X
ಹೋಮ್ ಚಲನಚಿತ್ರಗಳ ಒಳನೋಟ

ನಾಗ ಪಂಚಮಿ 2024: ನಾಗ ಮಹಿಮೆಯ ಕುರಿತ ಸೂಪರ್ ಹಿಟ್ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.

Author Sowmya Bairappa | Updated: Friday, August 9, 2024, 10:05 AM [IST]

ಹಿಂದೂ ಸಂಪ್ರದಾಯದಲ್ಲಿ ಆಚರಿಸುವ ನಾಗರಪಂಚಮಿಯನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತೆ. ಇದು ಶ್ರಾವಣದ ಮಾಸದ ಮೊದಲ ಹಬ್ಬವಾಗಿದ್ದು, ನಾಗದೇವತೆಯನ್ನು ಪೂಜಿಸಲಾಗುತ್ತದೆ. ನಾಗಪಂಚಮಿಯ ಕುರಿತು ಪುರಾಣಗಳಲ್ಲಿ ಹಲವು ರೀತಿಯ ಕಥೆಗಳಿವೆ. ಈ ಹಬ್ಬವನ್ನು ಪ್ರಮುಖವಾಗಿ ಹೆಣ್ಮಕ್ಕಳ ಹಬ್ಬವೆಂದೇ ಕರೆಯಲಾಗುತ್ತೆ. ಕನ್ನಡದಲ್ಲಿ ನಾಗದೇವತೆ ಹಾಗೂ ನಾಗರಹಾವಿನ ಮಹತ್ವ ಸಾರುವ ಅನೇಕ ಸಿನಿಮಾಗಳು ಬಂದಿವೆ. ಆ ಸಿನಿಮಾಗಳು ಯಾವವು ಎಂಬ ಮಾಹಿತಿ ಇಲ್ಲಿದೆ.


cover image
ನಾಗ ದೇವತೆ

2000ರಲ್ಲಿ ತೆರೆಕಂಡ ಸಿನಿಮಾ ನಾಗದೇವತೆ. ಓಂ ಸಾಯಿ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಚಿತ್ರದಲ್ಲಿ ನಟಿ ಪ್ರೇಮ, ಚಾರುಲತಾ, ಸೌಂದರ್ಯ, ಸಾಯಿ ಕುಮಾರ್ ಸೇರಿದಂತೆ ಹಲವರು ನಟಿಸಿದ್ದರು. ನಟಿ ಸೌಂದರ್ಯ ನಾಗದೇವತೆ ಪಾತ್ರ ನಿರ್ವಹಿಸಿದ್ದರು. 

ಗಿರೀಶ್ ಕಾರ್ನಾಡ್ ಅವರ ನಾಟಕ ಆಧರಿಸಿ ತಯಾರಾದ ಸಿನಿಮಾ ನಾಗಮಂಡಲ. ಟಿ.ಎಸ್.ನಾಗಭರಣ ನಿರ್ದೇಶಿಸಿದ್ದ ಈ ಸಿನಿಮಾಗೆ ಬರೋಬ್ಬರಿ ಐದು ರಾಜ್ಯ ಪ್ರಶಸ್ತಿಗಳು ಲಭಿಸಿದ್ದವು. ಹಾವು ಮತ್ತು ಮಹಿಳೆ ನಡುವಿನ ಪ್ರೀತಿ ಮತ್ತು ಸರಸದ ಕಥೆ ಹೊಂದಿದ್ದ ಈ ಸಿನಿಮಾದಲ್ಲಿ ಪ್ರಕಾಶ್ ರಾಜ್ ಹಾವಿನ ಪಾತ್ರ ಮಾಡಿದ್ದರು. ವಿಜಯಲಕ್ಷ್ಮಿ ಮಹಿಳೆ ಪಾತ್ರ ಮಾಡಿದ್ದ ಈ ಸಿನಿಮಾ 1997ರಲ್ಲಿ ತೆರೆಗೆಬಂದಿತ್ತು. 

 

ಶ್ರೀ ನಾಗ ಶಕ್ತಿ

ಓಂ ಸಾಯಿ ಪ್ರಕಾಶ್ ಭಕ್ತಿಪ್ರಧಾನ ಕಥೆಗಳಿಗೆ ಹೆಸರುವಾಸಿಯಾಗಿದ್ದರು. ಇವರ ನಿರ್ದೇಶನದಲ್ಲಿ ಮೂಡಿಬಂದ ಚಿತ್ರ ಶ್ರೀನಾಗಶಕ್ತಿ. ನಟಿ ಶೃತಿ, ರಾಮ್‌ಕುಮಾರ್ ಹಾಗೂ ಚಂದ್ರಿಕಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು. ಚಿತ್ರದಲ್ಲಿ ಚಂದ್ರಿಕಾ ಹಾವಿನ ಪಾತ್ರ ಮಾಡಿದ್ದರು. 2011ರಲ್ಲಿ ಈ ಸಿನಿಮಾಗೆ ತೆರೆಗೆ  ಬಂದಿತ್ತು. 

1992ರಲ್ಲಿ ತೆರೆಕಂಡ ಕೆ.ಎಸ್‌.ಆರ್ ದಾಸ್ ನಿರ್ದೇಶನದ ಶಿವನಾಗ ಸಿನಿಮಾ ಕೂಡ ನಾಗದೇವತೆಯ ಮಹತ್ವವನ್ನು ತಿಳಿಸಿತ್ತು. ಸಿನಿಮಾದಲ್ಲಿ ಅರ್ಜುನ್ ಸರ್ಜಾ ಹಾಗೂ ಮಾಲಾಶ್ರೀ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ಮನೆದೇವರಾದ ನಾಗದೇವತೆ ಒಂದು ಕುಟುಂಬವನ್ನು ಹೇಗೆ ಕಾಯುತ್ತದೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿತ್ತು.  

1991ರಲ್ಲಿ ಬಿಡುಗಡೆಯಾದ ನಾಗಿಣಿ ಸಿನಿಮಾ ಬಹುತೇಕರಿಗೆ ನೆನಪಿನಲ್ಲಿರಬಹುದು. ಶಂಕರ್ ನಾಗ್, ಅನಂತ್ ನಾಗ್, ದೇವರಾಜ್, ತಾರಾ, ಗೀತಾ, ರಂಜನಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದ ಸಿನಿಮಾವಿದು. ಶ್ರೀಪ್ರಿಯ ನಿರ್ದೇಶನದ ಈ ಚಿತ್ರ ಸೇಡಿನ ಕಥೆ ಹೊಂದಿತ್ತು. ನಾಗರಾಜನನ್ನು ಕೊಂದವರ ವಿರುದ್ಧ ನಾಗಿಣಿ ಸೇಡು ತೀರಿಸಿಕೊಳ್ಳುವ ರೋಚಕ ಕಥೆ ಹೊಂದಿದ್ದ ಈ ಚಿತ್ರದಲ್ಲಿ ನಟಿ ಗೀತಾ ನಾಗಿಣಿಯಾಗಿ ಅಭಿನಯಿಸಿದ್ದರು.  

ಬಳ್ಳಾರಿ ನಾಗ

1986ರಲ್ಲಿ ತೆರೆಕಂಡ ಬೆಳ್ಳಿನಾಗ ಸಿನಿಮಾದಲ್ಲಿ ಟೈಗರ್ ಪ್ರಭಾಕರ್, ನಳಿನಿ, ದಿನೇಶ್, ಸುದರ್ಶನ್, ರಾಜಾನಂದ್ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದರು. ಎನ್.ಎಸ್ ಧನಂಜಯ್ ನಿರ್ದೇಶಿಸಿದ್ದ ಈ ಚಿತ್ರದಲ್ಲಿ ವಿ ಲಕ್ಷ್ಮಣ ಅವರ ಸಿನಿಮಾಟೋಗ್ರಫಿಯಲ್ಲಿ ನಾಗನನ್ನು ಅದ್ಬುತವಾಗಿ ತೋರಿಸಲಾಗಿತ್ತು.  

 

1975ರಲ್ಲಿ ಬಂದ ಸಿನಿಮಾ 'ನಾಗಕನ್ಯೆ'. ಎಸ್‌ವಿ ರಾಜೇಂದ್ರ ಸಿಂಗ್ ಬಾಬು ಚೊಚ್ಚಲ ಬಾರಿಗೆ ನಿರ್ದೇಶಿಸಿದ ಚಿತ್ರ. ಡಾ ವಿಷ್ಣುವರ್ಧನ್, ರಾಜಶ್ರೀ, ಭವಾನಿ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸತ್ಯಂ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಈ ಸಿನಿಮಾದ ಸಂಗೀತ ಅನೇಕ ವರ್ಷಗಳ ಕಾಲ ಇಂತಹ ಚಿತ್ರಗಳಿಗೆ ಮಾದರಿಯಾಗಿತ್ತು. 

1982ರಲ್ಲಿ ಬಂದ ಸಿನಿಮಾ 'ಗರುಡರೇಖೆ'. ಶ್ರೀನಾಥ್, ಮಾಧವಿ, ಅಂಬಿಕಾ, ವಜ್ರಮುನಿ, ಟೈಗರ್ ಪ್ರಭಾಕರ್ ಸೇರಿದಂತೆ ಹಲವು ನಟಿಸಿದ್ದರು. ನಾಗಮುತ್ತು ಕಥಾಹಂದರವನ್ನಾಗಿಸಿ ತಯಾರಿಸಿದ್ದ ಚಿತ್ರ. ಪಿ.ಎಸ್ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ಗರುಡ ರೇಖೆಯ ಮಹತ್ವವನ್ನು ತಿಳಿಸಲಾಗಿತ್ತು. ಗರುಡ ರೇಖೆ ಹೊಂದಿರುವ ವ್ಯಕ್ತಿಯ ಕಥೆಯನ್ನು ಇದು ಒಳಗೊಂಡಿತ್ತು. 

 

ವಿಷ್ಣುವರ್ಧನ್, ಆರತಿ, ಮಾಧವಿ, ಜಯಮಾಲಿನಿ ನಟಿಸಿರುವ ಖೈದಿ ಸಿನಿಮಾದ ಹಾಡೊಂದು ಬಹಳ ಜನಪ್ರಿಯವಾಗಿದೆ. ನಾಗರಾಜ ಮತ್ತು ನಾಗಿಣಿಯ ರೂಪ ತಾಳಿ ನೃತ್ಯ ಮಾಡುವ 'ತಾಳೆ ಹೂವು ಎದೆಯಿಂದ...' ಹಾಡು ಇದಾಗಿದ್ದು, ಇಂತಹ ವಿಶೇಷ ಸಂದರ್ಭದಲ್ಲಿ ಮೊದಲು ನೆನಪಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+