X
ಹೋಮ್ ಚಲನಚಿತ್ರಗಳ ಒಳನೋಟ

ರಾಜ್‌ಕುಮಾರ್ ಟು ಸುದೀಪ್: ಮುಹೂರ್ತ ಆಚರಿಸಿಕೊಂಡು ಅರ್ಧಕ್ಕೆ ನಿಂತ ಸ್ಟಾರ್ ನಟರ ಸಿನಿಮಾಗಳ ಪಟ್ಟಿ

Author Sowmya Bairappa | Updated: Saturday, August 19, 2023, 06:47 PM [IST]

ಚಿತ್ರರಂಗದಲ್ಲಿ ಅದ್ಧೂರಿ ಮುಹೂರ್ತ ಆಚರಿಸಿಕೊಂಡ ಎಷ್ಟೋ ಸಿನಿಮಾಗಳು ಪೂರ್ಣಗೊಳ್ಳದೆ ಅರ್ಧಕ್ಕೆ ನಿಂತುಹೋಗುತ್ತದೆ. ಕೆಲವೊಂದು ಸಿನಿಮಾಗಳು ಶೂಟಿಂಗ್ ಹಂತದಲ್ಲಿ ನಿಂತರೆ ಮತ್ತೆ ಕೆಲವು ಶೂಟಿಂಗ್ ಮುಗಿದರೂ ಪೋಸ್ಟ್ ಪ್ರೊಡಕ್ಷನ್ ಶುರು ಆಗುವುದಿಲ್ಲ. ಇನ್ನೂ ಕೆಲವು ಪೋಸ್ಟ್ ಪ್ರೊಡಕ್ಷನ್ ಮುಗಿದರೂ ಬಿಡುಗಡೆಯ ಭಾಗ್ಯ ಕಾಣುವುದಿಲ್ಲ. ಕನ್ನಡದ ಸ್ಟಾರ್ ನಟರ ಸಿನಿಮಾಗಳು ಕೂಡ ಮೂಹೂರ್ತ ಆಚರಿಸಿಕೊಂಡು ಅರ್ಧಕ್ಕೆ ನಿಂತಿವೆ. ಹೆಚ್ಚಿನ ಚಿತ್ರಗಳು ಬಜೆಟ್ ಕಾರಣಕ್ಕೆ ನಿಂತ,ರೆ ಇನ್ನು ಕೆಲ ಸಿನಿಮಾಗಳು ಕಾರಣಾಂತರಗಳಿಂದ ಅರ್ಧಕ್ಕೆ ನಿಂತಿವೆ. ಮುಹೂರ್ತ ಆಚರಿಸಿಕೊಂಡು ಅರ್ಧಕ್ಕೆ ನಿಂತ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.


cover image
ರಾಜ್ ಕುಮಾರ್
1

ಡಾ.ರಾಜ್‌ಕುಮಾರ್ ಅವರ ಭಕ್ತ ಅಂಬರೀಷ. ಈ ಸಿನಿಮಾ ಮಾಡಬೇಕು ಅನ್ನೋದು ಅಣ್ಣಾವ್ರ ದೊಡ್ಡ ಆಸೆಯಾಗಿತ್ತು. ಭಕ್ತ ಅಂಬರೀಷ ಸಿನಿಮಾಗೆ ಸರಳವಾಗಿ ಪೂಜೆ ಮಾಡಿ, ಈ ಚಿತ್ರದ ಹಾಡುಗಳ ರೆಕಾರ್ಡಿಂಗ್ ಕೂಡ ಶುರುವಾಗಿತ್ತು. ಈ ಸಿನಿಮಾವನ್ನು ರೇಣುಕಾ ಶರ್ಮಾ ನಿರ್ದೇಶನ ಮಾಡುವ ಜವಾಬ್ದಾರಿ ಹೊತ್ತಿದ್ದರು.ಅಣ್ಣಾವ್ರ ಬ್ಯಾನರ್​​​​​​​​​​​​ನಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡಬೇಕು ಅಂತಾ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಕನಸು ಕಂಡಿದ್ದರು. ಹೀಗಾಗಿ ೩೦ ಲಕ್ಷ ಖರ್ಚು ಮಾಡಿ ಹಂಸಲೇಖ ಅವರ ಬಳಿ ಸಂಗೀತ ಸಂಯೋಜನೆ ಮಾಡಿಸಿದ್ದರು. ಆದರೆ, ಈ ವೇಳೆ ಡಾ.ರಾಜ್‌ಕುಮಾರ್ ಅವರನ್ನು ವೀರಪ್ಪನ್ ಕಿಡ್ನಾಪ್ ಮಾಡಿಬಿಟ್ಟರು. ನಂತರ ಕಾಡಿನಿಂದ ಬಂದ ಬಳಿಕ ಡಾ.ರಾಜ್‌ಕುಮಾರ್ ಕಾಲು ನೋವಿನಿಂದ ಬಳಲುತ್ತಿದ್ದರು.  ಹೀಗಾಗಿ ಈ ಸಿನಿಮಾ ಕನಸಾಗಿಯೇ ಉಳಿದು ಹೋಗಿತ್ತು ಎಂದು ಪಾರ್ವತಮ್ಮ ಕೆಲ ಸಂದರ್ಶನಗಳಲ್ಲಿ ಹೇಳಿದ್ದರು.  

ವಿಷ್ಣುವರ್ಧನ್
2

1997ರಲ್ಲಿ  ವಿಷ್ಣುವರ್ಧನ್ ಅಭಿನಯದ ಬಹು ಕೋಟಿ ವೆಚ್ಚದ ಸಿನಿಮಾವೊಂದು ಅರ್ಧಕ್ಕೆ ನಿಂತು ಹೋಯಿತು. ಈ ಚಿತ್ರವನ್ನು ಕಮಲ್ ಹಾಸನ್ ನಿರ್ದೇಶಿಸಲು ನಿರ್ಧರಿಸಿದ್ದರು. ಸಿನಿಮಾದ ಹೆಸರು 'ಮುರುಧನಾಯಗಂ '. ಈ ಚಿತ್ರದ ಮುಹೂರ್ತಕ್ಕೆ ಇಂಗ್ಲೆಂಡ್​​​​​​​ ರಾಣಿ ಎಲಿಜಿಬೆತ್ ಬಂದಿದ್ದರು ಎನ್ನುವುದು ದೊಡ್ಡ ವಿಚಾರ. 18ನೇ ಶತಮಾನದ ಯೋಧ ಮಹಮ್ಮದ್ ಯುಸೂಫ್ ಖಾನ್ ಜೀವನವನ್ನು ಆಧಾರವಾಗಿಟ್ಟುಕೊಂಡು, ಕಮಲ್ ಹಾಸನ್ ಚಿತ್ರವನ್ನು ಮಾಡಲು ಹೊರಟ್ಟಿದ್ದರು. ಈ ಚಿತ್ರದಲ್ಲಿ ಡಾ. ವಿಷ್ಣುವರ್ಧನ್ ವಜೀದ್ ಖಾನ್ ಎಂಬ ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದರು. ಬರೋಬ್ಬರಿ 85 ಕೋಟಿ ರೂಪಾಯಿ ವೆಚ್ಚದಲ್ಲಿ ಕಮಲ್ ಹಾಸನ್ ಈ ಚಿತ್ರವನ್ನು ನಿರ್ಮಾಣ ಮಾಡಲು ಮನಸ್ಸು ಮಾಡಿದ್ದರು. ಬಹುತೇಕ ಡಾ.ವಿಷ್ಣುವರ್ಧನ್ ಭಾಗದ ಶೂಟಿಂಗ್ ಕೂಡಾ ಮುಗಿದು ಹೋಗಿತ್ತು. ಆದರೆ, ಕಾರಣಾಂತಗಳಿಂದ ಮುರುಧನಾಯಗಂ ಸಿನಿಮಾ ನಿಂತುಹೋಗಿದೆ.

ಶಿವರಾಜಕುಮಾರ್
3

ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್ ಅವರ ಹಲವು ಸಿನಿಮಾಗಳು ಅರ್ಧಕ್ಕೆ ನಿಂತಿವೆ. ಜಿಲ್ಲಾಧಿಕಾರಿ, ಕಲ್ಕಿ, ಗೆಳೆಯ ಗೆಳೆಯ, ದಂಗೆ ಹೀಗೆ ಹಲವು ಸಿನಿಮಾಗಳು ಮುಹೂರ್ತ ಆಗಿ ಅರ್ಧಕ್ಕೆ ನಿಂತಿವೆ. ಕಂಠೀರವ ಸ್ಟುಡಿಯೋದಲ್ಲಿ 'ಜಿಲ್ಲಾಧಿಕಾರಿ' ಸಿನಿಮಾಗೆ ಅದ್ದೂರಿಯಾಗಿ ಮುಹೂರ್ತ ಮಾಡಲಾಗಿತ್ತು. ಓಂ ಪ್ರಕಾಶ್ ರಾವ್ ಈ ಸಿನಿಮಾ ನಿರ್ದೇಶನ ಮಾಡುವ ಹೊಣೆ ಹೊತ್ತಿದ್ದರು. ಆದರೆ, ಕೆಲವು ದಿನಗಳ ನಂತರ ಕಾರಣಾಂತರಗಳಿಂದ ಈ ಸಿನಿಮಾ ನಿಂತು ಹೋಯಿತು. ಇದರೊಂದಿಗೆ ನಿರ್ದೇಶಕ ನಾಗಾಭರಣ ಜೊತೆ 'ಗೆಳೆಯ ಗೆಳೆಯ ' ಎಂಬ ಸಿನಿಮಾ ಮುಹೂರ್ತ ಮಾಡಲಾಗಿತ್ತು. ಆ ಸಿನಿಮಾ ಕೂಡಾ ಶೂಟಿಂಗ್ ಮಾಡಿ ಅರ್ಧಕ್ಕೆ ನಿಂತು ಹೋಯಿತು.

 

ಉಪೇಂದ್ರ
4

ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಮ್ಯಾ ಅಭಿನಯದ ಸಿನಿಮಾ ಕೂಡ ಅರ್ಧಕ್ಕೆ ನಿಂತು ಹೋಗಿದೆ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ, ರಮ್ಯಾ ಹಾಗೂ ಉಪೇಂದ್ರ ಅಭಿನಯದ 'ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್' ಸಿನಿಮಾ ಅರ್ಧಕ್ಕೆ ನಿಂತಿದೆ.ನಾಲ್ವರು ಬಾಲ ಕಲಾವಿದರನ್ನು ಒಳಗೊಂಡ ಈ ಚಿತ್ರದಲ್ಲಿ ಅನಿಮೇಷನ್ ಮತ್ತು ವಿಜ್ಯುವಲ್ ಎಫೆಕ್ಟ್​​​​​​ಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಒಂದು ಅನಿಮೇಟೆಡ್ ಪಾತ್ರವನ್ನು ಕೂಡಾ ಸೃಷ್ಟಿಸಲಾಗಿರುವ ಈ ಚಿತ್ರ ಭಯೋತ್ಪಾದಕರೊಂದಿಗಿನ ಹೋರಾಟದ ಕಥೆ ಒಳಗೊಂಡಿತ್ತು. ಈ ಸಿನಿಮಾ ಕೂಡ ಬಜೆಟ್ ಕಾರಣದಿಂದ ಅರ್ಧಕ್ಕೆ ನಿಂತಿತ್ತು.  

 

ಪುನೀತ್ ರಾಜ್ ಕುಮಾರ್
5

ಮಯೂರ ಅಂದಾಕ್ಷಣ ಡಾ.ರಾಜ್‌ಕುಮಾರ್ ಅಭಿನಯದ ಸಿನಿಮಾ ನೆನಪಾಗುತ್ತೆ.  ಆದರೆ, ಇದೇ ಟೈಟಲ್ ಹೆಸರಿನಲ್ಲಿ ಪುನೀತ್ ರಾಜ್​​​​​​​​​​ಕುಮಾರ್ ಸಿನಿಮಾವೊಂದು ಸೆಟ್ಟೇರಿತ್ತು ಅನ್ನೋದು ಅದೆಷ್ಟೋ ಜನಕ್ಕೆ ಗೊತ್ತಿಲ್ಲ. ತೆಲುಗು ನಿರ್ದೇಶಕ ಶೋಭನ್ ಎಂಬುವರು ಮಯೂರ ಅಂತಾ ಟೈಟಲ್ ಇಟ್ಟು, ಈ ಸಿನಿಮಾದ ಮುಹೂರ್ತವನ್ನು ಇಸ್ಕಾನ್ ದೇವಸ್ಥಾನದಲ್ಲಿ ಮಾಡಿದ್ದರು. ನಿರ್ಮಾಪಕ ಕನಕಪುರ ಶ್ರೀನಿವಾಸ್ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದರು. ಆದರೆ ಈ ಸಿನಿಮಾ ಪೂಜೆ ಆಗಿ ಒಂದು ವಾರಕ್ಕೆ ನಿರ್ದೇಶಕ ಶೋಭನ್ ಸಾವನ್ನಪ್ಪಿದ ಕಾರಣ ಮಯೂರ ಸಿನಿಮಾ ನಿಂತು ಹೋಯಿತು. ಇದಲ್ಲದೆ 2021ರಲ್ಲಿ ಪುನೀತ್ ಅವರ ಅಕಾಲಿಕ ನಿಧನದಿಂದ ದ್ವಿತ್ವ, ಮಿಷನ್ ಕೊಲಂಬಸ್ ಸೇರಿದಂತೆ ಇನ್ನೂ ಕೆಲ ಸಿನಿಮಾಗಳು ಅರ್ಧಕ್ಕೆ ನಿಂತಿವೆ.  

 

ರವಿಚಂದ್ರನ್
6

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕೆಲವೊಂದು ಸಿನಿಮಾಗಳು ಮುಹೂರ್ತ ಹಾಗೂ ಮತ್ತೆ ಕೆಲವು ಸಿನಿಮಾಗಳು ಶೂಟಿಂಗ್ ಆಗಿ ಅರ್ಧಕ್ಕೆ ನಿಂತಿವೆ. ಅದರಲ್ಲಿ 'ಮಂಜಿನ ಹನಿ ' ಕೂಡ ಒಂದು. 2015ರಲ್ಲಿ ಆರಂಭವಾಗಿದ್ದ ಮಂಜಿನ ಹನಿ ರವಿಚಂದ್ರನ್ ಅವರ ಕನಸಿನ ಸಿನಿಮಾವಾಗಿತ್ತು. ಈ ಚಿತ್ರದಲ್ಲಿ ಸುಮಾರು 9 ಶೇಡ್​​​ಗಳಲ್ಲಿ ಕಾಣಿಸಿಕೊಳ್ಳಲು ರೆಡಿಯಾಗಿದ್ದರು. ಚಿತ್ರವನ್ನು 9 ಕೋಟಿ ರೂಪಾಯಿ ವೆಚ್ಚದಲ್ಲಿ ತಯಾರಿ ಮಾಡಲು ನಿರ್ಧರಿಸಿದ್ದರು. ಆದರೆ, ಬಜೆಟ್ ಕಾರಣ ಚಿತ್ರ ಮುಂದುವರೆಯಲಿಲ್ಲ. 

ಸುದೀಪ್
7

ರೆಬಲ್ ಸ್ಟಾರ್ ಅಂಬರೀಷ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ 'ವೀರ ಪರಂಪರೆ' ಸಿನಿಮಾಗಿಂತಲೂ ಮೊದಲು 'ಬ್ರಹ್ಮ' ಎಂಬ ಸಿನಿಮಾದಲ್ಲಿ ನಟಿಸಬೇಕಿತ್ತು. ಕುಳ್ಳ ಶಾಂತಕುಮಾರ್ ಎಂದೇ ಹೆಸರಾದ ನಿರ್ಮಾಪಕ ಶಾಂತಕುಮಾರ್ ಬಹುಕೋಟಿ ರೂಪಾಯಿ ವೆಚ್ಚದಲ್ಲಿ ಚಿತ್ರವನ್ನು ಮಾಡಲು ಮುಂದಾಗಿದ್ದರು. ಓಂ ಪ್ರಕಾಶ್ ರಾವ್ ಬ್ರಹ್ಮ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದರು. ಆದರೆ, ಬಜೆಟ್ ಹೆಚ್ಚಾದ ಕಾರಣ ಸಿನಿಮಾ ಅರ್ಧಕ್ಕೆ ನಿಂತು ಹೋಯಿತು.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+