ಕ್ರಾಂತಿ ಸಿನಿಮಾ ಸಾಂಗ್ ರಿಲೀಸ್ ವೇಳೆ ನಟ ದರ್ಶನ್ ಮೇಲೆ ಕಿಡಿಗೇಡಿ ಒಬ್ಬ ಚಪ್ಪಲಿ ಎಸೆದ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಚಿತ್ರರಂಗದ ತಾರೆಯರು, ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರರಂಗದ ದಿಗ್ಗಜ ನಟರಾದ ಶಿವರಾಜ್ಕುಮಾರ್, ಜಗ್ಗೇಶ್, ಸುದೀಪ್ ಸೇರಿದಂತೆ ಬಹುತೇಕ ಎಲ್ಲಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ದರ್ಶನ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಹಾಗಾದರೆ, ಕನ್ನಡ ಚಿತ್ರರಂಗದ ಯಾವ್ಯಾವ ನಟರು ಈ ಕುರಿತು ಏನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ.