ಚಲನಚಿತ್ರಗಳ ಒಳನೋಟ
ರಿಷಭ್ ಶೆಟ್ಟಿ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ, ನಟ ಮತ್ತು ನಿರ್ಮಾಪಕ. ತಮ್ಮ ವಿಭಿನ್ನ ಚಿತ್ರಗಳು ಮತ್ತು ಭಿನ್ನ ಚಿತ್ರ ನಿರ್ಮಾಣ ಶೈಲಿಯಿಂದ ಪ್ರಸಿದ್ಧರಾಗಿದ್ದಾರೆ. ಸದ್ಯ ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ 'ಕಾಂತಾರ' ಬಿಡುಗಡೆಯಾಗಿದೆ. ಚಿತ್ರದಲ್ಲಿ ಮಾನವ ಮತ್ತು ಪರಿಸರದ ನಡುವಿನ ಹೋರಾಟವಿದ್ದು, ಕರಾವಳಿಯ ಆಚರಣೆ ಮತ್ತು ಸಂಸ್ಕೃತಿಯನ್ನು ತುಂಬಾ ಅಚ್ಚುಕಟ್ಟಾಗಿ ತೆರೆಯ ಮೇಲೆ ತರಲಾಗಿದೆ. ಕರಾವಳಿ ಆಚರಣೆ ಕುರಿತು ತಿಳಿದುಕೊಂಡಿರುವವರು ಹಾಗೂ ಇದರ ಅರಿವೇ ಇಲ್ಲದವರು ಇಬ್ಬರೂ ಸಹ ಚಿತ್ರವನ್ನ ಮೆಚ್ಚಿಕೊಂಡಿದ್ದಾರೆ. ಅದರಲ್ಲಿಯೂ ಚಿತ್ರದ ಕೊನೆಯ ಇಪ್ಪತ್ತು ನಿಮಿಷಗಳಲ್ಲಿ ರಿಷಬ್ ಶೆಟ್ಟಿ ಅವರ ಅಭಿನಯಕ್ಕೆ ಸಿನಿರಸಿಕರು ಮಾರುಹೋಗಿದ್ದಾರೆ. ರಿಷಬ್ ಶೆಟ್ಟಿ ಅವರ ಮುಂಬರುವ ಸಿನಿಮಾಗಳ ಪಟ್ಟಿ ಇಲ್ಲಿದೆ.