X
ಹೋಮ್ ಚಲನಚಿತ್ರಗಳ ಒಳನೋಟ

ಸ್ವಾತಂತ್ರ್ಯ ದಿನದಂದು ಬರ್ತಡೇ ಆಚರಿಸಿಕೊಳ್ಳುತ್ತಿರುವ ಸ್ಯಾಂಡಲ್‌ವುಡ್‌ ಕಲಾವಿದರಿವರು!

Author Sowmya Bairappa | Updated: Wednesday, August 14, 2024, 06:16 PM [IST]

ಆಗಸ್ಟ್ 15ರಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಇಡೀ ದೇಶ ಸಜ್ಜಾಗುತ್ತಿದೆ. ಈ ವಿಶೇಷ ದಿನದಂದು ವಿವಿಧ ಕ್ಷೇತ್ರಗಳ ಸಾಧಕರು ಕೂಡ ತಮ್ಮ-ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಸ್ಯಾಂಡಲ್‌ವುಡ್‌ನ ಕಲಾವಿದರು ಕೂಡ ಗುರುವಾರದಂದು ತಮ್ಮ ಬರ್ತಡೇ ಆಚರರಿಸಿಕೊಳ್ಳುತ್ತಿದ್ದಾರೆ. ಆ ನಟರು ಯಾರು ಎಂಬ ಮಾಹಿತಿ ಇಲ್ಲಿದೆ.


cover image
ಸಂತೋಷ್ ಆನಂದರಾಮ್

ಸ್ಯಾಂಡಲ್‌ವುಡ್‌ನ ಸ್ಟಾರ್ ನಿರ್ದೇಶಕ ಸಂತೋಷ್ ಆನಂದ್ ರಾಮ್ ಆಗಸ್ಟ್ ೧೫ರಂದು ತಮ್ಮ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಇನ್ಫೋಸಿಸ್‌ನಲ್ಲಿ ಸುಮಾರು ಒಂದು ವರ್ಷ ಕೆಲಸ ಮಾಡಿದ ಇವರು, ನಂತರ ಉದ್ಯೋಗ ತೊರೆದು ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ಇವರ ನಿರ್ದೇಶನದ ಮೊದಲ ಸಿನಿಮಾ Mr & Mrs ರಾಮಾಚಾರಿ. ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ನಟನೆಯ ಈ ಚಿತ್ರ 50 ಕೋಟಿಗೂ ಅಧಿಕ ಗಳಿಕೆ ಕಂಡು ಶತದಿನೋತ್ಸವ ಆಚರಿಸಿತು. ನಂತರ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ `ರಾಜಕುಮಾರ' ಚಿತ್ರವನ್ನು ನಿರ್ದೇಶಿಸಿದರು. ಈ ಸಿನಿಮಾದ ಮೂಲಕ ತನ್ನ ಇಂಡಸ್ಟ್ರಿ ಹಿಟ್ ದಾಖಲೆಯನ್ನು ತಾನೇ ಮುರಿದು ಇಂಡಸ್ಟ್ರಿ ಹಿಟ್ ನಿರ್ದೇಶಕ ಎನಿಸಿಕೊಂಡರು.

 

ಭಾರತಿ ವಿಷ್ಣುವರ್ಧನ್

ಕನ್ನಡ ಚಿತ್ರರಂಗದಲ್ಲಿ ನೂರಕ್ಕೂ ಹೆಚ್ಚು ಸಿನಿಮಾಗಳು ಸೇರಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನ ಅನೇಕ ಸಿನಿಮಾಗಳಲ್ಲಿ ನಟಿಸಿರುವ ಭಾರತಿ ವಿಷ್ಣುವರ್ಧನ್ ಕೂಡ ಇದೇ ದಿನ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಭಾರತಿ ವಿಷ್ಣುವರ್ಧನ್ ಅಭಿನಯದ ಮೊದಲ ಸಿನಿಮಾ ಲವ್ ಇನ್ ಬೆಂಗಳೂರು. ಆದರೆ, ಬಿ.ಆರ್.ಪಂತುಲು ನಿರ್ದೇಶನದ ದುಡ್ಡೇ ದೊಡ್ಡಪ್ಪ ಇವರ ಬಿಡುಗಡೆಗೊಂಡ ಮೊದಲ ಚಿತ್ರ. ಕನ್ನಡದಲ್ಲಿ ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ವಿಷ್ಣುವರ್ಧನ್, ಅನಂತನಾಗ್, ರಾಜೇಶ್; ಹಿಂದಿಯಲ್ಲಿ ದಿಲೀಪ್ ಕುಮಾರ್, ಮನೋಜ್ ಕುಮಾರ್, ವಿನೋದ್ ಖನ್ನ, ರಾಕೇಶ್ ರೋಶನ್, ಮೆಹಮೂದ್, ತೆಲುಗಿನಲ್ಲಿ ಅಕ್ಕಿನೇನಿ ನಾಗೇಶ್ವರ್ ರಾವ್, ಎನ್. ಟಿ. ಆರ್, ಕೃಷ್ಣ, ಶೋಬನ್ ಬಾಬು, ಕೃಷ್ಣಂ ರಾಜು, ಕಾಂತಾರಾವ್ ,  ತಮಿಳಿನಲ್ಲಿ ಎಂ. ಜಿ. ಆರ್, ಶಿವಾಜಿ ಗಣೀಶನ್, ಜೆಮಿನಿ ಗಣೀಶನ್, ಮುತ್ತುರಾಮನ್, ಜೈಶಂಕರ್, ರವಿಚಂದ್ರನ್, ಎ.ವಿ.ಎಮ್. ರಾಜನ್ ಮುಂತಾದ ನಟರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ರಾಘವೇಂದ್ರ ರಾಜ್ ಕುಮಾರ್

ಡಾ. ರಾಜ್-ಪಾರ್ವತಮ್ಮ ದಂಪತಿಯ ಎರಡನೇ ಪುತ್ರನಾಗಿ ಜನಿಸಿದ ರಾಘವೇಂದ್ರ ರಾಜ್‌ಕುಮಾರ್ ಕೆಲವೇ ಚಿತ್ರಗಳಲ್ಲಿ ನಟಿಸಿದ್ದರೂ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದಾರೆ. ಇವರು ನಾಯಕನಾಗಿ ಯಶಸ್ಸಿನ ಅಲೆಯಿಲ್ಲಿದ್ದಾಗಲೇ ತಮ್ಮ ಹೋಮ್ ಬ್ಯಾನರ್ ವಜ್ರೇಶ್ವರಿ ಕಂಬೈನ್ಸ್ ನಿರ್ವಹಣೆಯಲ್ಲಿ ತಾಯಿಗೆ ಸಹಾಯ ಮಾಡಲು ನಟನೆಯಿಂದ ನಿಧಾನವಾಗಿ ದೂರವಾದರು. ಸದ್ಯ ಫೋಷಕ ಪಾತ್ರಗಳಲ್ಲಿ ನಟಿಸುತ್ತಿರುವ ದೊಡ್ಮನೆಯ ನ ಸಹ ಸ್ವಾತಂತ್ರ ದಿನಾಚರಣೆಯ ದಿನದಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.

ಅರ್ಜುನ್ ಸರ್ಜಾ

ಕನ್ನಡ ಚಿತ್ರರಂಗದಲ್ಲಿ ಬಾಲನಟ, ನಾಯಕ ನಟರಾಗಿ ಪಾತ್ರ ನಿರ್ವಹಿಸಿದ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ, ನಂತರ ತಮಿಳು ಚಿತ್ರರಂಗದಲ್ಲಿ ಚಿತ್ರರಂಗದಲ್ಲಿ ಹೆಚ್ಚು ಅವಕಾಶಗಳು ಸಿಕ್ಕ ಕಾರಣ ಅಲ್ಲಿಯೇ ಸಕ್ರಿಯರಾದರು.  1981ರಲ್ಲಿ ತೆರೆಕಂಡ 'ಸಿಂಹದ ಮರಿ ಸೈನ್ಯ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಇವರು, ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ. ನಂತರ ತಮಿಳು ಚಿತ್ರರಂಗದಲ್ಲಿ ಸಕ್ರಿಯರಾದ ಇವರು, ಜನಪ್ರಿಯ ನಾಯಕ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.  ಇವರ ಪುತ್ರಿ ಐಶ್ವರ್ಯ ಅವರನ್ನು `ಪ್ರೇಮಬರಹ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. 

ನಾಗತಿಹಳ್ಳಿ ಚಂದ್ರಶೇಖರ್

ಕನ್ನಡದ ಮೇಷ್ಟ್ರು ಎಂದೇ ಖ್ಯಾತಿಯನ್ನು ಪಡೆದಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಹ ಸ್ವಾತಂತ್ರ ದಿನಾಚರಣೆಯಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಮೆರಿಕಾ ಅಮೆರಿಕಾ, ಅಮೃತಧಾರೆ, ಬಾ ನಲ್ಲೆ ಮಧುಚಂದ್ರಕೆ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಾಗತಿಹಳ್ಳಿ ಚಂದ್ರಶೇಖರ್ ಕೊನೆಯದಾಗಿ 2020ರಲ್ಲಿ ಬಿಡುಗಡೆಗೊಂಡಿದ್ದ 'ಇಂಡಿಯಾ vs ಇಂಗ್ಲೆಂಡ್' ಎಂಬ ಚಿತ್ರವನ್ನು ನಿರ್ದೇಶಿಸಿದ್ದರು.  

 

 

ಸುಹಾಸಿನಿ ಮಣಿರತ್ನಂ

ನಟಿ ಸುಹಾಸಿನಿ ಮಣಿರತ್ನಂ ಅವರು ತಮಿಳುನಾಡಿನಲ್ಲಿ ಹುಟ್ಟಿದರೂ ಕೂಡ ಕನ್ನಡದವರೇ ಎನ್ನುವಷ್ಟು ಹತ್ತಿರದವರು. 15 ಆಗಸ್ಟ್ 1961 ರಲ್ಲಿ ಅಂದಿನ ಮದ್ರಾಸಿನ ಪರಮಕುಡಿಯಲ್ಲಿ ಜನಿಸಿದರು. ಸುಹಾಸಿನಿ ತಮಿಳು ಚಿತ್ರದ ಮೂಲಕ ವೃತ್ತಿ ಜೀವನ ಆರಂಭಿಸಿದರು ಕನ್ನಡದಲ್ಲಿ ಸೂಪರ್ ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಬಂಧನ, ಮುತ್ತಿನ ಹಾರ, ಅಮೃತವರ್ಷಿಣಿ, ಬೆಂಕಿಯಲ್ಲಿ ಅರಳಿದ ಹೂವು ಸೇರಿದಂತೆ ಹಲವು ಚಿತ್ರಗಳಲ್ಲಿ ಮೋಡಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+