X
ಹೋಮ್ ಚಲನಚಿತ್ರಗಳ ಒಳನೋಟ

ಈ ವಾರ ಥಿಯೇಟರ್‌ನಲ್ಲಿ ಬಿಡುಗಡೆಯಾಗುತ್ತಿರುವ ಟಾಪ್ 5 ಬಿಗ್‌ ಬಜೆಟ್ ಸಿನಿಮಾಗಳಿವು!

Author Sowmya Bairappa | Updated: Friday, March 28, 2025, 06:10 AM [IST]

ಪ್ರತಿ ವಾರ ಹೊಸ-ಹೊಸ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತವೆ. ಅಂತೆಯೇ ಈ ವಾರ ಮೂರು ಸೂಪರ್ ಸ್ಟಾರ್‌ಗಳ ಸಿನಿಮಾಗಳ ಥಿಯೇಟರ್‌ಗೆ ಲಗ್ಗೆಯಿಡುತ್ತಿವೆ. ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಸ್ಟಾರ್ ನಟರ ಚಿತ್ರಗಳು ರಿಲೀಸ್ ಆಗುತ್ತಿದ್ದರೆ, ಕನ್ನಡದಲ್ಲಿ ಹೊಸ ಕಲಾವಿದರ ಸಿನಿಮಾವೊಂದು ಬಿಡುಗಡೆಯಾಗುತ್ತಿದೆ. ಇಲ್ಲಿ ಈ ವಾರ ರಿಲೀಸ್ ಆಗುತ್ತಿರುವ ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.


cover image
ಎಲ್ 2: ಎಂಪೂರನ್
1

ಮೋಹನ್ ಲಾಲ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರ ಮೆಗಾ ಪ್ರಾಜೆಕ್ಟ್ ಎಲ್ 2: ಎಂಪೂರನ್ ಇಂದು (ಮಾರ್ಚ್ 27) ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಇದು 2019ರಲ್ಲಿ ಬಿಡುಗಡೆಯಾದ ಬ್ಲಾಕ್ ಬಸ್ಟರ್ ಲೂಸಿಫರ್‌ನ ಮುಂದುವರೆದ ಭಾಗವಾಗಿದೆ. ಮಲಯಾಳಂ ಚಿತ್ರರಂಗದಲ್ಲಿ ಇದೊಂದು ಬಹುನಿರೀಕ್ಷಿತ ಸಿನಿಮಾ. ಬೃಹತ್ ಪ್ರಮಾಣದಲ್ಲಿ ತಯಾರಾಗಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿದೆ.

ವೀರ ಧೀರ ಸೂರನ್
2

ಕಾಲಿವುಡ್ ಜನಪ್ರಿಯ ನಟ ವಿಕ್ರಮ್ ಅಭಿನಯದ 'ವೀರ ಧೀರ ಸೂರನ್' ಭಾಗ 2 ಕೂಡ ಇಂದು (ಮಾರ್ಚ್ 27) ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಎಸ್.ಯು ಅರುಣ್ ಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ದುಷಾರಾ ವಿಜಯನ್, ಎಸ್‌ಜಿ ಸೂರ್ಯ, ಸೂರಜ್ ವೆಂಜಾರಮುಡು ಸೇರಿದಂತೆ ಹಲವರು ನಟಿಸಿದ್ದಾರೆ. ಈ ಸಿನಿಮಾ ಕೂಡ ತೆಲುಗು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ರಿಲೀಸ್ ಆಗಿದೆ.

ಸಿಕಂದರ್
3

ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ 'ಸಿಕಂದರ್' ಸಿನಿಮಾ ಈದ್ ಹಬ್ಬದ ಪ್ರಯುಕ್ತ ಮಾರ್ಚ್ 30ರಂದು ಬಿಡುಗಡೆ ಆಗಲಿದೆ. ಎ.ಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸಲ್ಮಾನ್ ಖಾನ್ ಈ ಬಾರಿ ದಕ್ಷಿಣದ ನಿರ್ದೇಶಕರ ಜೊತೆ ಕೈಜೋಡಿಸಿದ್ದು,  ಕನ್ನಡದ ನಟ ಕಿಶೋರ್ ಕೂಡ ಸಿಕಂದರ್‌ನಲ್ಲಿ ಪೊಲೀಸ್ ಅಧಿಕಾರಿಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಬಿನ್ ಹುಡ್
4

ಟಾಲಿವುಡ್ ನಟ ನಿತಿನ್ ಹಾಗೂ ಕನ್ನಡದ ನಟಿ ಶ್ರೀಲೀಲಾ ಅಭಿನಯದ 'ರಾಬಿನ್ ಹುಡ್' ಸಿನಿಮಾ ನಾಳೆ ಅಂದರೆ ಮಾರ್ಚ್ 28ರಂದು ಬಿಡುಗಡೆ ಆಗುತ್ತಿದೆ. ವೆಂಕಿ ಕುಡುಮುಲ ನಿರ್ದೇಶನದ ಈ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ಅದ್ಧೂರಿಯಾಗಿ ನಿರ್ಮಾಣ ಮಾಡಿದೆ. ರಾಬಿನ್ ಹುಡ್‌ನಲ್ಲಿ ಕಿರೀಟಿ ರಾಜೇಂದ್ರ ಪ್ರಸಾದ್ ಹಾಗೂ ವನ್ನೆಲ ಕಿಶೋರ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮನದ ಕಡಲು
5

ಕನ್ನಡದಲ್ಲಿ ಯೋಗರಾಜ್ ಭಟ್ ನಿರ್ದೇಶನದ 'ಮನದ ಕಡಲು' ಸಿನಿಮಾ ಮಾರ್ಚ್ 28ರಂದು ಬಿಡುಗಡೆ ಆಗುತ್ತಿದೆ. ಚಿತ್ರದಲ್ಲಿ ಸುಮುಖ್ ನಾಯಕನಾಗಿ ಹಾಗೂ ರಾಶಿಕಾ ಶೆಟ್ಟಿ, ಅಂಜಲಿ ಅನೀಶ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಉಳಿದಂತೆ ನೇತ್ರಾ, ಶಿವಧ್ವಜ್, ರಂಗಾಯಣ ರಘು, ದತ್ತಣ್ಣ  ಮುಂತಾದವರು ತಾರಾಗಣದಲ್ಲಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ವಿ. ಹರಿಕೃಷ್ಣ ಸಂಗೀತ ಸಿನಿಮಾಗಿದೆ. ಈ ಸಿನಿಮಾವನ್ನು ಮುಂಗಾರು ಮಳೆ, ಮೊಗ್ಗಿನ ಮನಸು ಹಾಗೂ  ಮತ್ತೆ ಮುಂಗಾರು ಚಿತ್ರಗಳನ್ನು ನಿರ್ಮಿಸಿರುವ ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ ನಿರ್ಮಾಣ ಮಾಡಿದ್ದಾರೆ. ಇದೊಂದು ತ್ರಿಕೋನ ಪ್ರೇಮಕಥೆಯಾಗಿದ್ದು, ವೈದ್ಯನೊಬ್ಬನ ಜೀವನದ ಪ್ರೇಮ್ ಕಹಾನಿಯನ್ನು ಈ ಚಿತ್ರದಲ್ಲಿ ಭಟ್ರು ಬಿಚ್ಚಿಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+