X
ಹೋಮ್ ಚಲನಚಿತ್ರಗಳ ಒಳನೋಟ

ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್‌ವುಡ್ ನಟ-ನಟಿಯರ ಪಟ್ಟಿ ಇಲ್ಲಿದೆ.

Author Sowmya Bairappa | Updated: Thursday, August 10, 2023, 06:36 PM [IST]

ಇತ್ತೀಚಿನ ಹೃದಯಾಘಾತಕ್ಕೆ ಚಿಕ್ಕವಯಸ್ಸಿನವರೇ ಬಲಿಯಾಗುತ್ತಿದ್ದಾರೆ. ನಿನ್ನೆಯವರೆಗೂ ಖುಷಿ ಖುಷಿಯಾಗಿದ್ದವರೂ ಇನ್ನಿಲ್ಲ ಎಂಬ ವಿಚಾರವನ್ನು ಯಾರಿಗೂ ಅರಗಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಳೆದ ಎರಡ್ಮೂರು ವರ್ಷಗಳಿಂದ ನಟರಿಂದ ಹಿಡಿದು ರಾಜಕಾರಣಿಳವರೆಗೆ ಹೃದಯಾಘಾತದಿಂದ ಘಟಾನುಘಟಿಗಳ ಮೃತಪಟ್ಟಿದ್ದಾರೆ. ಇಲ್ಲಿ ಹೃದಯಾಘಾತಕ್ಕೆ ಬಳಿಯಾದ ಸ್ಯಾಂಡಲ್‌ವುಡ್ ನಟ-ನಟಿಯರ ಪಟ್ಟಿಯನ್ನು ನೀಡಲಾಗಿದೆ.


cover image
ಪುನೀತ್ ರಾಜ್ ಕುಮಾರ್

ನಟ ಡಾ.ಪುನೀತ್ ರಾಜ್‌ಕುಮಾರ್ 2021ರ ಅಕ್ಟೋಬರ್ 29ರಂದು ಹೃದಯಾಘಾತದಿಂದ ನಿಧನರಾದರು. ಅವರ ಹಠಾತ್ ಅಗಲಿಕೆಯಿಂದ ಕರುನಾಡಿಗೆ ಬರಸಿಡಿಲು ಬಂಡಿದಂತಾಗಿತ್ತು. ಪುನೀತ್ ಕೋಟ್ಯಂತರ ಜನರ ಆರಾಧ್ಯ ದೈವವಾಗಿದ್ದರು. ಅವರು ಎಲೆಮರೆ ಕಾಯಿಯಂತೆ ಅನಾಥಾಶ್ರಮ, ಗೋ ಶಾಲೆ, ಮಕ್ಕಳ ಶಿಕ್ಷಣಕ್ಕಾಗಿ ನೆರವು, ವೃದ್ಧಾಶ್ರಮ ಹೀಗೆ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದರು. ಯಾವುದೇ ಪ್ರಚಾರ ಬಯಸದೇ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡು ಎಲ್ಲರಿಗೂ ಮಾದರಿಯಾಗಿದ್ದರು. ಅಪ್ಪು ಸಿನಿಮಾ ಕ್ಷೇತ್ರದಲ್ಲೂ ಎಲ್ಲರಿಗೂ ಮಾದರಿಯಾಗಿದ್ದರು. ಬಾಲ ಕಲಾವಿದರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಅವರು, ಅಪ್ಪು ಸಿನಿಮಾದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟರು. ಅಪ್ಪು ಸಮಾಜಕ್ಕೆ ಮಾದರಿಯಾಗುವಂತಹ ಸಿನಿಮಾಗಳನ್ನೇ ಮಾಡಿದ್ದರು. ಇವರ ಸಿನಿಮಾಗಳನ್ನು ಚಿಕ್ಕವರಿಂದ ಹಿಡಿದು ವಯಸ್ಸಾದವರ ವರೆಗೆ ಪ್ರೀತಿಯಿಂದ ನೋಡುತ್ತಿದ್ದರು. ಇಷ್ಟೆಲ್ಲಾ ಸಾಧನೆ ಮಾಡಿದ್ದ ಪುನೀತ್ ಅವರ ಅಗಲಿಕೆ ಕರುನಾಡಿಗೆ ತುಂಬಲಾರದ ನಷ್ಟ.   

ಚಿರಂಜೀವಿ ಸರ್ಜಾ

ಚಿಕ್ಕಪ್ಪ ಅರ್ಜುನ್ ಸರ್ಜಾ ಅವರ ಕೈಕೆಳಗೆ ಸುಮಾರು ನಾಲ್ಕು ವರ್ಷಗಳ ಕಾಲ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಚಿರಂಜೀವಿ ಸರ್ಜಾ ಅವರು 2009ರಲ್ಲಿ ತೆರೆಕಂಡ ವಾಯುಪುತ್ರ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ನಂತರ ಭಿನ್ನ-ಭಿನ್ನ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದ್ದ ಚಿರು,  2020 ಜೂನ್ 7ರಂದು ಹೃದಯಾಘಾತದಿಂದ ತಮ್ಮ 39ನೇ ವಯಸ್ಸಿನಲ್ಲಿ ವಿಧಿವಶರಾದರು. 

ಸ್ಪಂದನಾ ವಿಜಯ್ ರಾಘವೇಂದ್ರ

ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಕೂಡ 2023ರ ಆಗಸ್ಟ್ 4ರಂದು ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇವರು 2007ರ ಆಗಸ್ಟ್ 26ರಂದು ವಿಜಯ್ ರಾಘವೇಂದ್ರ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಜೊತೆಗೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದ ಅವರು, ತಮ್ಮ ಪತಿ ನಟಿಸಿರುವ `ಕಿಸ್ಮತ್' ಚಿತ್ರವನ್ನು ನಿರ್ಮಾಣ ಮಾಡಿದ್ದರು. ಜೊತೆಗೆ 2016ರಲ್ಲಿ ತೆರೆಕಂಡ ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ಅಪೂರ್ವ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದರು.

ನಿತಿನ್ ಗೋಪಿ

ಸಾಹಸಸಿಂಹ ಡಾ.ವಿಷ್ಣುವರ್ಧನ್ ನಟನೆಯ 'ಹಲೋ ಡ್ಯಾಡಿ' ಸಿನಿಮಾದಲ್ಲಿ ಬಾಲನಟನಾಗಿ ಅಮೋಘವಾಗಿ ನಟಿಸಿದ್ದ ನಟ ನಿತಿನ್ ಗೋಪಿ ಕೂಡ 2023ರ ಜೂನ್ 2ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಬಾಲನಟರಾಗಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದ ಇವರು, ಶಾಲೆಗೆ ಈ ದಿನ ರಜಾ ಹಾಡಿನ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು. ಜೊತೆಗೆ ಕೆಲ ಧಾರಾವಾಹಿಗಳಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. 

ಲಕ್ಷ್ಮಣ್

300ಕ್ಕೂ ಅಧಿಕ ಸಿನಿಮಾಗಳಲ್ಲಿ ಖಳನಟರಾಗಿ ಅಭಿನಯಿಸಿದ್ದ ನಟ ಲಕ್ಷ್ಮಣ್ ಕೂಡ  2023ರ ಜನವರಿ 23ರಂದು ಮೂಡಲಪಾಳ್ಯದ ನಿವಾಸದಲ್ಲಿ ಹೃದಯಘಾತದಿಂದ ನಿಧನರಾಗಿದ್ದರು. 'ಉಷಾ ಸ್ವಯಂವರ' ಚಿತ್ರದ ಮೂವರು ನಾಯಕರಲ್ಲಿ ಒಬ್ಬರಾಗಿ ನಟಿಸುವ ಮೂಲಕ ಲಕ್ಷ್ಮಣ್ ಚಿತ್ರರಂಗ ಪ್ರವೇಶಿಸಿದರು. ಆದರೆ, ಆ ಸಿನಿಮಾ ರಿಲೀಸ್ ತಡವಾಗಿತ್ತು. ಮುಂದೆ ದೇಹದಾರ್ಢ್ಯ ನೋಡಿ ವಿಲನ್ ಪಾತ್ರಗಳಿಗೆ ಸೀಮಿತ ಮಾಡಿಬಿಟ್ಟಿದ್ದರು. ಅಂಬರೀಶ್ ನಟನೆಯ 'ಅಂತ' ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದರು. ಅಲ್ಲಿಂದ ಮುಂದೆ ಹಿಂತಿರುಗಿ ನೋಡಲಿಲ್ಲ. 'ಅಂತ' ಚಿತ್ರದ ಪೊಲೀಸ್ ಆಫೀಸರ್ ಕುಲವಂತ್ ಪಾತ್ರಕ್ಕೆ ಆಯ್ಕೆ ಆಗಿದ್ದರು. ಅಲ್ಲಿಂದ ಮುಂದೆ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದರು. 

 

ಮನ್​ದೀಪ್​ ರೈ

ನಟ ಮನ್‌ ದೀಪ್ ರಾಯ್ 2022ರ ಡಿಸೆಂಬರ್ ತಿಂಗಳಿನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದ ಅವರು ಜನವರಿ 29ರಂದು ಬಾರದ ಊರಿಗೆ ಪಯಣ ಬೆಳೆಸಿದ್ದರು. ಮಿಂಚಿನ ಓಟ ಚಿತ್ರದ ಮೂಲಕ ತನ್ನ ಸಿನಿಮಾ ಓಟವನ್ನು ಆರಂಭಿಸಿದ ಮನ್‌ ದೀಪ್ ರಾಯ್, ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತರಕ್ಷಕ, ಆಂಟಿ ಪ್ರೀತ್ಸೆ, ಪ್ರೀತ್ಸೋದ್ ತಪ್ಪಾ, ಓ ಪ್ರೇಮವೆ, ಸಂಕಷ್ಟಕರ ಗಣಪತಿ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು. 

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+