X
ಹೋಮ್ ಚಲನಚಿತ್ರಗಳ ಒಳನೋಟ

ಜೀವ ಬೆದರಿಕೆ ಕರೆ ಸ್ವೀಕರಿಸಿದ ಸ್ಯಾಂಡಲ್​ವುಡ್​ ನಟ-ನಟಿಯರ ಪಟ್ಟಿ ಇಲ್ಲಿದೆ.

Author Sowmya Bairappa | Updated: Thursday, August 10, 2023, 06:35 PM [IST]

ಅನೇಕ ಬಾಲಿವುಡ್ ನಟ-ನಟಿಯರಿಗೆ, ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಆಗಾಗ್ಗೆ ಕಿಡಿಗೇಡಿಗರು ಜೀವ ಬೆದರಿಕೆ ಹಾಕುತ್ತಿರುವುದನ್ನು ನಾವು ಕೇಳುತ್ತಿರುತ್ತೇವೆ. ಆನೇಕ ಬಾರಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಇದೆ. ಈ ರೀತಿಯ ಬೆಳವಣಿಗೆಗಳು ಸ್ಯಾಂಡಲ್​ವುಡ್​ನಲ್ಲಿ ಜರುಗಿವೆ. ಕನ್ನಡದ ನಟನಟಿಯರಿಗೆ ಕೂಡ ಬೆದರಿಕೆ ಕರೆಗಳು ಬಂದಿವೆ. ಹಾಗಾದ್ರೆ, ಕನ್ನಡದ ಯಾವೆಲ್ಲಾ ನಟ-ನಟಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂಬ ಮಾಹಿತಿ ಇಲ್ಲಿದೆ.


cover image
ಅಮೂಲ್ಯ
1

ಚೆಲುವಿನ ಚಿತ್ತಾರ ಬೆಡಗಿ ಅಮೂಲ್ಯ ಅವರಿಗೆ 2009ರಲ್ಲಿ  ದೂರವಾಣಿ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಆಟೋಗ್ರಾಫ್ ಪಡೆಯುವ ನೆಪದಲ್ಲಿ ಆಯುಧದಿಂದ ಚುಚ್ಚಿ ಕೊಲೆ ಮಾಡುತ್ತೇನೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ನಟಿ ಅಮೂಲ್ಯಾಗೆ ಬೆದರಿಕೆ ಒಡ್ಡಿದ್ದ. ಕೇವಲ ಅಮೂಲ್ಯಾ ಅವರಿಗೆ ಮಾತ್ರವಲ್ಲದೆ ಅವರ ಅಣ್ಣ ಕೆ ದೀಪಕ್ ಅವರಿಗೂ ಪ್ರಾಣ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಅಮೂಲ್ಯ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು.  

ಶಿವರಾಜಕುಮಾರ್
2

2021ರಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರಿಗೆ ಕೊಲೆ ಬೆದರಿಕೆ ಪತ್ರವೊಂದು ಬಂದಿತ್ತು. ಶಿವಣ್ಣ ಜೊತೆ ರಾಜ್ಯ ಇನ್ನೂ ನಾಲ್ಕು ಗಣ್ಯ ವ್ಯಕ್ತಿಗಳನ್ನು ಕೊಲೆ ಮಾಡುವುದಾಗಿ ಅನಾಮಿಕ ಪತ್ರ ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕರ್ನಾಟಕ ಸರ್ಕಾರ, ಶಿವರಾಜ್​ಕುಮಾರ್ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಿತ್ತು. ಜೊತೆಗೆ ಗನ್ ಮ್ಯಾನ್ ಕೂಡ ನೀಡಿತ್ತು. ಆದರೆ, ಶಿವಣ್ಣ ಈ ಸುದ್ದಿಗೆ ಹೆಚ್ಚಿನ ಮಹತ್ವ  ನೀಡಬೇಡಿ ಎಂದು ತಿಳಿಸಿದ್ದರು.  

 

ಪ್ರಕಾಶ್ ರಾಜ್
3

ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೂ ಕೊಲೆ ಬೆದರಿಕೆ ಪತ್ರ ಬಂದಿತ್ತು. ಬೆಳಗಾವಿಯ ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಜೊತೆಗೆ ನಟ ಪ್ರಕಾಶ್ ರಾಜ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ 15 ಮಂದಿಯನ್ನು ಸಂಹಾರ ಮಾಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಬೈಲೂರು ಮಠಕ್ಕೆ ಪತ್ರ ರವಾನಿಸಿದ್ದ. ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.    

 

ಚೇತನ್ ಕುಮಾರ್
4

ಆ ದಿನಗಳು ಖ್ಯಾತಿಯ ನಟ ಚೇತನ್ ಕುಮಾರ್ ಕೂಡ ಹಲವು ಬಾರಿ ತಮಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿಸಿದ್ದರು. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಳಿಕ ನಟ ಚೇತನ್ ಅವರಿಗೆ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಬೆದರಿಕೆ ಸಂದೇಶಗಳು ಬರುತ್ತಿರುವುದಾಗಿ ಈ ಹಿಂದೆ ಬೆಂಗಳೂರು ನಗರ ಪೊಲೀಸರಿಗೆ ತಿಳಿಸಿದ್ದರು. ಸಾಮಾಜಿಕ ಹೋರಾಟಗಾರರಾಗಿಯೂ ಗುರುತಿಸಿಕೊಂಡಿರುವ ಚೇತನ್ ಹಲವು ವಿವಾದಗಳನ್ನು ಎದುರಿಸಿದ್ದಾರೆ. 

ಯಶ್
5

ಕೆಲ ವರ್ಷಗಳ ಹಿಂದೆ ನಟ ರಾಕಿಂಗ್ ಸ್ಟಾರ್ ಯಶ್ ಕೊಲೆಗೆ ಸಂಚು ರೂಪಿಸಿದ್ದಾರೆಂಬ ಸುದ್ದಿ ಹರಿದಾಡಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಯಶ್ ಹಾಗೂ ನಿರ್ಮಾಪಕ ಜಯಣ್ಣ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಿಸಿದ್ದರು. ಇದಾದ ಬಳಿಕ ಎಚ್ಚೆತ್ತುಕೊಂಡಿದ್ದ ಪೊಲೀಸರು ರೌಡಿಶೀಟರ್ ಗಳನ್ನು ಕರೆಸಿ ಎಚ್ಚರಿಕೆ ನೀಡಿದ್ದರು. 2018ರಲ್ಲಿ ಬಂಧಿತನಾಗಿದ್ದ ಸೈಕಲ್ ರವಿ ಯಶ್ ಕೊಲೆಗೆ ಸಂಚು ರೂಪಿಸಿದ್ದಾಗಿ ಪೋಲೀಸರ ಮುಂದೆ ಒಪ್ಪಿಕೊಂಡಿದ್ದ. ಆದರೆ, ಯಶ್ ಇದು ಸೂಕ್ಷ್ಮ ವಿಚಾರ. ಈ ಬಗ್ಗೆ ಮಾತನಾಡಲ್ಲ ಎಂದಿದ್ದರು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+