ಕನ್ನಡಿಗರ ಅಸ್ಮಿತೆಯ ಪ್ರತೀಕ ಕನ್ನಡ ರಾಜ್ಯೋತ್ಸವ. ದಶಕಗಳ ಕಾಲ ಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿತು. ಕಲೆಗಳ ಮೂಲಕ ರಂಗಭೂಮಿ ಮತ್ತು ಸಿನಿಮಾ ಕನ್ನಡ ಪ್ರೇಮವನ್ನು ವ್ಯಕ್ತಪಡಿಸಿವೆ. ಎಸ್.ಪಿ ಬಾಲಸುಬ್ರಹ್ಮಣ್ಯಂ ತಮ್ಮ ಕಂಚಿನ ಕಂಠದಿಂದ ವಿಶ್ವಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಇಲ್ಲಿ ಎಸ್.ಪಿ.ಬಿ ಹಾಡಿರುವ ಕನ್ನಡ ರಾಜ್ಯೋತ್ಸವ ಗೀತೆಗಳನ್ನು ನೀಡಲಾಗಿದೆ.