ಮೆಜೆಸ್ಟಿಕ್ ಚಿತ್ರದಲ್ಲಿ ಗಮನ ಸೆಳೆದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಜೀವನದಲ್ಲಿ ಮೈಲಿಗಲ್ಲು ಸ್ಥಾಪಿಸಿದ ಸಿನಿಮಾ ಕರಿಯ. ರೌಡಿಸಂ ಜಗತ್ತಿನ ಕ್ರೌಯವ ತೆರೆದಿಟ್ಟಿದ್ದ ಸಿನಿಮಾಗೆ ೨೦ ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಿನಿಮಾ ರಿಲೀಸ್ ಆಗಿದ್ದು, ದಾಸನ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ದರ್ಶನ್ ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದಾರೆ. ಇಲ್ಲಿ ಕನ್ನಡದ ಕಲ್ಟ್ ಕ್ಲಾಸಿಕ್ ಕರಿಯ ಸಿನಿಮಾದ ಬಗ್ಗೆ ಒಂದಷ್ಟು ಇಂಟರೆಸ್ಟಿಂಗ್ ವಿಷಯಗಳನ್ನು ನೀಡಲಾಗಿದೆ.