X
ಹೋಮ್ ಚಲನಚಿತ್ರಗಳ ಒಳನೋಟ

ಕನ್ನಡ ರಾಜ್ಯೋತ್ಸವ 2023: ಕನ್ನಡ ನಾಡಿಗಾಗಿ ಹೋರಾಡಿದ ಶ್ರೇಷ್ಠ ವ್ಯಕ್ತಿಗಳ ಪಾತ್ರದಲ್ಲಿ ಮಿಂಚಿದ ತಾರೆಯವರಿವರು!

Author Sowmya Bairappa | Published: Tuesday, October 31, 2023, 08:03 PM [IST]

ಕನ್ನಡಿಗರ ಅಸ್ಮಿತೆಯ ಪ್ರತೀಕ ಕನ್ನಡ ರಾಜ್ಯೋತ್ಸವ. ದಶಕಗಳ ಕಾಲ ಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿತು. ಕನ್ನಡದಲ್ಲಿ ನಮ್ಮ ನೆಲ, ನುಡಿ, ಸಂಸ್ಕೃತಿಯನ್ನು ಬಿಂಬಿಸುವ ಅನೇಕ ಸಿನಿಮಾಗಳು ತೆರೆಗೆ ಬಂದಿವೆ. ಜೊತೆಗೆ ಕನ್ನಡ ನಾಡಿಗಾಗಿ ಜೀವ ತೆತ್ತ ಅನೇಕ ಶ್ರೇಷ್ಠ ವ್ಯಕ್ತಿಗಳ ಹೋರಾಟದ ಕುರಿತಾದ ಚಿತ್ರಗಳು ಬಂದಿವೆ. ಇಲ್ಲಿ ಕನ್ನಡ ನಾಡಿಗಾಗಿ ಹೋರಾಡಿದ ಶ್ರೇಷ್ಠ ವ್ಯಕ್ತಿಗಳ ಪಾತ್ರದಲ್ಲಿ ಮಿಂಚಿದ ಸ್ಯಾಂಡಲ್‌ವುಡ್ ತಾರೆಯರ ಪಟ್ಟಿಯನ್ನು ನೀಡಲಾಗಿದೆ.


cover image
ಕಿತ್ತೂರು ರಾಣಿ ಚೆನ್ನಮ್ಮ

ಪ್ರಾದೇಶಿಕ ಸ್ವಾತಂತ್ರ್ಯ ಹೋರಾಟಗಾರರ ಕುರಿತ ಸಿನಿಮಾಗಳ ದೊಡ್ಡ ಯಶಸ್ಸು ಕಂಡಿವೆ. ಅವುಗಳ ಪೈಕಿ ಬಿ.ಆರ್.ಪಂತುಲು ನಿರ್ದೇಶನದ ಕಿತ್ತೂರು ರಾಣಿ ಚೆನ್ನಮ್ಮ ಪ್ರಮುಖವಾದದ್ದು. ಈ ಚಿತ್ರದಲ್ಲಿ ನಟಿ ಬಿ.ಸರೋಜಾದೇವಿ ಅವರು ಬ್ರಿಟಿಷರ ವಿರುದ್ಧ ಹೋರಾಡುವ ರಾಣಿ ಚೆನ್ನಮ್ಮನ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದರು. ಈ ಸಿನಿಮಾ ಶತಮಾನೋತ್ಸವ ಆಚರಿಸಿಕೊಳ್ಳುವುದರ ಜೊತೆಗೆ ಅನೇಕ ಪ್ರಶಸ್ತಿಗಳಿಗೆ ಭಾಜನವಾಗಿತ್ತು. 

 

ಮಯೂರ

ಡಾ.ರಾಜ್‌ಕುಮಾರ್ ವೃತ್ತಿ ಜೀವನದ ಸೂಪರ್ ಹಿಟ್ ಚಿತ್ರಗಳಲ್ಲಿ 'ಮಯೂರ' ಕೂಡ ಒಂದು. 1975ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ರಾಜ್ ಅವರಿಗೆ ಭಾರೀ ಹೆಸರನ್ನು ತಂದುಕೊಟ್ಟಿತ್ತು. ಕನ್ನಡದ ಪ್ರಥಮ ರಾಜನೆಂದು ಹೆಸರಾದ ಕದಂಬ ರಾಜಮನೆತನದ ದೊರೆ ಮಯೂರವರ್ಮನ ಕಥೆಯನ್ನಾಧರಿಸಿದ ಚಲನಚಿತ್ರ ಇದಾಗಿದ್ದು, ದೇವಡು ನರಸಿಂಹ ಶಾಸ್ತ್ರಿ ಅವರ ಕಾದಂಬರಿಯನ್ನಾಧರಿಸಿ ಈ ಚಿತ್ರವನ್ನು ತೆಗೆಯಲಾಗಿತ್ತು. 

ಮುತ್ತಿನಹಾರ

ರಾಜೇಂದ್ರಬಾಬು ನಿರ್ದೇಶನದ 'ಮುತ್ತಿನಹಾರ' ಸಿನಿಮಾದಲ್ಲಿ ಯುಧ್ಧದ ಇನ್ನೊಂದು ಮುಖ ತೋರಿಸಲಾಗಿತ್ತು. ಚಿತ್ರದಲ್ಲಿ ವಿಷ್ಣುವರ್ಧನ್ ಕೊಡಗಿನ ವೀರ ಸೈನಿಕ  ಅಚ್ಚಪ್ಪ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.  ಮುತ್ತಿನಹಾರದಲ್ಲಿ ಸೈನಿಕ ಅಚ್ಚಪ್ಪನ ಸಾಹಸ ಶೌರ್ಯ ಮತ್ತು ಅವನ ಸುಂದರ ದಾಂಪತ್ಯವನ್ನು ಯುದ್ಧ ಹೇಗೆ ನಾಶ ಮಾಡುತ್ತದೆ ಎಂದು ತೋರಿಸಲಾಗಿತ್ತು. ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಕೂಡ ಲಭಿಸಿತ್ತು. 

ವೀರಪ್ಪ ನಾಯಕ

ಎಸ್‌ ನಾರಾಯಣ್ ನಿರ್ದೇಶನದಲ್ಲಿ ಮೂಡಿಬಂದ ವೀರಪ್ಪ ನಾಯಕ ಸಿನಿಮಾದಲ್ಲಿ ಬೆಳಗಾವಿ ಹತ್ತಿರದ ಹಳ್ಳಿಯಲ್ಲಿ ವಾಸಿಸುವ ಒಬ್ಬ ದೇಶಪ್ರೇಮಿ ಗಾಂಧಿವಾದಿ ನಾಯಕನ ಜೀವನದ ಚಿತ್ರಣ ತೋರಿಸಲಾಗಿತ್ತು. ಸಂಬಂಧಗಳಿಗಿಂತ ದೇಶಪ್ರೇಮವೇ ಹೆಚ್ಚೆಂದು ಉಗ್ರಗ್ರಾಮಿಯಾದ ತನ್ನ ಮಗನನ್ನೇ ಕೊಲ್ಲುವ ಅಪ್ಟಟ ದೇಶಾಭಿಮಾನಿಯ ಕಥೆ ಈ ಚಿತ್ರದಲ್ಲಿದೆ.

ರಣಧೀರ ಕಂಠೀರವ

ಈ ಚಿತ್ರದಲ್ಲಿ ರಾಜ್ ರಣಧೀರ ಕಂಠೀರವ ಎಂದೇ ಕರೆಯುತಿದ್ದ ಮೈಸೂರಿನ ಕಂಠೀರವ ನರಸರಾಜ್ ಒಡೆಯರ್ ಪಾತ್ರದಲ್ಲಿ ಮಿಂಚಿದ್ದರು. ಈ ಚಿತ್ರವನ್ನು ಕನ್ನಡ ಚಲನಚಿತ್ರ ಕಲಾವಿದರ ಸಂಘದ ಹೆಸರಿನಲ್ಲಿ ಡಾ.ರಾಜ್, ಜಿ.ವಿ.ಅಯ್ಯರ್, ನರಸಿಂಹರಾಜು ಮತ್ತು ಬಾಲಕೃಷ್ಣ ನಿರ್ಮಿಸಿದ್ದರು.

ವೀರ ಸಿಂಧೂರ ಲಕ್ಷ್ಮಣ

ಹುಣಸೂರು ಕೃಷ್ಣಮೂರ್ತಿ ನಿರ್ದೇಶನದ ಈ ಚಿತ್ರದಲ್ಲಿ ಬಸವರಾಜ್, ಕೆ,ಎಸ್.ಅಶ್ವಥ್, ಸುಧೀರ್, ವಜ್ರಮುನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಮಂಜುಳಾ, ಅನುರಾಧಾ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡರು. ಚಿತ್ರಕ್ಕೆ ಟಿ.ಜಿ.ಲಿಂಗಪ್ಪ ಸಂಗೀತ ನೀಡಿದರು. ಈ ಚಿತ್ರ ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗ ಸಿಂದೂರಿನಲ್ಲಿ  ಜನಿಸಿದ ಸ್ವಾತಂತ್ರ ಹೋರಾಟಗಾರ ಲಕ್ಷ್ಮಣನ ಕಥೆ ಹೇಳುತ್ತದೆ. ತನ್ನದೇ ಒಂದು ತಂಡ ಕಟ್ಟಿಕೊಂಡು ಬ್ರಿಟಿಷ್ ಕಚೇರಿಗಳನ್ನು ಲೂಟಿ ಮಾಡಿ ಬಡವರಿಗೆ ಹಂಚುತ್ತಿದ್ದ. ಬ್ರಿಟಿಷರು ಹೊಂಚು ಹಾಕಿ ರಾತ್ರಿ ಊಟ ಮಾಡುವಾಗ ಮೋಸದಿಂದ ಕೊಂದರು. ಕೇವಲ 24 ನೆ ವಯಸ್ಸಿನಲ್ಲಿ ಮಡಿದ ಈ ಸ್ವಾತಂತ್ರ ಹೋರಾಟಗಾರನ ಕುರಿತು ಹಲವಾರು ನಾಟಕ ಮತ್ತು ಜಾನಪದ ಸಾಹಿತ್ಯಗಳು ಮೂಡಿಬಂದಿವೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ

'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಸಿನಿಮಾ ಮೂಲಕ ದರ್ಶನ್ ಮೊದಲ ಬಾರಿಗೆ ಐತಿಹಾಸಿಕ ಸಿನಿಮಾದಲ್ಲಿ ನಟಿಸಿದರು. ಕಿತ್ತೂರಿನ ಸ್ವಾತಂತ್ರದ ಕಿಚ್ಚನ್ನು ಈ ಸಿನಿಮಾ ಬಿತ್ತರಿಸಿತ್ತು. ಭಾರತದ ಪ್ರಥಮ ಸ್ವಾತಂತ್ಯ ಸಂಗ್ರಾಮ, ಆಂಧ್ರದಲ್ಲಿ ಸೈರಾ ನರಸಿಂಹ ರೆಡ್ಡಿ ಹೋರಾಟಕ್ಕೂ ಮೊದಲೇ ಬ್ರಿಟಿಷರ ವಿರುದ್ಧ ತೊಡೆತಟ್ಟಿದ ಸೇನಾನಿ ರಾಯಣ್ಣನ ಬದುಕನ್ನು ಚಿತ್ರ ಮನೋಘ್ನವಾಗಿ ಬಿತ್ತರಿಸಿತ್ತು. ದರ್ಶನ್ ಸಿನಿ ಕರಿಯರ್ ನಲ್ಲಿ 30 ಕೋಟಿ ಬಂಡವಾಳ ಹೂಡಿದ ಮೊದಲ ಸಿನಿಮಾ ಇದು. ದರ್ಶನ್ ರಾಯಣ್ಣಬಾಗಿ ಮಿಂಚಿದ್ದ ಈ ಸಿನಿಮಾ ಬಾಕ್ಸಾಫೀಸಿನಲ್ಲಿ 50 ಕೋಟಿಗೂ ಅಧಿಕ ಗಳಿಸಿತ್ತು.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+