ದೊಡ್ಮನೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಚ್ಛೇದನದ ಬಿರುಗಾಳಿ ಎದ್ದಿದೆ. ಇತ್ತೀಚೆಗೆ 'ಯುವ' ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟಿದ್ದ ಅಣ್ಣಾವ್ರ ಮೊಮ್ಮಗ, ರಾಘವೇಂದ್ರ ರಾಜ್ಕುಮಾರ್ ಅವರ ಕಿರಿಯ ಪುತ್ರ ಯುವ ರಾಜ್ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಈ ಮೂಲಕ ತಮ್ಮ ೪ ವರ್ಷದ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಇಲ್ಲಿ ಯುವ ಕೈಹಿಡಿದಿದ್ದ ಶ್ರೀದೇವಿ ಭೈರಪ್ಪ್ ಯಾರು? ಅವರ ಹಿನ್ನೆಲೆ ಏನು ಎಂಬ ಮಾಹಿತಿಯನ್ನು ನೀಡಲಾಗಿದೆ.