ಕೊಡಗಿನ ವೀರ ಸೈನಿಕ ಅಚ್ಚಪ್ಪನ ಸಾಹಸ ಶೌರ್ಯ ಮತ್ತು ಅವನ ಸುಂದರ ದಾಂಪತ್ಯದೊಂದಿಗೆ ಯುದ್ಧ ಹೇಗೆ ಅವನ ಕುಟುಂಬವನ್ನು ನಾಶ ಮಾಡುತ್ತದೆ ಎಂದು ಚಿತ್ರದಲ್ಲಿ ತೋರಿಸಲಾಗಿದೆ. ಯುಧ್ಧದ ಇನ್ನೊಂದು ಮುಖವನ್ನು ತೆರೆದಿಟ್ಟ ಈ ಚಿತ್ರ ರಾಷ್ಟ್ರ ಪ್ರಶಸ್ತಿ ಪಡೆಯಿತು. ಈ ಚಿತ್ರದ ಸಂದರ್ಭದಲ್ಲಿ ಹೆಲಿಕಾಪ್ಟರ್ ನಿಂದ ಜಿಗಿಯುವಾಗ ವಿಷ್ಣುವರ್ಧನ್ ರವರಿಗೆ ಆಘಾತವಾಗಿತ್ತು.