X
ಹೋಮ್ ಚಲನಚಿತ್ರಗಳ ಒಳನೋಟ

ತಮ್ಮ ಮೊದಲ ಸಿನಿಮಾದಲ್ಲಿ ಅದ್ಭುತ ಯಶಸ್ಸು ಪಡೆದ ಸ್ಯಾಂಡಲ್‌ವುಡ್ ನಟಿಯರ ಪಟ್ಟಿ ಇಲ್ಲಿದೆ.

Author Sowmya Bairappa | Published: Friday, June 30, 2023, 10:33 AM [IST]

ನೂರಾರು ಜನ ಚಿತ್ರರಂಗದಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಮತ್ತು ಸಿನಿಮಾ ರಂಗದಲ್ಲಿ ಹೆಸರು ಮಾಡಬೇಕು ಕನಸು ಹೊತ್ತಿರುತ್ತಾರೆ. ಅದರಲ್ಲಿ ಕೆಲವರು ಸತತ ಪ್ರಯತ್ನ ಮಾಡಿ ಸಿನಿರಂಗಕ್ಕೆ ಬಂದರೂ ಯಶಸ್ಸು ಸಿಗುವುದಿಲ್ಲ. ಸಾಕಷ್ಟು ಪ್ರತಿಭೆಗಳು, ಹೀಗೆ ಹೆಚ್ಚಿನ ಅವಕಾಶ ಸಿಗದೇ ನಿರಾಶರಾಗುತ್ತಾರೆ. ಆದರೆ ಕೆಲವರಿಗೆ ತಾವು ನಟಿಸಿದ ಮೊದಲ ಚಿತ್ರವೇ ಕೈ ಹಿಡಿಯುತ್ತದೆ. ಮೊದಲ ಚಿತ್ರದ ಮೂಲಕ ಸಾಕಷ್ಟು ಖ್ಯಾತಿ ಪಡೆದು ಸಿನಿರಂಗದಲ್ಲಿ ಭದ್ರವಾಗಿ ನಿಲ್ಲುತ್ತಾರೆ. ಹಾಗೇ ಕನ್ನಡ ಚಿತ್ರರಂಗದಲ್ಲಿ ತಮ್ಮ ಮೊದಲ ಚಿತ್ರದಲ್ಲಿಯೇ ಯಶಸ್ಸು ಕಂಡ ಕೆಲವು ಪ್ರಮುಖ ನಟಿಯರನ್ನು ಕೆಳಗೆ ನೀಡಲಾಗಿದೆ. ಕಾಕತಾಳೀಯವೆಂದರೆ ತಮ್ಮ ಮೊದಲ ಚಿತ್ರದಲ್ಲಿ ಯಶಸ್ಸು ಪಡೆದ ಹಲವು ನಟಿಯರ ಹೆಸರು `ರ' ಅಕ್ಷರದಿಂದ ಆರಂಭವಾಗುತ್ತದೆ.


cover image
ಸುಧಾರಾಣಿ

ಬೇಬಿ ಜಯಶ್ರೀ ಹೆಸರಿನಲ್ಲಿ ಬಾಲನಟಿಯಾಗಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಸುಧಾರಾಣಿ 1986ರಲ್ಲಿ ತೆರೆಕಂಡ ಶಿವಣ್ಣ ಜೊತೆ ಆನಂದ್ ಚಿತ್ರದ ಮೂಲಕ ನಾಯಕಿಯಾಗಿ ಚಂದನವನ ಪ್ರವೇಶಿಸಿದರು. ಈ ಸಿನಿಮಾ ಅಭೂತಪೂರ್ವ ಯಶಸ್ಸು ಕಂಡಿತು.  ಇಬ್ಬರಿಗೂ ಇದು ಮೊದಲ ಸಿನಿಮಾ. ಆನಂದ್ ಬಳಿಕ ಹಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ ಸುಧಾರಾಣಿ ಹಾಗೂ ಶಿವರಾಜ್‌ಕುಮಾರ್ ಅಂದಿನ ಕಾಲದ ಟ್ರೆಡಿಂಗ್ ಅನ್‌ ಸ್ಕ್ರೀನ್ ಜೋಡಿಯಾಗಿ ಮಿಂಚಿದರು. 

 

ರಕ್ಷಿತಾ

ನಟಿ ರಕ್ಷಿತಾ ಅಪ್ಪು ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಮೊದಲ ಸಿನಿಮಾ ಕೂಡ ಆಗಿತ್ತು.  2002ರ ಏಪ್ರಿಲ್ 26ರಂದು ತೆರೆಗೆ ಬಂದ ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿತು. ಅಲ್ಲಿಂದ ಮುಂದೆ ರಕ್ಷಿತಾ ಕನ್ನಡದ ಜನಪ್ರಿಯ ನಟಿಯಾದರು. 

ರಮ್ಯಾ

2003ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ 'ಅಭಿ' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಮೋಹಕ ತಾರೆ ರಮ್ಯಾ ಮೊದಲ ಹೆಸರು ದಿವ್ಯ ಸ್ಪಂದನ. ಕನ್ನಡದ ಖ್ಯಾತ ಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಅವರು ದಿವ್ಯ ಸ್ಪಂದನ ಅವರಿಗೆ ಅಭಿ ಚಿತ್ರದಲ್ಲಿ ಅಭಿನಯಿಸುವ ಅವಕಾಶ ನೀಡಿ, ಈ ಚಿತ್ರದಲ್ಲಿ ಅವರ ಹೆಸರನ್ನು ರಮ್ಯ ಎಂದು ಬದಲಾಯಿಸಿದರು. ಅವರು ನಟಿಸಿದ ಮೊದಲ ಸಿನಿಮಾವೇ ಸೂಪರ್ ಹಿಟ್ ಆಗಿತ್ತು. 

ರಾಧಿಕಾ ಕುಮಾರಸ್ವಾಮಿ

ವಿಜಯ್ ರಾಘವೇಂದ್ರ ಮತ್ತು ರಾಧಿಕಾ ಕುಮಾರಸ್ವಾಮಿ 2002ರಲ್ಲಿ ತೆರೆಕಂಡ 'ನಿನಗಾಗಿ' ಚಿತ್ರದ ಮೂಲಕ ನಾಯಕ-ನಾಯಕಿಯಾಗಿ ಸಿನಿಪಯಣ ಆರಂಭಿಸಿದರು. ಈ ಚಿತ್ರ ಅದ್ಭುತ ಯಶಸ್ಸು ಪಡೆದು ಇಬ್ಬರಿಗೂ ಸಿನಿರಂಗದಲ್ಲಿ ಒಳ್ಳೆಯ ಅಡಿಪಾಯ ಹಾಕಿಕೊಟ್ಟಿತು. ಅನಂತರ ರಾಧಿಕಾ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದರು. 

 

ಪೂಜಾ ಗಾಂಧಿ

ಮುಂಗಾರು ಮಳೆ ಚಿತ್ರದ ಮೂಲಕ ಕನ್ನಡ ಸಿನಿರಂಗ ಪ್ರವೇಶಿಸಿದ ಬಂಗಾಳಿ ಬೆಡಗಿ ಪೂಜಾ ಗಾಂಧಿ, ಮೊದಲ ಚಿತ್ರದಲ್ಲೇ ಯಶಸ್ಸು ಕಂಡರು. ಯೋಗರಾಜ್ ಭಟ್ ನಿರ್ದೇಶನದ 'ಮುಂಗಾರು ಮಳೆ' ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿತ್ತು. ಯೋಗರಾಜ್ ಭಟ್ ಅವರಿಗೆ ಈ ಚಿತ್ರ ದೊಡ್ಡ ಯಶಸ್ಸು ನೀಡಿತ್ತು.  ಇದು ಸಿನಿಮಾವು  ಒಂದು ವರ್ಷ ಪ್ರದರ್ಶನಗೊಳ್ಳುವ ಮೂಲಕ ದಾಖಲೆ ಬರೆಯಿತು. ಕೇವಲ 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ 75 ಕೋಟಿ ಬಾಚಿಕೊಂಡಿತ್ತು. ಮುಂಗಾರು ಮಳೆ ಕನ್ನಡದ ಎವರ್‌ ಗ್ರೀನ್ ರೋಮ್ಯಾಂಟಿಕ್ ಚಿತ್ರ.

 

ಅಮೂಲ್ಯ

2007ರಲ್ಲಿ  ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ಮೂಡಿಬಂದ  "ಚೆಲುವಿನ ಚಿತ್ತಾರ" ಅಭೂತ ಪೂರ್ವ ಯಶಸ್ಸು ಕಂಡಿತ್ತು. ಬಹಳಷ್ಟು ಸಿನಿಮಾಗಳಲ್ಲಿ ಬಾಲ ನಟಿಯಾಗಿ ನಟಿಸಿ ಪ್ರಸಿದ್ಧಿ ಪಡೆದಿದ್ದ ಅಮೂಲ್ಯ,  ಚೆಲುವಿನ ಚಿತ್ತಾರ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ಮೊದಲ ಬಾರಿಗೆ ನಾಯಕಿಯ ಪಾತ್ರದಲ್ಲಿ ನಟಿ ಅಮೂಲ್ಯ ಕಾಣಿಸಿಕೊಂಡರು. ಚೆಲುವಿನ ಚಿತ್ತಾರ ಸಿನಿಮಾ ಯಶಸ್ವಿ ನಂತರ ಇವರಿಗೆ ಹಲವು ಚಿತ್ರಗಳಲ್ಲಿ ನಟಿಸಲು ಅವಕಾಶಗಳು ದೊರೆತವು.

 

ರಾಧಿಕಾ ಪಂಡಿತ್

ಶಶಾಂಕ್ ನಿರ್ದೇಶನದಲ್ಲಿ ಮೂಡಿಬಂದ ಮೊಗ್ಗಿನ ಮನಸ್ಸು ಚಿತ್ರದ ಮೂಲಕ ರಾಧಿಕಾ ಸಿನಿಜೀವನ ಆರಂಭಿಸಿದರು. ಈ ಚಿತ್ರದ ನಟನೆಗಾಗಿ ಫಿಲ್ಮ್ ಫೇರ್ ಮತ್ತು ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದರು. ಚಂಚಲಾ ಎಂಬ ಕಾಲೇಜು ಯುವತಿಯ ಪಾತ್ರದಲ್ಲಿ ನಟಿಸಿದ್ದರು, ಈ ಚಿತ್ರದಲ್ಲಿ ಯಶ್ ಕೂಡ ನಾಯಕನಾಗಿ ಸಿನಿಜೀವನ ಆರಂಭಿಸಿದ್ದು ವಿಶೇಷ.

ರಾಗಿಣಿ ದ್ವಿವೇದಿ

ವೀರ ಮದಕರಿ ರಾಗಿಣಿ ದ್ವಿವೇದಿ ನಟನೆಯ ಮೊದಲ ಸಿನಿಮಾ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಿರ್ದೇಶಿಸಿ, ನಟಿಸಿದ್ದ ಈ ಸಿನಿಮಾದ ತೆಲುಗಿನ ವಿಕ್ರಮಾರ್ಕುಡು ರಿಮೇಕ್.  ಚಿತ್ರದಲ್ಲಿ ತುಪ್ಪದ ಹುಡುಗಿ 'ನೀರಜಾ' ಎಂಬ ಪಾತ್ರದಲ್ಲಿ ಮಿಂಚಿದ್ದು, ಸುದೀಪ್ ಹಾಗೂ ರಾಗಿಣಿ ಜೋಡಿ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿತ್ತು. ಜೊತೆಗೆ ಬಾಕ್ಸಾಫೀಸ್‌ನಲ್ಲೂ ಸಖತ್ ಸದ್ದು ಮಾಡಿತ್ತು.  

 

ದೀಪಾ ಸನ್ನಿಧಿ

ನಟಿ ದೀಪಾ ಸನ್ನಿಧಿ ನಟನೆಯ ಮೊದಲ ಕನ್ನಡ ಸಿನಿಮಾ ಸಾರಥಿ. ಈ ಮೂಲಕ ತಮ್ಮ ಮೊದಲ ಸಿನಿಮಾದಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಜೋಡಿಯಾಗಿ ನಟಿಸಿದ್ದರು. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಸಿನಿಮಾ, 12 ಕೋಟಿ ರೂ. ಗಳಿಕೆ ಕಂಡಿತ್ತು. ಈ ಮೂಲಕ ದೀಪಾ ಸನ್ನಿಧಿ ಮೊದಲ ಸಿನಿಮಾದಲ್ಲೇ ದೊಡ್ಡ ಸಕ್ಸಸ್ ಕಂಡಿದ್ದರು. ಈ ಚಿತ್ರಕ್ಕೆ ಮೂರು ರಾಜ್ಯ ಪ್ರಶಸ್ತಿ ಮತ್ತು ಒಂದು ಸೈಮಾ ಪ್ರಶಸ್ತಿ ದೊರಕಿತ್ತು. 

 

ಶ್ರುತಿ ಹರಿಹರನ್

2013ರಲ್ಲಿ ಬಂದ ಪವನ್ ಕುಮಾರ್ ನಿರ್ದೇಶನದ ಸೂಪರ್ ಹಿಟ್ 'ಲೂಸಿಯಾ' ಚಿತ್ರದಲ್ಲಿ ಸತೀಶ್ ನೀನಾಸಂ ನಾಯಕನಾಗಿ ಮತ್ತು ಶ್ರುತಿ ಹರಿಹರನ್ ನಾಯಕಿಯಾಗಿ ನಟಿಸಿದ್ದರು. ಇದು ಶ್ರುತಿ ಹರಿಹರನ್ ಮೊದಲ ಕನ್ನಡ ಸಿನಿಮಾ. ಚಿತ್ರದಲ್ಲಿ ನಾಯಕ ಕನಸು ಕಾಣಲು ಮಾತ್ರೆ ತೆಗೆದುಕೊಳ್ಳುವ ಕಥೆಯಿದ್ದು,  ಕನಸನ್ನೇ ನಿಜ ಎಂದುಕೊಂಡು ಅನುಭವಿಸುವ ಮಾನಸಿಕ ಯಾತನೆಯನ್ನು ತೋರಿಸಲಾಗಿತ್ತು. ತನ್ನ ವಿಭಿನ್ನ ಹಾಡುಗಳು ಹಾಗೂ ಮೇಕಿಂಗ್ ಮೂಲಕ ಈ ಸಿನಿಮಾ ಪ್ರೇಕ್ಷಕರ ನಿದ್ದೆಗೆಡಿಸಿತ್ತು. ಕನ್ನಡ ಚಿತ್ರೋದ್ಯಮದಲ್ಲೂ ಸಾಕಷ್ಟು ನಿರೀಕ್ಷೆಗಳನ್ನು ಹಾಗೂ ಭರವಸೆಗಳನ್ನು ಹುಟ್ಟುಹಾಕಿತ್ತು.

ಶ್ರದ್ಧಾ ಶ್ರೀನಾಥ್

ವೃತ್ತಿಯಲ್ಲಿ ವಕೀಲೆಯಾಗಿದ್ದೆ ಶ್ರದ್ಧಾ ಶ್ರೀನಾಥ್ ಪವನಕುಮಾರ್ ನಿರ್ದೇಶನದ ಯು ಟರ್ನ್ ಚಿತ್ರದ ಮೂಲಕ ನಟನೆಗೆ ಇಳಿದರು. ಈ ಚಿತ್ರ ಪ್ರೇಕ್ಷಕ ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯಿತು. ಪ್ರಸ್ತುತ ತಮಿಳು ಮತ್ತು ತೆಲಗು ಚಿತ್ರರಂಗದಲ್ಲೂ ಗಮನ ಸೆಳೆಯುತ್ತಿದ್ದಾರೆ.

ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ 'ಕಿರಿಕ್ ಪಾರ್ಟಿ' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಈ ಸಿನಿಮಾಗೆ ರಿಷಬ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದು, ರಕ್ಷಿತ್ ಶೆಟ್ಟಿ ನಾಯಕನಾಗಿ ನಟಿಸಿದ್ದರು. ಈ ಸಿನಿಮಾದಲ್ಲಿ ರಶ್ಮಿಕಾ ಸಾನ್ವಿ ಎಂಬ ಪಾತ್ರ ಮಾಡಿದ್ದು, ಈ ಪಾತ್ರ ಅವರಿಗೆ ಸಾಕಷ್ಟು ಪ್ರಸಿದ್ಧಿ ತಂದುಕೊಟ್ಟಿತ್ತು. ಚಿತ್ರದ ಮೊದಲಾರ್ಧದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ರೆ, ಸೆಕೆಂಡ್ ಹಾಫ್ ನಲ್ಲಿ ಸಂಯುಕ್ತ ಹೆಗ್ಡೆ ಮೋಡಿ ಮಾಡಿದ್ದರು. ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್, ಬಾಲಿವುಡ್,ಕಾಲಿವುಡ್ ಸೇರಿದಂತೆ ಸಾಲು-ಸಾಲು ಸಿನಿಮಾ ಮಾಡುತ್ತಾ ಬ್ಯುಸಿಯಾಗಿದ್ದಾರೆ. 

 

ಶ್ರೀನಿಧಿ  ಶೆಟ್ಟಿ

ನಟಿ ಶ್ರೀನಿಧಿ ಶೆಟ್ಟಿ 2018ರಲ್ಲಿ ತೆರೆಕಂಡ ಕೆಜಿಎಫ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ಈ ಸಿನಿಮಾ ಸೂಪರ್ ಹಿಟ್ ಆಗುವುದಲ್ಲದೇ, ಇಡೀ ಭಾರತೀಯ ಚಿತ್ರರಂಗ ಸ್ಯಾಂಡಲ್‌ವುಡ್‌ನತ್ತ ತಿರುಗಿ ನೋಡುವಂತಾಯಿತು. ನಂತರ 2022ರಲ್ಲಿ ಕೆಜಿಎಫ್ ಚಾಪ್ಟರ್ 2 ಚಿತ್ರದಲ್ಲೂ ನಟಿಸಿದರು. 

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+