X
ಹೋಮ್ ಚಲನಚಿತ್ರಗಳ ಒಳನೋಟ

ದರ್ಶನ್ ಸೇರಿ ವಿವಿಧ ಕಾರಣಕ್ಕೆ ಹಲ್ಲೆಗೊಳಗಾದ ಕನ್ನಡದ ನಟರಿವರು!

Author Sowmya Bairappa | Published: Tuesday, December 20, 2022, 05:01 PM [IST]

ಹೊಸಪೇಟೆಯಲ್ಲಿ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣ ಬೇರೆ-ಬೇರೆ ತಿರುವು ಮಡೆದುಕೊಳ್ಳುತ್ತಿದೆ. ಈ ಘಟನೆಯನ್ನು ಚಿತ್ರರಂಗದವರು, ಗಣ್ಯರು, ಅಭಿಮಾನಿಗಳು ಸೇರಿದಂತೆ ಅನೇಕರು ಖಂಡಿಸುತ್ತಿದ್ದಾರೆ. ಅಷ್ಟಕ್ಕೂ ನಟ ದರ್ಶನ್ ಮೇಲೆ ಚಪ್ಪಲಿ ಎಸೆದಿದ್ದು ಯಾರು ? ಎನ್ನುವ ಬಗ್ಗೆ ಭಾರೀ ಚರ್ಚೆ ನಡೀತಿದೆ. ದರ್ಶನ್ ಅವರ ಮೇಲೆ ನಡೆದಂತೆಯೇ ಈ ಹಿಂದೆ ಕೂಡ ಕೆಲ ನಟರ ಮೇಲೆ ಹಲ್ಲೆ ನಡೆಸಲಾಗಿದೆ. ಅದು ಯಾರು ಎಂಬ ಮಾಹಿತಿ ಇಲ್ಲಿದೆ.


cover image
ದರ್ಶನ್
1

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ರಾಂತಿ ಸಿನಿಮಾ ಪ್ರಚಾರಕ್ಕೆಂದು ಹೊಸಪೇಟೆಗೆ ತೆರಳಿದ್ದರು. ದರ್ಶನ್ ನೋಡಲು ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿತ್ತು. ಈ ವೇಳೆ ನೂಕು ನುಗ್ಗಲು ಏರ್ಪಟ್ಟಿತ್ತು. ವೇದಿಕೆ ಮೇಲೆ ನಿಲ್ಲಲೂ ಅವಕಾಶವಿರದಷ್ಟು ಅಭಿಮಾನಿಗಳು ಸೇರಿದ್ದರು. ಇನ್ನೇನು ರಚಿತಾ ರಾಮ್ ಮಾತಾಡಲು ಮುಂದಾಗಿದ್ದರಷ್ಟೇ. ಅದೇ ವೇಳೆ ದರ್ಶನ್ ಕೂಡ ಮುಂದೆ ಬಂದರು. ಆ ವೇಳೆ ದರ್ಶನ್ ಮೇಲೆ ಚಪ್ಪಲಿ ಬಿದ್ದಿದೆ. ಕಿಡಿಗೇಡಿಗಳ ಈ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ನೋಡಿ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ.  ರಚಿತಾ ರಾಮ್ ವೇದಿಕೆ ಮೇಲೆ ಮಾತಾಡುವಾಗಲೇ ಇಂತಹದೊಂದು ಘಟನೆ ಎದುರಾಗಿತ್ತು. ದರ್ಶನ್ ಮೇಲೆ ಚಪ್ಪಲಿ ಬಿದ್ದರೂ, ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳಲಿಲ್ಲ. ಬಳಿಕ ಎದುರಿಗೆ ಇದ್ದ ಕಾನ್‌ಸ್ಟೆಬಲ್ ವೇದಿಕೆ ಮೇಲೆ ಬಿದ್ದ ಚಪ್ಪಲಿಯನ್ನು ಕೆಳಗೆ ಹಾಕಿದರು. ಈ ಘಟನೆ ಕುರಿತು ಸಾಕಷ್ಟು ಖಂಡನೆ ವ್ಯಕ್ತವಾಗುತ್ತಿದೆ. 

ಜಗ್ಗೇಶ್
2

ನಟ ದರ್ಶನ್ ಅಭಿಮಾನಿಗಳ ವಿಚಾರವಾಗಿ ನಟ ಜಗ್ಗೇಶ್ ಅವರು ನಿರ್ಮಾಪಕರೊಬ್ಬರ ಜೊತೆ ಮಾತನಾಡಿರುವ ಆಡಿಯೋ ಕ್ಲಿಪ್ ಬಹಿರಂಗವಾಗಿತ್ತು. ಇದನ್ನು ಕೇಳಿಸಿಕೊಂಡ ದರ್ಶನ್ ಅಭಿಮಾನಿಗಳು ಜಗ್ಗೇಶ್ ಅವರ ಮೇಲೆ ಗರಂ ಆಗಿದ್ದರು. ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ದರ್ಶನ್ ಅಭಿಮಾನಿಗಳು ಜಗ್ಗೇಶ್ ನಟನೆಯ 'ತೋತಾಪುರಿ' ಸಿನಿಮಾ ಸೆಟ್ ಗೆ ತೆರಳಿ ಮುತ್ತಿಗೆ ಹಾಕಿ, ಬಾಯಿಗೆ ಬಂದಹಾಗೆ ಮಾತನಾಡಿದ್ದರು. ಈ ವಿಚಾರ ಬಹಳ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಆದರೆ, ಸಂದರ್ಶನವೊಂದರಲ್ಲಿ ದರ್ಶನ್ ಅಭಿಮಾನಿಗಳ ಪರವಾಗಿ ಕ್ಷೇಮೆ ಕೇಳಿದ್ದರು.  

ಕೋಮಲ್
3

2017ರಲ್ಲಿ ಬೆಂಗಳೂರಿನ ಮಂತ್ರಿ ಸ್ಕ್ವೇರ್ ಬಳಿ ನಟ ಕೋಮಲ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದ. ನಟ ಕೋಮಲ್ ತಮ್ಮ ಮಗನನ್ನು ಟ್ಯೂಷನ್ ನಿಂದ ವಾಪಾಸ್ ಮನೆಗೆ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ವ್ಯಕ್ತಿ ಏಕಾಏಕಿ ಕೋಮಲ್ ಮೇಲೆ ಮುಗಿಬಿದ್ದು ಹಲ್ಲೆ ಮಾಡಿದ್ದ. ಈ ಬಗ್ಗೆ ಮಾತನಾಡಿದ್ದ ಕೋಮಲ್, ಶ್ರೀರಾಂಪುರ ರೈಲ್ವೆ ಅಂಡರ್ ಪಾಸ್ ಬಳಿ ನಾಲ್ಕು ಮಂದಿ ಬೈಕ್ ಸವಾರರು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದರು. ನನ್ನ ಕಾರಿನ ಹಿಂದೆ ಇದ್ದ ಬೈಕ್ ಸವಾರ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ. ನಾನು ತಿರುಗಿ ಯಾಕೆ ಬೈದದ್ದು ಕೇಳಿದೆ. ಅಷ್ಟಕ್ಕೇ ಹಲ್ಲೆ ನಡೆಸಿದರು ಎಂದಿದ್ದರು. ಈ ಸಂಬಂಧ ಹಲ್ಲೆಗೈದ ವಿಜಯ್ ಎಂಬಾತನನ್ನು ಬಂಧಿಸಲಾಗಿತ್ತು. 

ಅರ್ಜುನ್ ದೇವ್
4

2017ರಲ್ಲಿ ಕನ್ನಡದ ಉದಯೋನ್ಮುಖ ನಟ ಅರ್ಜುನ್ ದೇವ್ ಮೇಲೆ ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದರು. ರಾಮನಗರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿತ್ತು. ದುಷ್ಕರ್ಮಿಗಳು ಅರ್ಜುನ್ ದೇವ್ ಅವರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆಗೆ ಯತ್ನಿಸಿದ್ದರು. ಜೊತೆಗೆ ಅವರ ಕಾರಿನ ಗಾಜು ಪುಡಿ-ಪುಡಿ ಮಾಡಿದ್ದರು.

ಗುರುರಾಜ್ ಜಗ್ಗೇಶ್
5

ಸ್ಯಾಂಡಲ್ ವುಡ್ ನಟ ಹಾಗೂ ಹಿರಿಯ ನಟ ಜಗ್ಗೇಶ್ ಪುತ್ರನಾಗಿರುವ ಗುರುರಾಜ್ ಅವರ ಮೇಲೂ ಹಲ್ಲೆ ನಡೆಸಲಾಗಿತ್ತು. ಗುರುರಾಜ್ ಹಾಗೂ ಇನ್ನೊಬ್ಬನ ಕಾರು ಡಿಕ್ಕಿ ಹೊಡೆದಿದ್ದವು. ಈ ನಡುವೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಬಳಿಕ ಆ ವ್ಯಕ್ತಿ ಚಾಕುವಿನಿಂದ ನಟ ಗುರುರಾಜ್ ಮೇಲೆ ಹಲ್ಲೆ ನಡೆಸಿದ್ದ.   

ಹುಚ್ಚ ವೆಂಕಟ್
6

ಹುಚ್ಚ ವೆಂಕಟ್ ಮೇಲೆ ಸಹ ಶ್ರೀರಂಗಪಟ್ಟಣದಲ್ಲಿ ಹಲ್ಲೆ ನಡೆದಿತ್ತು. ಕೆಲವು ಯುವಕರು ಹುಚ್ಚ ವೆಂಕಟ್ ಅನ್ನು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಸಂಜೆ 7 ಗಂಟೆ ವೇಳೆಗೆ ಬಂದ ಯುವಕರ ಗುಂಪೊಂದು 'ಲೋ ಹುಚ್ಚ ಟೀ ಅಂಗಡಿ ಬಳಿ ಏಕೆ ನಿಂತಿದ್ದೀಯಾ?' ಎಂದು ಕೇಳಿದ್ದಾರೆ. ಆಗ ಹುಚ್ಚ ವೆಂಕಟ್ ಗುಂಪಿನಲ್ಲಿದ್ದ ಒಬ್ಬರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಆಗ ಇಡೀ ಗುಂಪು ಹುಚ್ಚ ವೆಂಕಟ್ ಅನ್ನು ಕೆಡವಿ ಹೊಟ್ಟೆಗೆ, ತಲೆಗೆ ಹೊಡೆದು ಹಲ್ಲೆ ನಡೆಸಿದ್ದರು. ಹುಚ್ಚ ವೆಂಕಟ್ ಮೇಲೆ ಹಲ್ಲೆ ಮಾಡಿರುವುದನ್ನು ಹಿರಿಯ ನಟ ಜಗ್ಗೇಶ್, ದುನಿಯಾ ವಿಜಯ್ ಖಂಡಿಸಿದ್ದರು. ಸಾಧ್ಯವಾದರೆ ಆತನಿಗೆ ಸಹಾಯ ಮಾಡಿ, ಆದರೆ ಹಲ್ಲೆ ಮಾಡಬೇಡಿ ಎಂದು ಮನವಿ ಮಾಡಿದ್ದರು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+