X
ಹೋಮ್ ಚಲನಚಿತ್ರಗಳ ಒಳನೋಟ

ನಟ, ನಿರ್ದೇಶಕರಾಗಿ ಸಕ್ಸಸ್ ಆದ ರಿಷಬ್, ರಕ್ಷಿತ್ ಮತ್ತು ರಾಜ್ ಬಿ ಶೆಟ್ಟಿ: ಇಲ್ಲಿವೆ ಇಂಟೆರೆಸ್ಟಿಂಗ್ ವಿಷಯಗಳು

Author Sowmya Bairappa | Published: Wednesday, October 19, 2022, 05:13 PM [IST]

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ, ನಟರಾಗಿರುವ ರಿಷಬ್, ರಕ್ಷಿತ್ ಮತ್ತು ರಾಜ್ ಬಿ ಶೆಟ್ಟಿ ಕರಾವಳಿಯ ಅಪ್ಪಟ ಪ್ರತಿಭೆಗಳು. ತಮ್ಮ ವಿಶಿಷ್ಟ ಸಿನಿಮಾ ಹಾಗೂ ನಟನೆಯಿಂದ ಗುರುತಿಸಿಕೊಂಡಿದ್ದಾರೆ. ಈ ಮೂವರಿಗೂ ಯಾವುದೇ ಸಿನಿಮಾ ಬ್ಯಾಗ್ರೌಂಡ್ ಇಲ್ಲ. ಆದರೂ ಕೂಡ ತಮ್ಮ ಪ್ರತಿಭೆಯಿಂದಲೇ ಇಂದು ಉನ್ನತ ಸ್ಥಾನಕ್ಕೆ ಬಂದಿದ್ದಾರೆ. ಇವರು ಕನ್ನಡ ಚಿತ್ರರಂಗದ ತ್ರಿಬಲ್ ಆರ್ ಸ್ಟಾರ್‌ಗಳಾಗಿ ಬೆಳೆದಿದ್ದಾರೆ. ನೈಜತೆ, ಸೃಜನಶೀಲತೆಯೊಂದಿಗೆ ನಮ್ಮ ಕಣ್ಣ ಮುಂದೆ ನಡೆಯುವ ದಿನ ನಿತ್ಯದ ಘಟನೆಗಳೇ ಇವರ ಸಿನಿಮಾ ಕಥೆಯ ಜೀವಾಳ. ನಮ್ಮ ನೆಲದ ಸಂಸ್ಕತಿ, ಆಚಾರ ವಿಚಾರಗಳನ್ನು ತೆಗೆದುಕೊಂಡು ಸಿನಿಮಾ ಮಾಡಿ ಯಶಸ್ವಿಯಾಗಿದ್ದಾರೆ. ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ ಅವರ ಯಶಸ್ಸಿಗೆ ಅವರ ಅಭಿನಯ ಮತ್ತು ಚಿತ್ರದ ಮೇಕಿಂಗ್, ಚಿತ್ರಕಥೆಯೇ ಪ್ರಮುಖ ಕಾರಣ. 2022ರಲ್ಲಿ ತೆರೆಕಂಡ ಇವರ 777 ಚಾರ್ಲಿ, ಗರುಡ ಗಮನ ವೃಷಭ ವಾಹನ, ಕಾಂತಾರ ಸಿನಿಮಾಗಳು ಸಾಕಷ್ಟು ಹೆಸರು ಮಾಡುತ್ತಿವೆ. ಈ ಮೂವರು ನಟರ ಕುರಿತ ಇಂಟರೆಸ್ಟಿಂಗ್ ವಿಷಯಗಳು ಇಲ್ಲಿವೆ.


cover image
ರಿ‍ಷಭ್ ಶೆಟ್ಟಿ
1

ರಿ‍ಷಭ್ ಶೆಟ್ಟಿ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ, ನಟ ಮತ್ತು ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇವರ ಪ್ರತಿ ಸಿನಿಮಾದಲ್ಲೂ ಒಂದೂ ವಿಶೇಷತೆ ಇದ್ದೆ ಇರುತ್ತದೆ. ರಕ್ಷಿತ್ ಶೆಟ್ಟಿ ಅಭಿನಯದ ರಿಕ್ಕಿ ಚಿತ್ರದಿಂದ ಸಿನಿಮಾ ನಿರ್ದೇಶನಕ್ಕೆ ಇಳಿದರು. ಆದರೆ, ಈ ಸಿನಿಮಾ ಅಷ್ಟೇನೂ ಯಶಸ್ಸು ಕಾಣಲಿಲ್ಲ. ಇದಾದ ಬಳಿಕ ಕಿರಿಕ್ ಪಾರ್ಟಿ ಸಿನಿಮಾವನ್ನು ನಿರ್ದೇಶನ ಮಾಡಿದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಸಾಕಷ್ಟು ಯಶಸ್ಸು ತಂದು ಕೊಟ್ಟಿತು. ಇದಾದ ಬಳಿಕ  ಕೇರಳದ ಕಾಸರಗೋಡುವಿನಲ್ಲಿ ಕನ್ನಡ ಶಾಲೆಗಳ ಪರಿಸ್ಥಿತಿ ಕುರಿತು ಇವರು ನಿರ್ದೇಶಿಸಿದ ಚಿತ್ರ `ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರ ಪ್ರೇಕ್ಷಕ ಮತ್ತು ವಿಮರ್ಶಕರಿಂದ ವ್ಯಾಪಕ ಮನ್ನಣೆ ಪಡೆಯಿತು. ಈ ಸಿನಿಮಾಗೆ ಅತ್ಯುತ್ತಮ ಮಕ್ಕಳ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ನಂತರ ಬೆಲ್ ಬಾಟಮ್ ಸಿನಿಮಾ ಮೂಲಕ ನಾಯಕನಾಗಿಯೂ ಯಶಸ್ಸು ಗಳಿಸಿದರು.  ಇದೀಗ ಕಾಂತಾರಾ ಸಿನಿಮಾ ಮೂಲಕ ರಿಷಬ್ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯುತ್ತಿರುವ ಕಾಂತಾರದಲ್ಲಿ ಪ್ರಶಸ್ತಿಗೆ ಅರ್ಹರು ಎಂಬಷ್ಟು ಚೆನ್ನಾಗಿ ರಿಷಬ್ ಅಭಿನಯಿಸಿದ್ದಾರೆ. 

ರಾಜ್ ಬಿ ಶೆಟ್ಟಿ
2

ಕನ್ನಡದ ಪ್ರತಿಭಾನ್ವಿತ ನಟ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ರಾಜ್ ಬಿ ಶೆಟ್ಟಿ  2017ರಲ್ಲಿ ತೆರೆಕಂಡ `ಒಂದು ಮೊಟ್ಟೆಯ ಕಥೆ' ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟರು. ಇದಾದ ಬಳಿಕ ಕಥಾಸಂಗಮ, ಮಾಯಾಬಜಾರ್ ಸಿನಿಮಾಗಳನ್ನು ಮಾಡಿದರು. ಆದರೆ, ೨೦೨೨ರಲ್ಲಿ ತೆರೆಕಂಡ ಗರುಡ ಗಮನ ವೃಷಭ ವಾಹನ ಸಿನಿಮಾ ಅವರಿಗೆ ಸಾಕಷ್ಟು ಯಶಸ್ಸು ತಂದು ಕೊಟ್ಟಿತು.  ಹೀಗೂ ರೌಡಿಸಂ ಸಿನಿಮಾ ಮಾಡಬಹುದು ಎಂಬುದನ್ನು ಗರುಡ ಗಮನ ವೃಷಭ ವಾಹನ ಸಿನಿಮಾ ಮೂಲಕ  ರಾಜ್​ ಬಿ ಶೆಟ್ಟಿ ತೋರಿಸಿಕೊಟ್ಟಿದ್ದರು. ಈ ಸಿನಿಮಾದಲ್ಲಿ ರಿಷಬ್ ಹಾಗೂ ರಾಜ್ ಇಬ್ಬರೂ ಕೂಡ ಜಿದ್ದಿಗೆ ಬಿದ್ದವರಂತೆ ನಟಿಸಿದ್ದಾರೆ. ಈ ಸಿನಿಮಾಗೆ ರಾಜ್ಯದ ಮೂಲೆ ಮೂಲೆಯಿಂದ ಅಭೂತಪೂರ್ವ  ಪ್ರತಿಕ್ರಿಯೆ ವ್ಯಕ್ತವಾಗಿತ್ತು. 

ರಕ್ಷಿತ್ ಶೆಟ್ಟಿ
3

ರಕ್ಷಿತ್ ಶೆಟ್ಟಿ 2010ರಲ್ಲಿ ತೆರೆಕಂಡ `ನಮ್ ಏರಿಯಾದಲ್ಲೊಂದು ದಿನ' ಚಿತ್ರದ ಮೂಲಕ ಸಿನಿಪ್ರವೇಶ ಮಾಡಿದರು. ಆದರೆ, ರಕ್ಷಿತ್ ಗೆ ಬ್ರೇಕ್ ನೀಡಿದ ಚಿತ್ರ ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ. ಕಡಿಮೆ ಬಜೆಟ್ಟಿನಲ್ಲಿ ಉತ್ತಮ ಕತೆಯೊಂದಿಗೆ ತಯಾರಾದ ಈ ಚಿತ್ರ ರಕ್ಷಿತ್ ಸಿನಿಜೀವನಕ್ಕೆ ಉತ್ತಮ ಅಡಿಪಾಯ ಹಾಕಿತು. ನಂತರ ಇವರು `ಉಳಿದವರು ಕಂಡಂತೆ ಚಿತ್ರದ ಮೂಲಕ ನಿರ್ದೇಶಕರಾದರು. ಅದುವರೆಗೆ ಕೇವಲ ಎಂಡು ಚಿತ್ರಗಳಲ್ಲಿ ನಟಿಸಿದ್ದರೂ ತಮ್ಮ ವಿಶಿಷ್ಟ ಚಿತ್ರಗಳ ಮೂಲಕ ರಕ್ಷಿತ್ ಕನ್ನಡದ ಭರವಸೆಯ ನಟ ಮತ್ತು ನಿರ್ದೇಶಕರಾಗಿ ಹೊರಹೊಮ್ಮಿದ್ದರು. ರಕ್ಷಿತ್ ಶೆಟ್ಟಿ ಕಿರಿಕ್ ಪಾರ್ಟಿ, `ಹಂಬಲ್ ಪೊಲಿಟಿಶನ್ ನೊಗರಾಜ್', 777 ಚಾರ್ಲಿ ಚಿತ್ರಗಳನ್ನು ನಿರ್ಮಿಸಿದ್ದಾರೆ. ಇತ್ತೀಚಿಗೆ ತೆರೆಕಂಡ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ ಉತ್ತಮ ಯಶಸ್ಸು ಗಳಿಸಿದೆ. ಈ ಮೂವರು ನಟರು ಕೂಡ ತಮ್ಮ ಸಿನಿಮಾ ಮೂಲಕ ನಮ್ಮ ನೆಲದ ಸಂಸ್ಕೃತಿಯನ್ನು ಎತ್ತಿ ಹಿಡಿಯುವಂತಹ ಕೆಲಸ ಮಾಡುತ್ತಿದ್ದಾರೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+