆಕಂಡ ಮಣಿ ಚಿತ್ರದಿಂದ ಸಿನಿಮಾ ನಿರ್ದೇಶನಕ್ಕಿಳಿದರು. ಈ ಚಿತ್ರ ಉತ್ತಮ ವಿಮರ್ಶೆ ಪಡೆದು, ನಾಲ್ಕು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆಯಿತು. ನಂತರ ರಂಗ SSLC, ಮುಂಗಾರು ಮಳೆ, ಗಾಳಿಪಟ, ಮನಸಾರೆ, ಪಂಚರಂಗಿ, ಪರಮಾತ್ಮ, ದನ ಕಾಯೋನು, ವಾಸ್ತು ಪ್ರಕಾರ, ಡ್ರಾಮಾ, ಮುಗುಳುನಗೆ ಸೇರಿದಂತೆ ಅನೇಕ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದರು. ಭಟ್ಟರು ನಿರ್ದೇಶಿಸಿದ ಬಹುತೇಕ ಎಲ್ಲಾ ಚಿತ್ರಗಳು ಬಾಕ್ಸಾಫೀಸಿನಲ್ಲಿ ಉತ್ತಮ ಕಲೆಕ್ಷನ್ ಜೊತೆ ಒಳ್ಳೆಯ ವಿಮರ್ಶೆ ಕೂಡ ಪಡೆದಿವೆ. ಆ ಸಿನಿಮಾಗಳ ಪಟ್ಟಿ ಇಲ್ಲಿದೆ.