X
ಹೋಮ್ ಚಲನಚಿತ್ರಗಳ ಒಳನೋಟ

ಜಗ್ಗೇಶ್ ಟು ದರ್ಶನ್: ವಿವಿಧ ಕಾರಣಗಳಿಗೆ ಹಲ್ಲೆಗೊಳಗಾದ ಸ್ಯಾಂಡಲ್‌ವುಡ್ ನಟರಿವರು!

Author Sowmya Bairappa | Published: Saturday, April 13, 2024, 10:57 AM [IST]

ನಟರ ಮೇಲೆ ಹಲ್ಲೆ ನಡೆದರೆ ಅದು ದೊಡ್ಡ ವಿಷಯವಾಗಿ ಮಾರ್ಪಡಾಗುತ್ತದೆ. ಇದು ಅವರ ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗುತ್ತದೆ. ಕನ್ನಡ ಚಿತ್ರರಂಗದ ಹಲವು ನಟರು ವಿವಿಧ ಕಾರಣಗಳಿಗೆ ಹಲ್ಲೆಗೊಳಗಾಗಿದ್ದಾರೆ. ಅಂತಹ ನಟರು ಯಾರು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.


cover image
ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ರಾಂತಿ ಸಿನಿಮಾ ಪ್ರಚಾರಕ್ಕೆಂದು ಹೊಸಪೇಟೆಗೆ ತೆರಳಿದ್ದರು. ದರ್ಶನ್ ನೋಡಲು ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿತ್ತು. ಈ ವೇಳೆ ನೂಕುನುಗ್ಗಲು ಏರ್ಪಟ್ಟಿತ್ತು. ವೇದಿಕೆ ಮೇಲೆ ನಿಲ್ಲಲೂ ಅವಕಾಶವಿರದಷ್ಟು ಅಭಿಮಾನಿಗಳು ಸೇರಿದ್ದರು. ಇನ್ನೇನು ರಚಿತಾ ರಾಮ್ ಮಾತಾಡಲು ಮುಂದಾಗಿದ್ದರಷ್ಟೇ. ಅದೇ ವೇಳೆ ದರ್ಶನ್ ಕೂಡ ಮುಂದೆ ಬಂದರು. ಆ ವೇಳೆ ದರ್ಶನ್ ಮೇಲೆ ಯಾರೋ ಚಪ್ಪಲಿ ಎಸೆದಿದ್ದರು. ಕಿಡಿಗೇಡಿಗಳ ಈ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೂವರನ್ನು ಬಂಧಿಸಲಾಗಿತ್ತು. ಈ ಘಟನೆಯನ್ನು ಸುದೀಪ್, ಶಿವರಾಜ್‌ಕುಮಾರ್ ಸೇರಿದಂತೆ ಸ್ಯಾಂಡಲ್‌ವುಡ್‌ನ ಬಹುತೇಕ ಸ್ಟಾರ್ ನಟರು ಖಂಡಿಸಿದ್ದರು.

ಜಗ್ಗೇಶ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ವಿಚಾರವಾಗಿ ನಟ ಜಗ್ಗೇಶ್ ಅವರು ನಿರ್ಮಾಪಕರೊಬ್ಬರ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್‌ವೊಂದು ವೈರಲ್ ಆಗಿತ್ತು. ಇದನ್ನು ಕೇಳಿಸಿಕೊಂಡ ದರ್ಶನ್ ಅಭಿಮಾನಿಗಳು, ಜಗ್ಗೇಶ್ ಅವರ ಮೇಲೆ ಗರಂ ಆಗಿದ್ದರು. ೨೦೨೨ರ ಫೆಬ್ರವರಿ ತಿಂಗಳಲ್ಲಿ ದರ್ಶನ್ ಅಭಿಮಾನಿಗಳು ಜಗ್ಗೇಶ್ ನಟನೆಯ 'ತೋತಾಪುರಿ' ಸಿನಿಮಾ ಸೆಟ್‌ಗೆ ತೆರಳಿ ಮುತ್ತಿಗೆ ಹಾಕಿದ್ದರು. ಈ ವಿಚಾರ ಬಹಳ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಆದರೆ, ಸಂದರ್ಶನವೊಂದರಲ್ಲಿ ದರ್ಶನ್, ತಮ್ಮ ಅಭಿಮಾನಿಗಳ ಪರವಾಗಿ ಕ್ಷೇಮೆ ಕೇಳಿದ್ದರು.  

ಕೋಮಲ್ ಕುಮಾರ್

2017ರಲ್ಲಿ ಬೆಂಗಳೂರಿನ ಮಂತ್ರಿ ಸ್ಕ್ವೇರ್ ಬಳಿ ನಟ ಕೋಮಲ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದ. ಕೋಮಲ್ ತಮ್ಮ ಮಗನನ್ನು ಟ್ಯೂಷನ್‌ನಿಂದ ವಾಪಾಸ್ ಮನೆಗೆ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ವ್ಯಕ್ತಿ ಏಕಾಏಕಿ ಕೋಮಲ್ ಮೇಲೆ ಮುಗಿಬಿದ್ದು ಹಲ್ಲೆ ಮಾಡಿದ್ದ. ಈ ಬಗ್ಗೆ ಮಾತನಾಡಿದ್ದ ಕೋಮಲ್, ಶ್ರೀರಾಂಪುರ ರೈಲ್ವೆ ಅಂಡರ್ ಪಾಸ್ ಬಳಿ ನಾಲ್ಕು ಮಂದಿ ಬೈಕ್ ಸವಾರರು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದರು. ನನ್ನ ಕಾರಿನ ಹಿಂದೆ ಇದ್ದ ಬೈಕ್ ಸವಾರ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ. ನಾನು ತಿರುಗಿ ಯಾಕೆ ಬೈದದ್ದು ಕೇಳಿದೆ. ಅಷ್ಟಕ್ಕೇ ಹಲ್ಲೆ ನಡೆಸಿದರು ಎಂದಿದ್ದರು. ಈ ಸಂಬಂಧ ಹಲ್ಲೆಗೈದ ವಿಜಯ್ ಎಂಬಾತನನ್ನು ಬಂಧಿಸಲಾಗಿತ್ತು.

ಹುಚ್ಚ ವೆಂಕಟ್

ಬಿಗ್‌ಬಾಸ್ ಸ್ಪರ್ಧಿ ಹಾಗೂ ನಟ ಹುಚ್ಚ ವೆಂಕಟ್ ಮೇಲೆ ಸಹ ಶ್ರೀರಂಗಪಟ್ಟಣದಲ್ಲಿ ಹಲ್ಲೆ ನಡೆದಿತ್ತು. ಕೆಲವು ಯುವಕರು ಹುಚ್ಚ ವೆಂಕಟ್ ಅನ್ನು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಸಂಜೆ 7 ಗಂಟೆ ವೇಳೆಗೆ ಬಂದ ಯುವಕರ ಗುಂಪೊಂದು 'ಲೋ ಹುಚ್ಚ ಟೀ ಅಂಗಡಿ ಬಳಿ ಏಕೆ ನಿಂತಿದ್ದೀಯಾ?' ಎಂದು ಕೇಳಿದ್ದಾರೆ. ಆಗ ಹುಚ್ಚ ವೆಂಕಟ್ ಗುಂಪಿನಲ್ಲಿದ್ದ ಒಬ್ಬರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಆಗ ಇಡೀ ಗುಂಪು ಹುಚ್ಚ ವೆಂಕಟ್ ಅನ್ನು ಕೆಡವಿ ಹೊಟ್ಟೆಗೆ, ತಲೆಗೆ ಹೊಡೆದು ಹಲ್ಲೆ ನಡೆಸಿದ್ದರು. ಹುಚ್ಚ ವೆಂಕಟ್ ಮೇಲೆ ಹಲ್ಲೆ ಮಾಡಿರುವುದನ್ನು ಹಿರಿಯ ನಟ ಜಗ್ಗೇಶ್, ದುನಿಯಾ ವಿಜಯ್ ಖಂಡಿಸಿದ್ದರು. ಸಾಧ್ಯವಾದರೆ ಆತನಿಗೆ ಸಹಾಯ ಮಾಡಿ, ಆದರೆ ಹಲ್ಲೆ ಮಾಡಬೇಡಿ ಎಂದು ಮನವಿ ಮಾಡಿದ್ದರು.

ಗುರುರಾಜ್ ಜಗ್ಗೇಶ್

ಸ್ಯಾಂಡಲ್‌ವುಡ್ ಹಿರಿಯ ನಟ ಜಗ್ಗೇಶ್ ಪುತ್ರನಾಗಿರುವ ಗುರುರಾಜ್ ಅವರ ಮೇಲೂ ಹಲ್ಲೆ ನಡೆಸಲಾಗಿತ್ತು. ಗುರುರಾಜ್ ಹಾಗೂ ಇನ್ನೊಬ್ಬನ ಕಾರು ಡಿಕ್ಕಿಯಾಗಿದ್ದವು. ಈ ನಡುವೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಬಳಿಕ ಆ ವ್ಯಕ್ತಿ ಚಾಕುವಿನಿಂದ ನಟ ಗುರುರಾಜ್ ಮೇಲೆ ಹಲ್ಲೆ ನಡೆಸಿದ್ದ.  

ಅರ್ಜುನ್ ದೇವ್

2017ರಲ್ಲಿ ಕನ್ನಡದ ಉದಯೋನ್ಮುಖ ನಟ ಅರ್ಜುನ್ ದೇವ್ ಮೇಲೆ ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದರು. ರಾಮನಗರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿತ್ತು. ದುಷ್ಕರ್ಮಿಗಳು ಅರ್ಜುನ್ ದೇವ್ ಅವರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆಗೆ ಯತ್ನಿಸಿದ್ದರು. ಜೊತೆಗೆ ಅವರ ಕಾರಿನ ಗಾಜು ಪುಡಿ-ಪುಡಿ ಮಾಡಿದ್ದರು.



Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+