X
ಹೋಮ್ ಚಲನಚಿತ್ರಗಳ ಒಳನೋಟ

ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಸ್ಯಾಂಡಲ್‌ವುಡ್‌ನಿಂದ ದೂರವಾದ ನಟ-ನಟಿಯರಿವರು!

Author Sowmya Bairappa | Updated: Monday, February 3, 2025, 09:53 AM [IST]

ಒಂದು ಕಾಲದಲ್ಲಿ ಕನ್ನಡ ಸಿನಿಮಾರಂಗದಲ್ಲಿ ಮಿಂಚಿ ಮರೆಯಾದವರು ಹಲವರಿದ್ದಾರೆ. ಆದರೆ, ಕೆಲವರು ಬಾಲ ಕಲಾವಿದರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು, ನಂತರದಲ್ಲಿ ಲೀಡ್‌ ರೋಲ್‌ನಲ್ಲಿ ನಟಿಸಿ ಈಗಲೂ ಫೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇನ್ನು ಕೆಲವರು ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಬಣ್ಣದ ಲೋಕಕ್ಕೆ ವಿದಾಯ ಹೇಳಿದ್ದಾರೆ. ಅಂತಹ ನಟ-ನಟಿಯರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.


cover image
ಪ್ರೇಮಾ
1

ಸವ್ಯಸಾಚಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ಪ್ರೇಮಾ, ಒಂದು ಕಾಲದಲ್ಲಿ ಕನ್ನಡದ ಸ್ಟಾರ್ ನಟಿಯಾಗಿದ್ದರು. ಶಿವರಾಜ್‌ಕುಮಾರ್ ನಟನೆಯ 'ಓಂ' ಚಿತ್ರದಿಂದ ಬಿಗ್ ಬ್ರೇಕ್ ಪಡೆದ ಇವರು, ನಂತರ ತೆಲುಗು ಹಾಗೂ ಮಲಯಾಳಂ ಸಿನಿಮಾಗಳಲ್ಲೂ ನಟಿಸಿದರು. 2006ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಾ, ತಮ್ಮ ಸಿನಿಜೀವನಕ್ಕೆ ತಾತ್ಕಾಲಿಕ ವಿದಾಯ ಹೇಳಿದರು. ಬಳಿಕ 2009ರಲ್ಲಿ ಶಿಶಿರ ಎಂಬ ಚಿತ್ರದಲ್ಲಿ ನಟಿಸಿದ ಇವರು, 2017ರಲ್ಲಿ ಉಪೇಂದ್ರ ಮತ್ತೆ ಬಾ ಚಿತ್ರದಲ್ಲಿ ಅಭಿನಯಿಸಿದರು. ಸುಮಾರು 70ಕ್ಕೂ ಹೆಚ್ಚು ಕನ್ನಡ ಮತ್ತು 28 ತೆಲುಗು ಚಿತ್ರಗಳಲ್ಲಿ ನಟಿಸಿರುವ ಪ್ರೇಮಾ, ಸದ್ಯ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ. ಆದರೆ, ಇತ್ತೀಚೆಗೆ ರಿಯಾಲಿಟಿ ಶೋ ಜಡ್ಜ್ ಆಗಿ ಕಾಣಿಸಿಕೊಂಡಿದ್ದರು.

ಕುಮಾರ್ ಬಂಗಾರಪ್ಪ
2

ಪ್ರಸ್ತುತ ರಾಜಕೀಯದಲ್ಲಿ ಸಕ್ರಿಯವಾಗಿರುವ ಕುಮಾರ್ ಬಂಗಾರಪ್ಪ ಕೂಡ ಒಂದು ಕಾಲದಲ್ಲಿ ಸಿನಿಮಾರಂಗದಲ್ಲಿ ಮಿಂಚಿದ್ದವರು. ತೆಲುಗು ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಇವರು,  ನಂತರ 'ಶರವೇಗದ ಸರದಾರ' ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಬಳಿಕ ಅಶ್ವಮೇಧ, ತೇಜ, ಪುರುಷೋತ್ತಮ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ ಕುಮಾರ್ ಬಂಗಾರಪ್ಪ, ಚಿತ್ರರಂಗದಲ್ಲಿ ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ರಾಜಕೀಯಕ್ಕೆ ಎಂಟ್ರಿಕೊಡುವ ಪರಿಸ್ಥಿತಿ ಆರಂಭವಾಯಿತು. ಹೀಗಾಗಿ, ಸಿನಿಮಾ ಬಿಟ್ಟು ರಾಜಕೀಯದಲ್ಲೇ ಮುಂದುವರೆದರು.

ವಿನೋದ್ ರಾಜ್
3

ಡ್ಯಾನ್ಸ್ ರಾಜ ಡ್ಯಾನ್ಸ್ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ವಿನೋದ್ ರಾಜ್, ಈ ಸಿನಿಮಾದಲ್ಲಿ ಅವರ ಡ್ಯಾನ್ಸಿಂಗ್ ಸ್ಟೈಲ್‌ನಿಂದ ಸ್ಟಾರ್ ಪಟ್ಟಕ್ಕೇರಿದರು. ನಂತರ ಕೃಷ್ಣ ನೀ ಕುಣಿದಾಗ, ನಂಜುಂಡ, ಸ್ನೇಹಲೋಕ, ಮಹಾಭಾರತ ಹೀಗೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದರು. ಈ ಸಿನಿಮಾಗಳು ನಿರೀಕ್ಷಿಸಿದಷ್ಟು ಸಕ್ಸಸ್ ಕಾಣಲಿಲ್ಲ. 2009ರಲ್ಲಿ ತೆರೆಕಂಡ ಯಾರದು ಚಿತ್ರದ ಬಳಿಕ ಅವರು ನಟನೆಗೆ ವಿದಾಯ ಹೇಳಿದ್ದಾರೆ.   

ಅಮೂಲ್ಯ
4

ಗೋಲ್ಡನ್ ಕ್ವೀನ್ ಅಮೂಲ್ಯ ಚಿಕ್ಕವಯಸ್ಸಿನಲ್ಲೇ ಬಣ್ಣದ ಲೋಕಕ್ಕೆ ಕಾಲಿಟ್ಟರು. ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ಬಾಲನಟಿಯಾಗಿ ನಟಿಸಿ ಪ್ರಸಿದ್ಧಿ ಪಡೆದ ಇವರು, 2007ರಲ್ಲಿ 'ಚೆಲುವಿನ ಚಿತ್ತಾರ' ಚಿತ್ರದ ಮೂಲಕ ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟರು. ಈ ಚಿತ್ರ ಅಭೂತಪೂರ್ವ ಯಶಸ್ಸು ಕಂಡ ಹಿನ್ನಲೆಯಲ್ಲಿ ಅಮೂಲ್ಯ ಅವರ ಸಿನಿಮಾ ಜೀವನ ಬದಲಾಯಿತು. ಚೆಲುವಿನ ಚಿತ್ತಾರ ಸಿನಿಮಾ ಯಶಸ್ವಿ ನಂತರ ಇವರಿಗೆ ಹಲವು ಚಿತ್ರಗಳಲ್ಲಿ ನಟಿಸಲು ಅವಕಾಶಗಳು ದೊರೆತವು. ನಂತರ ಚೈತ್ರದ ಚಂದ್ರಮ, ಶ್ರಾವಣಿ ಸುಬ್ರಮಣ್ಯಂ, ಗಜಕೇಸರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ ಅಮೂಲ್ಯ, 2017ರಲ್ಲಿ ಉದ್ಯಮಿ ಜಗದೀಶ್‌ ಆರ್ ಚಂದ್ರ ಅವರನ್ನು ವಿವಾಹವಾದರು. ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದಿದ್ದಾರೆ.

ಮಾಧವಿ
5

ವರನಟ ಡಾ.ರಾಜ್‌ಕುಮಾರ್, ವಿಷ್ಣುವರ್ಧನ್, ಅನಂತ್ ನಾಗ್, ಅಂಬರೀಶ್ ಸೇರಿದಂತೆ ಕನ್ನಡ ಚಿತ್ರರಂಗದ ಸ್ಟಾರ್ ನಟರ ಜೊತೆ ಅಭಿನಯಿಸಿದ್ದ ನಟಿ ಮಾಧವಿ, 1976 ರಿಂದ 1996ರ ವರೆಗಿನ ತಮ್ಮ ಎರಡು ದಶಕಗಳ ಸಿನಜೀವನದಲ್ಲಿ ಸುಮಾರು ಮುನ್ನೂರಕ್ಕು ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಹಾಲು ಜೇನು, ಚಾಣಕ್ಯ, ಗೆದ್ದಮಗ, ಅನುರಾಗ ಅರಳಿತು', ಜೀವನ ಚೈತ್ರ, ಆಕಸ್ಮಿಕ, ಒಡಹುಟ್ಟಿದವರು ಮುಂತಾದ ಚಿತ್ರಗಳಲ್ಲಿ ನಟಿಸಿ ನಿಪ್ರೇಮಿಗಳ ಮನಸ್ಸು ಗೆದ್ದಿರುವ ಈ ನಟಿ, 1996ರಲ್ಲಿ ತಮ್ಮ ಆಧ್ಯಾತ್ಮಿಕ ಗುರುಗಳಾದ ಸ್ವಾಮಿ ರಾಮ್‌ ಅವರ ಅಮೆರಿಕನ್ ಶಿಷ್ಯರಾದ ರಾಲ್ಫ್ ಶರ್ಮಾರನ್ನು ಮದುವೆಯಾದರು. ವಿವಾಹವಾಧ ಬಳಿಕ ನಟನೆಯಿಂದ ದೂರ ಉಳಿದ ಈ ನಟಿ, ಪತಿಯೊಂದಿಗೆ ಅಮೆರಿಕಾದಲ್ಲಿ ನೆಲಸಿದರು.

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+